AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು

ಆರಂಭದಲ್ಲಿ ಬಿಗ್​ ಬಾಸ್​ ಮನೆ ಸೇರಿದ ಸ್ಪರ್ಧಿಗಳ ಜತೆ ರಘು ಗೌಡ ಅಷ್ಟಾಗಿ ಬೆರೆಯುತ್ತಿರಲಿಲ್ಲ. ನಂತರ ಜೋಡಿ ಟಾಸ್ಕ್​ ಒಂದರಲ್ಲಿ ಅವರು ವೈಷ್ಣವಿ ಜತೆಗೆ ಸೇರಿಕೊಂಡರು. ಅಲ್ಲಿಂದ ಇಬ್ಬರ ನಡುವೆ ಒಂದು ಗೆಳೆತನ ಬೆಳೆಯಿತು.

Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು
ರಘು ಗೌಡ-ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:May 27, 2021 | 3:37 PM

Share

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ತುಂಬಾನೇ ಆಪ್ತರಾಗಿದ್ದರು. ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿತ್ತು. ಆದರೆ, ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರ ವೈಷ್ಣವಿ ಉಲ್ಟಾ ಹೊಡೆದಿದ್ದಾರೆ! ರಘು ಅವರನ್ನು ಯಾರೂ ಫಾಲೋ ಮಾಡಬೇಡಿ ಎಂದು ಓಪನ್​ ಆಗಿಯೇ ಹೇಳಿದ್ದಾರೆ.

ಆರಂಭದಲ್ಲಿ ಬಿಗ್​ ಬಾಸ್​ ಮನೆ ಸೇರಿದ ಸ್ಪರ್ಧಿಗಳ ಜತೆ ರಘು ಗೌಡ ಅಷ್ಟಾಗಿ ಬೆರೆಯುತ್ತಿರಲಿಲ್ಲ. ನಂತರ ಜೋಡಿ ಟಾಸ್ಕ್​ ಒಂದರಲ್ಲಿ ಅವರು ವೈಷ್ಣವಿ ಜತೆಗೆ ಸೇರಿಕೊಂಡರು. ಅಲ್ಲಿಂದ ಇಬ್ಬರ ನಡುವೆ ಒಂದು ಗೆಳೆತನ ಬೆಳೆಯಿತು. ಈ ಗೆಳೆತನ ತುಂಬಾನೇ ಗಾಢವಾಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಮುಂಜಾನೆ ವೈಷ್ಣವಿ ಅಡುಗೆ ಮಾಡೋಕೆ ಕಿಚನ್​ಗೆ ತೆರಳುತ್ತಿದ್ದರು. ಈ ವೇಳೆ ಅಲ್ಲಿಗೆ ಹೋಗುತ್ತಿದ್ದ ರಘು, ವೈಷ್ಣವಿ ಜತೆ ಹರಟೆ ಹೊಡೆಯುತ್ತ, ಒಂದಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು. ಇನ್ನು ಇವರಿಬ್ಬರ ಫ್ರೆಂಡ್​ಶಿಪ್​ ನೋಡಿ ಮನೆಮಂದಿ ಉರಿದುಕೊಂಡಿದ್ದೂ ಇದೆ. ಇದಕ್ಕೆಲ್ಲ ವೈಷ್ಣವಿ ತಲೆಕೆಡಿಸಿಕೊಂಡಿಲ್ಲ. ಬದಲಿಗೆ ಸರಿಯಾಗಿ ಉತ್ತರ ನೀಡಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಶೂಟಿಂಗ್​ ನಿಲ್ಲಿಸಲಾಗಿದೆ. ಹೀಗಾಗಿ, ಬಿಗ್​ ಬಾಸ್ ಅರ್ಧಕ್ಕೆ ನಿಂತಿದ್ದು,​ ಸ್ಪರ್ಧಿಗಳು ಮನೆಯಿಂದ ಹೊರ ಬಂದು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ರಘು ಗೌಡ ಹಾಗೂ ವೈಷ್ಣವಿ ಇನ್​​ಸ್ಟಾಗ್ರಾಂ ಸ್ಟೋರಿಯಲ್ಲಿ ಪರಸ್ಪರ ಕಾಲೆಳೆದುಕೊಂಡಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿರುವ ರಘು, ‘ಓರ್ವ ಅದ್ಭುತ ವ್ಯಕ್ತಿಯನ್ನು ಫ್ರೆಂಡ್​ ಆಗಿ ಪಡೆದಿದ್ದಕ್ಕೆ ನಿಮಗೆ ಅಭಿನಂದನೆ’ ಎಂದು ವೈಷ್ಣವಿಯನ್ನು ಟ್ಯಾಗ್​ ಮಾಡಿದ್ದಾರೆ. ಇದನ್ನು ತಮ್ಮ ಸ್ಟೋರಿಯಲ್ಲಿ ಹಾಕಿಕೊಂಡಿರುವ ವೈಷ್ಣವಿ ಉತ್ತರ ನೀಡಿದ್ದಾರೆ. ‘ಈತ ನೋಡೋಕೆ ತುಂಬಾನೇ ಫನ್ನಿಯಾಗಿ ಅನಿಸುತ್ತದೆ. ಅತಿ ಬೇಗ 3 ಲಕ್ಷ ಹಿಂಬಾಲಕರನ್ನು ಹೊಂದುವ ಸಲುವಾಗಿ ರಘು ಈ ರೀತಿ ಮಾಡುತ್ತಿದ್ದಾನೆ. ಆತನನ್ನು ಯಾರೂ ಫಾಲೋ ಮಾಡಬೇಡಿ’ ಎಂದು ನಕ್ಕಿದ್ದಾರೆ. ಇದಕ್ಕೆ ರಘು, ದುಷ್ಮನ್​ ಕಹಾ ಹೈ ಅಂದ್ರೆ ಬಗಲ್​ಮೇ ಹೈ ಅಂದಂಗಾಯ್ತು ಎಂದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Bigg Boss: ಕೊವಿಡ್ ಪೂರ್ಣಗೊಂಡ ನಂತರ ಮುಂದುವರಿಯಲಿದೆ ಬಿಗ್​ ಬಾಸ್​; ವಾಹಿನಿಯಿಂದಲೇ ಅಧಿಕೃತ ಮಾಹಿತಿ

Published On - 3:03 pm, Thu, 27 May 21

Follow Us
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್