AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಣವಿಕ್ರಮ’ ನಟಿ ಅಂಜಲಿ ಗುಟ್ಟಾಗಿ ಮದುವೆ ಆಗ್ತಾರಾ? ಜೋರಾಗಿ ಹಬ್ಬಿದೆ ಗುಸುಗುಸು

ಸದ್ಯಕ್ಕಂತೂ ಲಾಕ್​ಡೌನ್​ ಕಾರಣದಿಂದ ಎಲ್ಲ ಸಿನಿಮಾ ಕೆಲಸಗಳು ಸ್ಥಗಿತಗೊಂಡಿವೆ. ಶೂಟಿಂಗ್​ಗೆ ಬಹುತೇಕ ಕಡೆಗಳಲ್ಲಿ ಅನುಮತಿ ಇಲ್ಲ. ಹಾಗಾಗಿ ಈ ಬಿಡುವಿನ ಸಂದರ್ಭದಲ್ಲಿ ನಟಿ ಅಂಜಲಿ ಹಸೆಮಣೆ ಏರುತ್ತಾರೆ ಎಂಬ ಗಾಳಿ ಸುದ್ದಿ ಹಬ್ಬಿದೆ.

‘ರಣವಿಕ್ರಮ’ ನಟಿ ಅಂಜಲಿ ಗುಟ್ಟಾಗಿ ಮದುವೆ ಆಗ್ತಾರಾ? ಜೋರಾಗಿ ಹಬ್ಬಿದೆ ಗುಸುಗುಸು
ಅಂಜಲಿ
ಮದನ್​ ಕುಮಾರ್​
| Edited By: |

Updated on: Jun 06, 2021 | 3:07 PM

Share

ಈ ಲಾಕ್​ಡೌನ್​ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಗುಟ್ಟಾಗಿ ಹಸೆಮಣೆ ಏರುತ್ತಿದ್ದಾರೆ. ಕನ್ನಡದ ನಟಿ ಪ್ರಣಿತಾ ಸುಭಾಷ್​, ಬಾಲಿವುಡ್​ ಬೆಡಗಿ ಯಾಮಿ ಗೌತಮ್​ ಇತ್ತೀಚೆಗಷ್ಟೇ ಸೀಕ್ರೆಟ್​ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆ ಫೋಟೋ ವೈರಲ್​ ಆದ ಬಳಿಕವೇ ಆ ವಿಷಯ ಬಹಿರಂಗ ಆಯಿತು. ಈಗ ಬಹುಭಾಷಾ ನಟಿ ಅಂಜಲಿ ಬಗ್ಗೆಯೂ ಅನುಮಾನ ಕಾಡಲಾರಂಭಿಸಿದೆ. ಕನ್ನಡದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ‘ರಣವಿಕ್ರಮ’ ಸಿನಿಮಾದಲ್ಲಿ ನಟಿಸಿದ್ದ ಅಂಜಲಿ ಮದುವೆ ಬಗ್ಗೆ ಗಾಸಿಪ್​ ಹಬ್ಬಿದೆ.

ತಮಿಳು ನಟ ಜೈ ಜೊತೆ ಅಂಜಲಿ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಮಾತಿದೆ. ಎರಡು ವರ್ಷಗಳ ಕಾಲ ಅವರು ಲಿವ್​ ಇನ್​ ರಿಲೇಶನ್​ಶಿಪ್​ನಲ್ಲಿ ಇದ್ದ ಬಗ್ಗೆಯೂ ಸುದ್ದಿ ಹರಡಿತ್ತು. ಸದ್ಯಕ್ಕಂತೂ ಲಾಕ್​ಡೌನ್​ ಕಾರಣದಿಂದ ಎಲ್ಲ ಸಿನಿಮಾ ಕೆಲಸಗಳು ಸ್ಥಗಿತಗೊಂಡಿವೆ. ಶೂಟಿಂಗ್​ಗೆ ಬಹುತೇಕ ಕಡೆಗಳಲ್ಲಿ ಅನುಮತಿ ಇಲ್ಲ. ಹಾಗಾಗಿ ಈ ಬಿಡುವಿನ ಸಂದರ್ಭದಲ್ಲಿ ಅಂಜಲಿ ಕೂಡ ಹಸೆಮಣೆ ಏರುತ್ತಾರೆ ಎಂಬ ಗಾಳಿ ಸುದ್ದಿ ಹಬ್ಬಿದೆ. ಆದರೆ ಈ ಮಾತಿನಲ್ಲಿ ಹುರುಳಿಲ್ಲ ಎಂದು ಕೂಡ ಹೇಳಲಾಗುತ್ತಿದೆ. ಆದರೂ ಸ್ವತಃ ಅಂಜಲಿ ಸ್ಪಷ್ಟನೆ ನೀಡುವವರೆಗೆ ಯಾವುದನ್ನೂ ನಂಬುವಂತಿಲ್ಲ.

ಈ ವರ್ಷ ತೆರೆಕಂಡ ‘ವಕೀಲ್​ ಸಾಬ್’​ ಸಿನಿಮಾದಲ್ಲಿ ಅಂಜಲಿ ನಟಿಸಿದ್ದರು. ಪವನ್​ ಕಲ್ಯಾಣ್​ ಜೊತೆ ತೆರೆಹಂಚಿಕೊಳ್ಳುವ ಅವಕಾಶವನ್ನು ಅವರು ಚೆನ್ನಾಗಿ ಉಪಯೋಗಿಸಿಕೊಂಡಿದ್ದರು. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ತಮ್ಮ ಮದುವೆ ಗಾಸಿಪ್​ ಬಗ್ಗೆ ಮಾತನಾಡಿದ್ದರು. ‘ಈಗ ನಾನು ಕೆಲಸದ ಮೇಲೆ ಗಮನ ಹರಿಸಿದ್ದೇನೆ. ಮದುವೆ ಪ್ಲ್ಯಾನ್​ ಸದ್ಯಕ್ಕಂತೂ ಇಲ್ಲ. ನಟನೆಗೆ ಹೆಚ್ಚು ಪ್ರಾಮುಖ್ಯತೆ ಇರುವಂತಹ ಸಿನಿಮಾಗಳಲ್ಲಿ ನಟಿಸಬೇಕು ಎಂದುಕೊಂಡಿದ್ದೇನೆ’ ಅಂತ ಅವರು ಹೇಳಿದ್ದರು. ಅಷ್ಟರ ನಂತರವೂ ಪದೇಪದೇ ಅವರ ಮದುವೆ ಗಾಸಿಪ್​ ಯಾಕೆ ಹಬ್ಬುತ್ತಿದೆಯೋ ಗೊತ್ತಿಲ್ಲ.

ಕಳೆದ ವರ್ಷ ತೆರೆಕಂಡ ‘ಪಾವ ಕಥೈಗಳ್​’ ಸಿನಿಮಾದಲ್ಲಿ ಅಂಜಲಿ ಬೋಲ್ಡ್​ ಆಗಿ ಕಾಣಿಸಿಕೊಂಡು ಸುದ್ದಿ ಆಗಿದ್ದರು. ನೆಟ್​ಫ್ಲಿಕ್ಸ್​ನಲ್ಲಿ ನೇರವಾಗಿ ಈ ಸಿನಿಮಾ ತೆರೆಕಂಡಿತ್ತು.

ಇದನ್ನೂ ಓದಿ:

ಮದುವೆಯಾದ ಪ್ರಣಿತಾಗೆ ಶುಭಕೋರಿದ ಶಿಲ್ಪಾ ಶೆಟ್ಟಿ; ಇಬ್ಬರ ನಡುವೆ ಗೆಳೆತನ ಬೆಳೆದಿದ್ದು ಹೇಗೆ?

Pranitha Marriage: ಪ್ರಣಿತಾ ಮದುವೆ ಬಳಿಕ ರಮ್ಯಾ ಕಡೆಗೆ ಪ್ರಶ್ನೆ ಎಸೆದ ಅಭಿಮಾನಿಗಳು​; ಏನಿದು ಲಿಂಕ್​?

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ