AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vakeel Saab: ವಕೀಲ್​ ಸಾಬ್​ ನೋಡಲು ಬಂದು ಥಿಯೇಟರ್​ಗೆ ಕಲ್ಲು ಹೊಡೆದ ಪವನ್​ ಕಲ್ಯಾಣ್​ ಫ್ಯಾನ್ಸ್​! ಕಾರಣ ಏನು?

Pawan Kalyan: ಪವನ್ ಕಲ್ಯಾಣ್​ ನಟನೆಯ ‘ವಕೀಲ್​ ಸಾಬ್​’ ಸಿನಿಮಾ ನೋಡಲು ಬಂದ ಹಲವು ಅಭಿಮಾನಿಗಳು ದಾಂಧಲೆ ಮಾಡಿದ್ದಾರೆ. ಚಿತ್ರಮಂದಿರದ ಕುರ್ಚಿ,‌ ಗಾಜು ಪುಡಿ‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vakeel Saab: ವಕೀಲ್​ ಸಾಬ್​ ನೋಡಲು ಬಂದು ಥಿಯೇಟರ್​ಗೆ ಕಲ್ಲು ಹೊಡೆದ ಪವನ್​ ಕಲ್ಯಾಣ್​ ಫ್ಯಾನ್ಸ್​! ಕಾರಣ ಏನು?
ಪವನ್​ ಕಲ್ಯಾಣ್​- ಅಭಿಮಾನಿಗಳಿಂದ ಚಿತ್ರಮಂದಿರದ ಗಾಜು ಪುಡಿ
ಮದನ್​ ಕುಮಾರ್​
| Updated By: Digi Tech Desk|

Updated on: Apr 09, 2021 | 2:05 PM

Share

ನಟ ಪವನ್​ ಕಲ್ಯಾಣ್​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅವರೆಲ್ಲರೂ ಇಂದು (ಏ.9) ವಕೀಲ್​ ಸಾಬ್​ ಸಿನಿಮಾ ನೋಡಲು ತುದಿಗಾಲಿನಲ್ಲಿ ನಿಂತು ಕಾದಿದ್ದರು. ಕೊರೊನಾ ವೈರಸ್​ ಎರಡನೇ ಅಲೆ ಭೀತಿ ನಡುವೆಯೂ ಎಲ್ಲರೂ ಚಿತ್ರಮಂದಿರಕ್ಕೆ ಮುಗಿ ಬಿದ್ದಿದ್ದಾರೆ. ಹಾಗಂತ ಸುಮ್ಮನೆ ಸಿನಿಮಾ ನೋಡಿ ಎಂಜಾಯ್​ ಮಾಡುವ ಬದಲು ಕೆಲವು ಅಭಿಮಾನಿಗಳು ದಾಂಧಲೆ ಮಾಡಿದ್ದಾರೆ! ಇದರಿಂದ ಚಿತ್ರಮಂದಿರಕ್ಕೆ ಹಾನಿ ಆಗಿದೆ.

‘ಅಜ್ಞಾತವಾಸಿ’ ಬಿಡುಗಡೆಯಾದ ಬಳಿಕ ಪವನ್​ ನಟನೆಯ ಬೇರೆ ಯಾವುದೇ ಚಿತ್ರಗಳು ಬಂದಿರಲಿಲ್ಲ. ಹಾಗಾಗಿ ಮೂರು ವರ್ಷಗಳ ನಂತರ ಪವನ್​ ಕಲ್ಯಾಣ್​ ಸಿನಿಮಾ ತೆರೆಕಾಣುತ್ತಿರುವುದರಿಂದ ಅಭಿಮಾನಿಗಳಲ್ಲಿ ಭಾರಿ ಉತ್ಸಾಹವಿತ್ತು. ಕಟೌಟ್​ಗೆ ಹಾಲಿನ ಅಭಿಷೇಕ್​ ಮಾಡಿ ಸಂಭ್ರಮದಿಂದ ಕಾಯುತ್ತಿದ್ದರು. ಆದರೆ ಕೆಲವು ಕಡೆಗಳಲ್ಲಿ ಚಿತ್ರ ಪ್ರದರ್ಶನಕ್ಕೆ ತಡವಾದ‌ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್​ ಅಭಿಮಾನಿಗಳು ದಾಂಧಲೆ ಮಾಡಿದ್ದಾರೆ! ಚಿತ್ರಮಂದಿರದ ಕುರ್ಚಿ,‌ ಗಾಜು ಪುಡಿ‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂಧ್ರದ‌ ತಿರುಪತಿಯ 5 ಚಿತ್ರಮಂದಿರಗಳಲ್ಲಿ ಮತ್ತು ಕಡಪಾ‌ ಜಿಲ್ಲೆಯ ಬದ್ವೇಲ್ ನಗರದಲ್ಲಿ ಚಿತ್ರ ಪ್ರದರ್ಶನ‌ ವಿಳಂಬ ಆಯಿತು. ಇದರಿಂದ ಕೋಪಗೊಂಡ ಅಭಿಮಾನಿಗಳು ಪುಂಡಾಟಿಕೆ ಮೆರೆದಿದ್ದಾರೆ. ತಿರುಪತಿಯ ಶಾಂತಿ, ಸಂಧ್ಯಾ ಚಿತ್ರಮಂದಿರಗಳ ಪೀಠೋಪಕರಣ ಮತ್ತು ಕಿಟಕಿ-ಬಾಗಿಲಿನ ಗಾಜುಗಳನ್ನು ಒಡೆದುಹಾಕಿದ್ದಾರೆ. ನಂತರ ಪುಂಡ‌ ಅಭಿಮಾನಿಗಳನ್ನು‌ ಹೊರಗೆ ಕಳುಹಿಸಿ ಚಿತ್ರ ಪ್ರದರ್ಶನ ಮುಂದುವರಿಸಲಾಯಿತು.

ಕೆಲವು ದಿನಗಳ ಹಿಂದೆ ಈ ಸಿನಿಮಾ ಟ್ರೇಲರ್​ ಬಿಡುಗಡೆ ಆಗಿತ್ತು. ತೆಲಂಗಾಣದ ಕೆಲವು ಆಯ್ದ ಚಿತ್ರಮಂದಿರಗಳಲ್ಲಿ ಟ್ರೇಲರ್​ ಬಿತ್ತರಿಸಲಾಯಿತು. ಆಗಲೂ ಸಹ ಪವನ್​ ಕಲ್ಯಾಣ್​ ಅಭಿಮಾನಿಗಳು ಚಿತ್ರಮಂದಿರದ ಬಾಗಿಲಿನ ಗಾಜು ಒಡೆದು ಹಾಕಿದ್ದರು. ಈಗ ಮತ್ತೆ ಅದೇ ಚಾಳಿ ಮುಂದುವರಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಅಭಿಮಾನಿಗಳು ‘ವಕೀಲ್​ ಸಾಬ್​’ ಕಂಡು ಫಿದಾ ಆಗಿದ್ದಾರೆ. ಇನ್ನೂ ಕೆಲವರು ಇದು ಪವನ್​ ಕಲ್ಯಾಣ್​ ಅವರ ಅತಿ ಕೆಟ್ಟ ಸಿನಿಮಾ ಎಂದು ತೆಗಳುತ್ತಿದ್ದಾರೆ.

ಬಾಲಿವುಡ್​ನ ಪಿಂಕ್​ ಸಿನಿಮಾದ ತೆಲುಗು ರಿಮೇಕ್​ ಆಗಿ ‘ವಕೀಲ್​ ಸಾಬ್​’ ಮೂಡಿಬಂದಿದೆ. ಹಿಂದಿಯಲ್ಲಿ ಅಮಿತಾಭ್​ ಬಚ್ಚನ್​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ಪವನ್​ ಕಲ್ಯಾಣ್​ ಮಾಡಿದ್ದಾರೆ. ಲಾಯರ್​ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಪ್ರಕಾಶ್​ ರೈ, ಶ್ರುತಿ ಹಾಸನ್​, ನಿವೇತಾ ಥಾಮಸ್​, ಅಂಜಲಿ, ಅನನ್ಯಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Vakeel Saab Review: ವಕೀಲ್​ ಸಾಬ್​ ಟ್ವಿಟರ್​ ವಿಮರ್ಶೆ; ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟವಾಯ್ತಾ?

( Vakeel Saab actor Pawan Kalyan fans pelt stones at movie theaters)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ