AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್

Pawan Kalyan: ಟಾಲಿವುಡ್ ಸಿನಿಪ್ರಿಯರು ಸ್ಟಾರ್ ನಟರನ್ನು ಆರಾಧಿಸುತ್ತಾರೆ. ಕೆಲವೊಮ್ಮೆ ಅದು ಅತಿರೇಕ ಆಗುವುದೂ ಉಂಟು! ಅದಕ್ಕೆ ಈಗೊಂದು ಲೇಟೆಸ್ಟ್ ಉದಾಹರಣೆ ಸಿಕ್ಕಿದೆ.

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್
ಪವರ್ ಸ್ಟಾರ್ ಪವನ್ ಕಲ್ಯಾಣ್
ಮದನ್​ ಕುಮಾರ್​
| Edited By: |

Updated on: Mar 30, 2021 | 4:08 PM

Share

ನಟ ಪವನ್ ಕಲ್ಯಾಣ್ ಅವರು ಆಂಧ್ರ ಮತ್ತು ತೆಲಂಗಾಣ ಮಾತ್ರವಲ್ಲದೆ, ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ರಾಜಕೀಯ ಮತ್ತು ಸಿನಿಮಾದಲ್ಲಿ ತೊಡಗಿಕೊಂಡಿರುವ ಪವನ್ ಕಲ್ಯಾಣ್ ಈ ಎರಡೂ ಕ್ಷೇತ್ರದಲ್ಲೂ ಅಪಾರ ಬೆಂಬಲಿಗರನ್ನು ಹೊಂದಿದ್ದಾರೆ. ಇತ್ತೀಚೆಗೆ ಅವರ ಅಭಿಮಾನಿಗಳು ಚಿತ್ರಮಂದಿರದ ಗಾಜುಗಳನ್ನು ಪುಡಿ ಮಾಡಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ವಕೀಲ್ ಸಾಬ್’ ಸಿನಿಮಾದ ಟ್ರೇಲರ್!

ಪವನ್ ಕಲ್ಯಾಣ್ ಅಭಿನಯದ ಯಾವುದೇ ಸಿನಿಮಾ ಬಿಡುಗಡೆಯಾದರೂ ಮೊದಲ ದಿನ ಚಿತ್ರಮಂದಿರಲ್ಲಿ ಸಿಕ್ಕಾಪಟ್ಟೆ ನೂಕುನುಗ್ಗಲು ಆಗುವುದು ಸಹಜ. ಆದರೆ ಈಗ ಕೇವಲ ಒಂದು ಟ್ರೇಲರ್ ನೋಡಲು ಕೂಡ ಅವರ ಅಭಿಮಾನಿಗಳು ಥಿಯೇಟರ್ಗೆ ಮುಗಿಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಚಿತ್ರಮಂದಿರಕ್ಕೆ ಹಾನಿ ಮಾಡಲಾಗಿದೆ. ಅದರ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಪವನ್ ಕಲ್ಯಾಣ್ ನಟನೆಯ ಬಹುನಿರೀಕ್ಷಿತ ವಕೀಲ್ ಸಾಬ್ಸಿನಿಮಾದ ಟ್ರೇಲರ್ ಸೋಮವಾರ (ಮಾ.29) ಬಿಡುಗಡೆ ಆಗಿದೆ. ಆಂಧ್ರ ಮತ್ತು ತೆಲಂಗಾಣದ ಕೆಲವು ಚಿತ್ರಮಂದಿರಗಳಲ್ಲಿ ಈ ಟ್ರೇಲರ್ ಅನ್ನು ಬಿತ್ತರಿಸಲಾಯಿತು. ಆ ವೇಳೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎಷ್ಟರಮಟ್ಟಿಗೆಂದರೆ, ಥಿಯೇಟರ್​​ನ ಗಾಜಿನ ಬಾಗಿಲುಗಳನ್ನು ಒಡೆದ ಹಾಕಿ ನುಗ್ಗಿದ್ದಾರೆ. ಚಿಕ್ಕದೊಂದು ಟ್ರೇಲರ್ ನೋಡಲು ಅಭಿಮಾನಿಗಳು ಈ ಪರಿ ಮುಗಿಬಿದ್ದಿರುವುದು ಅಚ್ಚರಿ. ಇನ್ನು ಸಿನಿಮಾ ರಿಲೀಸ್ ಆದರೆ ಏನ್ ಕಥೆ?

ವಕೀಲ್ ಸಾಬ್ ಸಿನಿಮಾದಲ್ಲಿ ಪವನ್ ಕಲ್ಯಾಣ್ ಅವರು ಲಾಯರ್ ಪಾತ್ರ ಮಾಡಿದ್ದಾರೆ. ಅಂದಹಾಗೆ, ಇದು ಹಿಂದಿಯ ‘ಪಿಂಕ್’ ಸಿನಿಮಾದ ರಿಮೇಕ್. ಮೂಲ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮಾಡಿದ ಪಾತ್ರವನ್ನು ಈಗ ಪವನ್ ಕಲ್ಯಾಣ್ ನಿಭಾಯಿಸಿದ್ದಾರೆ. ಅನ್ಯಾಯಕ್ಕೆ ಒಳಗಾದ ಮೂವರು ಯುವತಿಯರಿಗೆ ಕಥಾನಾಯಕ ನ್ಯಾಯ ಕೊಡಿಸುವ ಕೋರ್ಟ್ ರೂಮ್ ಡ್ರಾಮಾವನ್ನು ಈ ಸಿನಿಮಾ ಒಳಗೊಂಡಿದೆ. ಏ.9ರಂದು ‘ವಕೀಲ್ ಸಾಬ್’ ಬಿಡುಗಡೆ ಆಗಲಿದೆ. ನಿವೇತಾ ಥಾಮಸ್, ಅಂಜಲಿ, ಅನನ್ಯಾ, ಪ್ರಕಾಶ್ ರೈ ಮುಂತಾದವರು ಮುಖ್ಯಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ನೆಚ್ಚಿನ ನಟ ಪವನ್ ಕಲ್ಯಾಣ್‌ ಹುಟ್ಟುಹಬ್ಬಕ್ಕೆ ಪೋಸ್ಟರ್ ಹಾಕಲು ಹೋಗಿ ಮೂವರ ಸಾವು

ನೆಚ್ಚಿನ ನಟ ಪವನ್ ಕಲ್ಯಾಣ್‌ ಹುಟ್ಟುಹಬ್ಬಕ್ಕೆ ಪೋಸ್ಟರ್ ಹಾಕಲು ಹೋಗಿ ಮೂವರ ಸಾವು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ