AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗೆಲ್ಲಾ ಮುಟ್ಟಿದ್ರೆ ಕಚ್ಚಿ ಬಿಡ್ತೀನಿ; ವೈಷ್ಣವಿ ಹೀಗೆ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೈಂಟ್​. ಅವರು ಬೇರೆಯವರ ಮೇಲೆ ರೇಗಾಡಿದ ಉದಹಾರಣೆ. ಅವರು, ಯಾರ ತಂಟೆಗೂ ಹೋದವರಲ್ಲ. ಈಗ ಅವರು ಬಿಗ್​ ಬಾಸ್​ ಮನೆಯಲ್ಲಿ ಸುದ್ದಿಯಲ್ಲಿದ್ದಾರೆ.

ಹಾಗೆಲ್ಲಾ ಮುಟ್ಟಿದ್ರೆ ಕಚ್ಚಿ ಬಿಡ್ತೀನಿ; ವೈಷ್ಣವಿ ಹೀಗೆ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on: Mar 19, 2021 | 10:02 PM

Share

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೈಂಟ್​. ಅವರು ಬೇರೆಯವರ ಮೇಲೆ ರೇಗಾಡಿದ ಉದಹಾರಣೆ. ಅವರು, ಯಾರ ತಂಟೆಗೂ ಹೋದವರಲ್ಲ. ಈ ವಿಚಾರ ವೀಕೆಂಡ್​ನಲ್ಲಿ ಕೂಡ ಚರ್ಚೆಗೆ ಕಾರಣವಾಗಿದ್ದಿದೆ. ಈ ಮಧ್ಯೆ, ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಅದು ಯಾರಿಗೆ? ಏಕೆ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಮನೆಯಲ್ಲಿ 19ನೇ ದಿನ. ಎಲ್ಲರೂ ಬೆಳಗ್ಗೆ ಎದ್ದು ಅವರವರ ಚಟುವಟಿಕೆಯಲ್ಲಿ ತೊಡಗಿದ್ದರು. ಈ ವೇಳೆ ಶುಭಾ ಪೂಂಜಾ ಹಾಗೂ ವೈಷ್ಣವಿ ಒಟ್ಟಾಗಿ ಮಾತನಾಡುತ್ತಿದ್ದರು. ವೈಷ್ಣವಿ ಆಗತಾನೇ ಸ್ನಾನ ಮಾಡಿ ಬಂದಿದ್ದರಿಂದ ಅವರಿಗೆ ತೊಂದರೆ ಕೊಡೋ ಕೆಲಸ ಮಾಡುತ್ತಿದ್ದರು. ಈ ಕೀಟಲೆ ಮುಂದುವರಿದೇ ಇತ್ತು.

ವೈಷ್ಣವಿ ಸಮೀಪ ಬಂದ ಸೈಲೆಂಟ್​ ಆಗಿ ಬಂದ ಶುಭಾ ತುಂಬಾನೇ ಕಚಗುಳಿ ಇಡುವ ಪ್ರಯತ್ನ ಮಾಡಿದ್ದಾರೆ. ಆದರೆ, ಅದು ವರ್ಕೌಟ್​ ಆಗಲೇ ಇಲ್ಲ. ಏಕೆಂದರೆ, ವೈಷ್ಣವಿ ಅವರಿಗೆ ಅದು ತಾಗಲೇ ಇಲ್ಲ. ಆಗ, ವೈಷ್ಣವಿ ಹೀಗೆ ಮುಡ್ತಾ ಇದ್ರೆ ಕಚ್ಚಿ ಬಿಡುತ್ತೇನೆ ಎನ್ನುವ ಎಚ್ಚರಿಕೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕಪ್​ ರಾಮಾಯಣ.. ದಿವ್ಯಾ ಸುರೇಶ್​ ಹಾಗೂ ಮಂಜು ಪಾವಗಡ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಅನ್ಯೋನ್ಯವಾಗಿರುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಒಬ್ಬರಿಗೊಬ್ಬರು ಜಗಳ ಆಡಿದ ಉದಾಹರಣೆ ತುಂಬಾನೇ ಕಡಿಮೆ. ಸಮಯ ಸಿಕ್ಕಾಗೆಲ್ಲ ಬಿಗ್​ ಬಾಸ್​ ಮನೆಯಲ್ಲಿ ಇವರು ಹರಟೆ ಹೊಡೆಯುತ್ತಿರುತ್ತಾರೆ. ಇಂದು (ಮಾರ್ಚ್​ 19) ಕೂಡ ಹಾಗೆಯೇ ಆಗಿದೆ.

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಹಾಗೂ ಮಂಜು ಮಾತನಾಡುತ್ತಿದ್ದರು. ಆಗ ಮಂಜು ಕಾಫಿ ಕಪ್​ ಇಡೋಕೆ ಹೋಗಿ ಕೆಳಕ್ಕೆ ಬೀಳಿಸಿದ್ದಾರೆ. ಆ ಕಪ್​ ಬಿದ್ದ ರಭಸಕ್ಕೆ ಒಡೆದೇ ಹೋಗಿದೆ. ಬಿಗ್​ ಬಾಸ್​ ಕೊಟ್ಟ ಕಪ್​ಅನ್ನು ಒಡೆದ ನಂತರ ಮಂಜುಗೆ ಅತೀವವಾಗಿ ಅಪರಾಧ ಮನೋಭಾವನೆ ಕಾಡಿದೆ.

ಕಪ್​ ಒಡೆದು ಹಾಕಿದ್ದಕ್ಕೆ ಸಾರಿ ಬಿಗ್​ ಬಾಸ್​. ದಯವಿಟ್ಟು ನನ್ನನ್ನು ಕ್ಷಮಿಸಿ ಬಿಗ್​ ಬಾಸ್​ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ. ನಾನು ಬೇಕಂತಲೇ ಇದನ್ನು ಒಡೆದಿಲ್ಲ. ಮಿಸ್​ ಆಗಿ ಬಿದ್ದು ಹೋಗಿದೆ. ಯಾರಿಗೂ ಗೊತ್ತಾಗದಂತೆ ಇದನ್ನು ಬಚ್ಚಿಡುತ್ತೇನೆ. ಆಮೇಲೆ ಸ್ಪರ್ಧಿಗಳ ಬಳಿ ನನ್ನ ಕಪ್​ ಎಲ್ಲಿದೆ ಎಂದು ಪ್ರಶ್ನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಘಟನೆಯನ್ನು ನೋಡಿ ದಿವ್ಯಾ ನಕ್ಕಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ