AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು

ಆರಂಭದಲ್ಲಿ ಬಿಗ್​ ಬಾಸ್​ ಮನೆ ಸೇರಿದ ಸ್ಪರ್ಧಿಗಳ ಜತೆ ರಘು ಗೌಡ ಅಷ್ಟಾಗಿ ಬೆರೆಯುತ್ತಿರಲಿಲ್ಲ. ನಂತರ ಜೋಡಿ ಟಾಸ್ಕ್​ ಒಂದರಲ್ಲಿ ಅವರು ವೈಷ್ಣವಿ ಜತೆಗೆ ಸೇರಿಕೊಂಡರು. ಅಲ್ಲಿಂದ ಇಬ್ಬರ ನಡುವೆ ಒಂದು ಗೆಳೆತನ ಬೆಳೆಯಿತು.

Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು
ರಘು ಗೌಡ-ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:May 27, 2021 | 3:37 PM

Share

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ತುಂಬಾನೇ ಆಪ್ತರಾಗಿದ್ದರು. ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿತ್ತು. ಆದರೆ, ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರ ವೈಷ್ಣವಿ ಉಲ್ಟಾ ಹೊಡೆದಿದ್ದಾರೆ! ರಘು ಅವರನ್ನು ಯಾರೂ ಫಾಲೋ ಮಾಡಬೇಡಿ ಎಂದು ಓಪನ್​ ಆಗಿಯೇ ಹೇಳಿದ್ದಾರೆ.

ಆರಂಭದಲ್ಲಿ ಬಿಗ್​ ಬಾಸ್​ ಮನೆ ಸೇರಿದ ಸ್ಪರ್ಧಿಗಳ ಜತೆ ರಘು ಗೌಡ ಅಷ್ಟಾಗಿ ಬೆರೆಯುತ್ತಿರಲಿಲ್ಲ. ನಂತರ ಜೋಡಿ ಟಾಸ್ಕ್​ ಒಂದರಲ್ಲಿ ಅವರು ವೈಷ್ಣವಿ ಜತೆಗೆ ಸೇರಿಕೊಂಡರು. ಅಲ್ಲಿಂದ ಇಬ್ಬರ ನಡುವೆ ಒಂದು ಗೆಳೆತನ ಬೆಳೆಯಿತು. ಈ ಗೆಳೆತನ ತುಂಬಾನೇ ಗಾಢವಾಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಮುಂಜಾನೆ ವೈಷ್ಣವಿ ಅಡುಗೆ ಮಾಡೋಕೆ ಕಿಚನ್​ಗೆ ತೆರಳುತ್ತಿದ್ದರು. ಈ ವೇಳೆ ಅಲ್ಲಿಗೆ ಹೋಗುತ್ತಿದ್ದ ರಘು, ವೈಷ್ಣವಿ ಜತೆ ಹರಟೆ ಹೊಡೆಯುತ್ತ, ಒಂದಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು. ಇನ್ನು ಇವರಿಬ್ಬರ ಫ್ರೆಂಡ್​ಶಿಪ್​ ನೋಡಿ ಮನೆಮಂದಿ ಉರಿದುಕೊಂಡಿದ್ದೂ ಇದೆ. ಇದಕ್ಕೆಲ್ಲ ವೈಷ್ಣವಿ ತಲೆಕೆಡಿಸಿಕೊಂಡಿಲ್ಲ. ಬದಲಿಗೆ ಸರಿಯಾಗಿ ಉತ್ತರ ನೀಡಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಶೂಟಿಂಗ್​ ನಿಲ್ಲಿಸಲಾಗಿದೆ. ಹೀಗಾಗಿ, ಬಿಗ್​ ಬಾಸ್ ಅರ್ಧಕ್ಕೆ ನಿಂತಿದ್ದು,​ ಸ್ಪರ್ಧಿಗಳು ಮನೆಯಿಂದ ಹೊರ ಬಂದು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ರಘು ಗೌಡ ಹಾಗೂ ವೈಷ್ಣವಿ ಇನ್​​ಸ್ಟಾಗ್ರಾಂ ಸ್ಟೋರಿಯಲ್ಲಿ ಪರಸ್ಪರ ಕಾಲೆಳೆದುಕೊಂಡಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿರುವ ರಘು, ‘ಓರ್ವ ಅದ್ಭುತ ವ್ಯಕ್ತಿಯನ್ನು ಫ್ರೆಂಡ್​ ಆಗಿ ಪಡೆದಿದ್ದಕ್ಕೆ ನಿಮಗೆ ಅಭಿನಂದನೆ’ ಎಂದು ವೈಷ್ಣವಿಯನ್ನು ಟ್ಯಾಗ್​ ಮಾಡಿದ್ದಾರೆ. ಇದನ್ನು ತಮ್ಮ ಸ್ಟೋರಿಯಲ್ಲಿ ಹಾಕಿಕೊಂಡಿರುವ ವೈಷ್ಣವಿ ಉತ್ತರ ನೀಡಿದ್ದಾರೆ. ‘ಈತ ನೋಡೋಕೆ ತುಂಬಾನೇ ಫನ್ನಿಯಾಗಿ ಅನಿಸುತ್ತದೆ. ಅತಿ ಬೇಗ 3 ಲಕ್ಷ ಹಿಂಬಾಲಕರನ್ನು ಹೊಂದುವ ಸಲುವಾಗಿ ರಘು ಈ ರೀತಿ ಮಾಡುತ್ತಿದ್ದಾನೆ. ಆತನನ್ನು ಯಾರೂ ಫಾಲೋ ಮಾಡಬೇಡಿ’ ಎಂದು ನಕ್ಕಿದ್ದಾರೆ. ಇದಕ್ಕೆ ರಘು, ದುಷ್ಮನ್​ ಕಹಾ ಹೈ ಅಂದ್ರೆ ಬಗಲ್​ಮೇ ಹೈ ಅಂದಂಗಾಯ್ತು ಎಂದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Bigg Boss: ಕೊವಿಡ್ ಪೂರ್ಣಗೊಂಡ ನಂತರ ಮುಂದುವರಿಯಲಿದೆ ಬಿಗ್​ ಬಾಸ್​; ವಾಹಿನಿಯಿಂದಲೇ ಅಧಿಕೃತ ಮಾಹಿತಿ

Published On - 3:03 pm, Thu, 27 May 21

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ