AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ್​ ಸಾಬ್​ ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪವನ್ ಕಲ್ಯಾಣ್​

ಹಿಂದಿಯ ಪಿಂಕ್​ ಚಿತ್ರದ ತೆಲುಗು ರಿಮೇಕ್​ ಆಗಿ ವಕೀಲ್​ ಸಾಬ್​ ಮೂಡಿ ಬಂದಿದೆ. ಬಾಲಿವುಡ್​ನಲ್ಲಿ ಅಮಿತಾಭ್​ ಬಚ್ಚನ್​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ಪವನ್​ ಕಲ್ಯಾಣ್​ ಮಾಡಿದ್ದಾರೆ.  

ವಕೀಲ್​ ಸಾಬ್​ ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪವನ್ ಕಲ್ಯಾಣ್​
ಪವನ್​ ಕಲ್ಯಾಣ್​
ರಾಜೇಶ್ ದುಗ್ಗುಮನೆ
|

Updated on:Apr 23, 2021 | 7:20 PM

Share

ಪವನ್​ ಕಲ್ಯಾಣ್​ ಕಂಬ್ಯಾಕ್​ ಮಾಡಿದ್ದ ವಕೀಲ್​ ಸಾಬ್​ ಸಿನಿಮಾ ಫ್ಯಾನ್ಸ್ ಬಲದಿಂದ ಮೊದಲ ದಿನ ಅದ್ಭುತ ಕಲೆಕ್ಷನ್​ ಮಾಡಿತ್ತು. ಆದರೆ, ದಿನ ಕಳೆದಂತೆ ಸಿನಿಮಾ ನಾನಾ ಸಂಕಷ್ಟಗಳನ್ನು ಎದುರಿಸಿತ್ತು. ಕೊರೊನಾ ಎರಡನೇ ಅಲೆ ಚಿತ್ರಕ್ಕೆ ದೊಡ್ಡ ಹೊಡೆತ ನೀಡಿತ್ತು. ಹೀಗಾಗಿ, ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಕೂಡ ತಗ್ಗಿತ್ತು. ಹೀಗಿರುವಾಗಲೇ ಚಿತ್ರತಂಡ ಮಹತ್ವದ ಘೋಷಣೆ ಒಂದನ್ನು ಮಾಡೋಕೆ ಹೊರಟಿದೆ.

ಮೊದಲ ದಿನ ಎಲ್ಲೆಡೆ ವಕೀಲ್​ ಸಾಬ್​ ಹೌಸ್​ಫುಲ್​ ಪ್ರದರ್ಶನ ಕಂಡಿತ್ತು. ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡಿದ್ದು ಇದಕ್ಕೆ ಕಾರಣ. ವಿಮರ್ಶಕರಿಂದ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇನ್ನೊಂದು ವರ್ಗದ ಪ್ರೇಕ್ಷಕರು ಈ ಚಿತ್ರವನ್ನು ತೆಗಳಿದರು. ಸಿನಿಮಾ ಡಿಸ್ಯಾಸ್ಟರ್​ ಎನ್ನುವ ಹಣೆಪಟ್ಟಿ ಕಟ್ಟಿದರು. ಒಂದು ವಾರ ಕಳೆಯುವುದರೊಳಗೆ ವಕೀಲ್​ ಸಾಬ್​ಗೆ ಹೀನಾಯ ಪರಿಸ್ಥಿತಿ ಬಂದೊದಗಿತ್ತು. ಹಾಕಿದ ಬಂಡವಾಳವೇ ತಿರುಗಿ ಬಂದಿಲ್ಲ ಎಂಬುದು ಬಾಕ್ಸ್​ ಆಫೀಸ್​ ಮೂಲಗಳ ಮಾಹಿತಿ. ಹೀಗಾಗಿ ಈ ಚಿತ್ರ ಬಹುತೇಕ ಸೋಲಿನ ಹಾದಿ ಹಿಡಿದಂತಾಗಿದೆ.

ಹೀಗಾಗಿ, ವಕೀಲ್​ ಸಾಬ್​ ಸಿನಿಮಾವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುವ ಆಲೋಚನೆ ಚಿತ್ರತಂಡದ್ದು. ​ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕನ್ನು ಅಮೇಜಾನ್​ ಪ್ರೈಮ್ ಪಡೆದುಕೊಂಡಿದೆ. ಇದೇ ಮೇ 7ರಂದು ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಅನೇಕ ಕಡೆಗಳಲ್ಲಿ ವರ್ಕ್​ ಫ್ರಮ್​ ಹೋಂ ಆಯ್ಕೆ ನೀಡಲಾಗಿದೆ. ಹೀಗಾಗಿ, ಎಲ್ಲರೂ ಮನೆಯಲ್ಲಿ ಕೂತಿರುವುದರಿಂದ ಸಿನಿಮಾಗೆ ಹೆಚ್ಚು ವೀಕ್ಷಣೆ ಸಿಗಬಹುದು ಎಂಬುದು ಚಿತ್ರತಂಡದ ಆಲೋಚನೆ.

ಹಿಂದಿಯ ಪಿಂಕ್​ ಚಿತ್ರದ ತೆಲುಗು ರಿಮೇಕ್​ ಆಗಿ ವಕೀಲ್​ ಸಾಬ್​ ಮೂಡಿ ಬಂದಿದೆ. ಬಾಲಿವುಡ್​ನಲ್ಲಿ ಅಮಿತಾಭ್​ ಬಚ್ಚನ್​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ಪವನ್​ ಕಲ್ಯಾಣ್​ ಮಾಡಿದ್ದಾರೆ.  ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಸಿನಿಮಾದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: Vakeel saab Box Office Collection : ವಕೀಲ್​ ಸಾಬ್​ ಹಿಟ್​ ಅಥವಾ ಫ್ಲಾಪ್​? ಕಳಚಿತು ಪವನ್​ ಕಲ್ಯಾಣ್​ ಅಭಿಮಾನಿಗಳ ಭ್ರಮೆ

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!

Published On - 7:19 pm, Fri, 23 April 21

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ