AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Are You A Virgin ಎಂದು ಕೇಳಿದ್ರು ನಟ ಪವನ್​ ಕಲ್ಯಾಣ್​!

ಇಂದು ಸಂಜೆ ಚಿತ್ರದ ವಕೀಲ್​ ಸಾಬ್​ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ. ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆ, ಅತ್ಯಾಚಾರ, ಕಿರುಕುಳದ ಬಗ್ಗೆ ಹೇಗೆ ಧ್ವನಿ ಎತ್ತ ಬೇಕು ಎನ್ನುವ ಬಗ್ಗೆ ಹೇಳಲಾಗುತ್ತಿದೆ.

Are You A Virgin ಎಂದು ಕೇಳಿದ್ರು ನಟ ಪವನ್​ ಕಲ್ಯಾಣ್​!
ನಟ ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
| Edited By: |

Updated on: Mar 29, 2021 | 9:13 PM

Share

2018ರಲ್ಲಿ ತೆರೆಕಂಡ ‘ಅಜ್ಞಾತವಾಸಿ’ ಸಿನಿಮಾ ನಂತರ ಪವನ್​ ಕಲ್ಯಾಣ್​ ಚಿತ್ರರಂಗದಿಂದ ದೂರವೇ ಉಳಿದುಕೊಂಡಿದ್ದರು. ಈಗ ಅವರು ಚಿತ್ರರಂಗಕ್ಕೆ ಮತ್ತೆ ಕಂಬ್ಯಾಕ್​ ಮಾಡುತ್ತಿದ್ದಾರೆ. ಅವರ ನಟನೆಯ ‘ವಕೀಲ್​ ಸಾಬ್​’ ಸಿನಿಮಾದ ಟ್ರೇಲರ್​ ಕೂಡ ರಿಲೀಸ್​ ಆಗಿದ್ದು, ಪವನ್​ ಕಲ್ಯಾಣ್​ ವಕೀಲರಾಗಿ ಕಾಣಿಸಿಕೊಂಡಿದ್ದಾರೆ. ಇಂದು ಸಂಜೆ ವಕೀಲ್​ ಸಾಬ್​ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ. ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆ, ಅತ್ಯಾಚಾರ, ಕಿರುಕುಳದ ಬಗ್ಗೆ ಹೇಗೆ ಧ್ವನಿ ಎತ್ತಬೇಕು ಎನ್ನುವ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ ಎಂಬುದನ್ನು ಟ್ರೇಲರ್​ನಲ್ಲಿ ಸೂಕ್ಷ್ಮವಾಗಿ ಹೇಳಲಾಗಿದೆ.

ಮೂರು ಯುವತಿಯರು ಯುವಕರ ಜತೆ ಪಾರ್ಟಿಗೆ ತೆರಳುತ್ತಾರೆ. ಅಲ್ಲಿ ಅವರು ಲೈಂಗಿಕ ಕಿರುಕುಳ ಎದುರಿಸುತ್ತಾರೆ. ಈ ಪ್ರಕರಣ ಕೋರ್ಟ್​ ಮೆಟ್ಟಿಲೇರುತ್ತದೆ. ಸಂತ್ರಸ್ತೆಯರ ಪರವಾಗಿ ಪವನಲ್​ ಕಲ್ಯಾಣ್​ ವಾದ ಮಂಡಿಸುತ್ತಾರೆ. ಇದಿಷ್ಟು ವಿಚಾರಗಳನ್ನು ಟ್ರೇಲರ್​ ಕಟ್ಟಿಕೊಡುತ್ತಿದೆ.

ಪವನ್​ ಕಲ್ಯಾಣ್​ ಖಡಕ್​ ವಕೀಲರಾಗಿ ಕಾಣಿಸಿಕೊಂಡಿದ್ದಾರೆ. ಅವರ ಚಿತ್ರ ಎಂದರೆ ಆ್ಯಕ್ಷನ್​ಗಳಿಗೆ ಬರ ಇರುವುದಿಲ್ಲ. ಈ ಸಿನಿಮಾದಲ್ಲೂ ಸಾಕಷ್ಟು ಆ್ಯಕ್ಷನ್​ಗಳು ಇರಲಿವೆ ಎನ್ನಲಾಗಿತ್ತು. ಟ್ರೇಲರ್​ನಲ್ಲಿ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಸಂತ್ರಸ್ತೆಗೆ ಪ್ರತಿವಾದಿ ವಕೀಲರು Are You A Virgin ಎಂದು ಕೇಳಿರುತ್ತಾರೆ. ಅದೇ ರೀತಿ, ಕಿರುಕುಳ ನೀಡಿದ ಆರೋಪಿಗೆ ಇದೇ ಪ್ರಶ್ನೆ ಕೇಳಿದ್ದಾರೆ ಪವನ್​ ಕಲ್ಯಾಣ್​. ಟ್ರೇಲರ್ ರಿಲೀಸ್​ ಆದ ಎರಡೇ ಗಂಟೆಗೆ  ಸುಮಾರು 15 ಲಕ್ಷ ವೀಕ್ಷಣೆ ಕಂಡಿರುವುದು ವಿಶೇಷ.

ಹಿಂದಿಯಲ್ಲಿ ತೆರೆಕಂಡಿದ್ದ ಪಿಂಕ್​ ಸಿನಿಮಾದ ರಿಮೇಕ್​ ವಕೀಲ್​ ಸಾಬ್​ ಚಿತ್ರ. ಅಮಿತಾಭ್​ ಮುಖ್ಯಭೂಮಿಕೆ ನಿರ್ವಹಿಸಿದ್ದ ಈ ಚಿತ್ರವನ್ನು ವೇಣು ಶ್ರೀರಾಮ್​ ತೆಲುಗಿಗೆ ರಿಮೇಕ್​ ಮಾಡಿದ್ದಾರೆ. ಪವನ್​ ಕಲ್ಯಾಣ್​ ಹಾಗೂ ಪ್ರಕಾಶ್​ ರೈ ವಕೀಲರಾಗಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 09ರಂದು ಸಿನಿಮಾ ತೆರೆಗೆ ಬರುತ್ತಿದೆ. ಸದ್ಯ ಟ್ರೇಲರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ನೆಚ್ಚಿನ ನಟ ಪವನ್ ಕಲ್ಯಾಣ್‌ ಹುಟ್ಟುಹಬ್ಬಕ್ಕೆ ಪೋಸ್ಟರ್ ಹಾಕಲು ಹೋಗಿ ಮೂವರ ಸಾವು

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?