AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್

Pawan Kalyan: ಟಾಲಿವುಡ್ ಸಿನಿಪ್ರಿಯರು ಸ್ಟಾರ್ ನಟರನ್ನು ಆರಾಧಿಸುತ್ತಾರೆ. ಕೆಲವೊಮ್ಮೆ ಅದು ಅತಿರೇಕ ಆಗುವುದೂ ಉಂಟು! ಅದಕ್ಕೆ ಈಗೊಂದು ಲೇಟೆಸ್ಟ್ ಉದಾಹರಣೆ ಸಿಕ್ಕಿದೆ.

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್
ಪವರ್ ಸ್ಟಾರ್ ಪವನ್ ಕಲ್ಯಾಣ್
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Mar 30, 2021 | 4:08 PM

Share

ನಟ ಪವನ್ ಕಲ್ಯಾಣ್ ಅವರು ಆಂಧ್ರ ಮತ್ತು ತೆಲಂಗಾಣ ಮಾತ್ರವಲ್ಲದೆ, ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ರಾಜಕೀಯ ಮತ್ತು ಸಿನಿಮಾದಲ್ಲಿ ತೊಡಗಿಕೊಂಡಿರುವ ಪವನ್ ಕಲ್ಯಾಣ್ ಈ ಎರಡೂ ಕ್ಷೇತ್ರದಲ್ಲೂ ಅಪಾರ ಬೆಂಬಲಿಗರನ್ನು ಹೊಂದಿದ್ದಾರೆ. ಇತ್ತೀಚೆಗೆ ಅವರ ಅಭಿಮಾನಿಗಳು ಚಿತ್ರಮಂದಿರದ ಗಾಜುಗಳನ್ನು ಪುಡಿ ಮಾಡಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ವಕೀಲ್ ಸಾಬ್’ ಸಿನಿಮಾದ ಟ್ರೇಲರ್!

ಪವನ್ ಕಲ್ಯಾಣ್ ಅಭಿನಯದ ಯಾವುದೇ ಸಿನಿಮಾ ಬಿಡುಗಡೆಯಾದರೂ ಮೊದಲ ದಿನ ಚಿತ್ರಮಂದಿರಲ್ಲಿ ಸಿಕ್ಕಾಪಟ್ಟೆ ನೂಕುನುಗ್ಗಲು ಆಗುವುದು ಸಹಜ. ಆದರೆ ಈಗ ಕೇವಲ ಒಂದು ಟ್ರೇಲರ್ ನೋಡಲು ಕೂಡ ಅವರ ಅಭಿಮಾನಿಗಳು ಥಿಯೇಟರ್ಗೆ ಮುಗಿಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಚಿತ್ರಮಂದಿರಕ್ಕೆ ಹಾನಿ ಮಾಡಲಾಗಿದೆ. ಅದರ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಪವನ್ ಕಲ್ಯಾಣ್ ನಟನೆಯ ಬಹುನಿರೀಕ್ಷಿತ ವಕೀಲ್ ಸಾಬ್ಸಿನಿಮಾದ ಟ್ರೇಲರ್ ಸೋಮವಾರ (ಮಾ.29) ಬಿಡುಗಡೆ ಆಗಿದೆ. ಆಂಧ್ರ ಮತ್ತು ತೆಲಂಗಾಣದ ಕೆಲವು ಚಿತ್ರಮಂದಿರಗಳಲ್ಲಿ ಈ ಟ್ರೇಲರ್ ಅನ್ನು ಬಿತ್ತರಿಸಲಾಯಿತು. ಆ ವೇಳೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎಷ್ಟರಮಟ್ಟಿಗೆಂದರೆ, ಥಿಯೇಟರ್​​ನ ಗಾಜಿನ ಬಾಗಿಲುಗಳನ್ನು ಒಡೆದ ಹಾಕಿ ನುಗ್ಗಿದ್ದಾರೆ. ಚಿಕ್ಕದೊಂದು ಟ್ರೇಲರ್ ನೋಡಲು ಅಭಿಮಾನಿಗಳು ಈ ಪರಿ ಮುಗಿಬಿದ್ದಿರುವುದು ಅಚ್ಚರಿ. ಇನ್ನು ಸಿನಿಮಾ ರಿಲೀಸ್ ಆದರೆ ಏನ್ ಕಥೆ?

ವಕೀಲ್ ಸಾಬ್ ಸಿನಿಮಾದಲ್ಲಿ ಪವನ್ ಕಲ್ಯಾಣ್ ಅವರು ಲಾಯರ್ ಪಾತ್ರ ಮಾಡಿದ್ದಾರೆ. ಅಂದಹಾಗೆ, ಇದು ಹಿಂದಿಯ ‘ಪಿಂಕ್’ ಸಿನಿಮಾದ ರಿಮೇಕ್. ಮೂಲ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮಾಡಿದ ಪಾತ್ರವನ್ನು ಈಗ ಪವನ್ ಕಲ್ಯಾಣ್ ನಿಭಾಯಿಸಿದ್ದಾರೆ. ಅನ್ಯಾಯಕ್ಕೆ ಒಳಗಾದ ಮೂವರು ಯುವತಿಯರಿಗೆ ಕಥಾನಾಯಕ ನ್ಯಾಯ ಕೊಡಿಸುವ ಕೋರ್ಟ್ ರೂಮ್ ಡ್ರಾಮಾವನ್ನು ಈ ಸಿನಿಮಾ ಒಳಗೊಂಡಿದೆ. ಏ.9ರಂದು ‘ವಕೀಲ್ ಸಾಬ್’ ಬಿಡುಗಡೆ ಆಗಲಿದೆ. ನಿವೇತಾ ಥಾಮಸ್, ಅಂಜಲಿ, ಅನನ್ಯಾ, ಪ್ರಕಾಶ್ ರೈ ಮುಂತಾದವರು ಮುಖ್ಯಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ನೆಚ್ಚಿನ ನಟ ಪವನ್ ಕಲ್ಯಾಣ್‌ ಹುಟ್ಟುಹಬ್ಬಕ್ಕೆ ಪೋಸ್ಟರ್ ಹಾಕಲು ಹೋಗಿ ಮೂವರ ಸಾವು

ನೆಚ್ಚಿನ ನಟ ಪವನ್ ಕಲ್ಯಾಣ್‌ ಹುಟ್ಟುಹಬ್ಬಕ್ಕೆ ಪೋಸ್ಟರ್ ಹಾಕಲು ಹೋಗಿ ಮೂವರ ಸಾವು

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ