ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ‘ವಲಿಮೈ’; ಅಜಿತ್​ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?

ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಹೈಲೈಟ್​ ಆಗಿವೆ. ಕೆಲವರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಸಾಕಷ್ಟು ಹೈಪ್​ನೊಂದಿಗೆ ಸಿನಿಮಾ ರಿಲೀಸ್​ ಆಗಿದ್ದರಿಂದ ಮೊದಲ ದಿನ ಒಳ್ಳೆಯ ಕಲೆಕ್ಷನ್ ಆಗಿದೆ.

ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ‘ವಲಿಮೈ’; ಅಜಿತ್​ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?
ವಲಿಮೈ
Follow us
| Updated By: ರಾಜೇಶ್ ದುಗ್ಗುಮನೆ

Updated on: Feb 25, 2022 | 5:01 PM

ಕೊವಿಡ್​ ಕಾಣಿಸಿಕೊಂಡ ನಂತರದಲ್ಲಿ ನಿರ್ಮಾಪಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರೇಕ್ಷಕರು ಮೊದಲಿನಷ್ಟು ಚಿತ್ರಮಂದಿರಕ್ಕೆ ತೆರಳುತ್ತಿಲ್ಲ ಎನ್ನುವ ಮಾತಿದೆ. ಅನೇಕ ಸಂದರ್ಭದಲ್ಲಿ ಇದು ಸಾಬೀತಾಗಿದೆ. ಕೊವಿಡ್ (Covid 19)​ ಕಾಣಿಸಿಕೊಳ್ಳುವುದಕ್ಕೂ ಮೊದಲು ಸಿನಿಮಾ ರಂಗದಲ್ಲಿ ಎಷ್ಟು ಬಿಸ್ನೆಸ್ ಆಗುತ್ತಿತ್ತೋ ಅಷ್ಟು ಬಿಸ್ನೆಸ್ ಈಗ ಆಗುತ್ತಿಲ್ಲ. ಹಲವು ದೊಡ್ಡ ದೊಡ್ಡ ಸಿನಿಮಾಗಳು ಒಟ್ಟಿಗೆ ಬಿಡುಗಡೆ ಆಗುತ್ತಿರುವುದರಿಂದ ಕಲೆಕ್ಷನ್​ಗೆ ಹೊಡೆತ ಬೀಳುತ್ತಿದೆ. ಈಗ ನಿಧಾನವಾಗಿ ಚಿತ್ರಣ ಬದಲಾಗುತ್ತಿದೆ. ಬಹು ನಿರೀಕ್ಷಿತ ಚಿತ್ರಗಳು ಒಳ್ಳೆಯ ರೀತಿಯಲ್ಲಿ ಕಲೆಕ್ಷನ್​ ಮಾಡುತ್ತಿವೆ. ಇದಕ್ಕೆ ಲೇಟೆಸ್ಟ್​ ಉದಾಹರಣೆ ಅಜಿತ್​ ಕುಮಾರ್ (Ajith Kumar) ನಟನೆಯ ತಮಿಳಿನ ‘ವಲಿಮೈ’ (Valimai First Day Collection) ಚಿತ್ರ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಒಳ್ಳೆಯ ಕಲೆಕ್ಷನ್​ ಮಾಡಿ ನಿರ್ಮಾಪಕರ ಮುಖದಲ್ಲಿ ನಗು ಮೂಡಿಸಿದೆ.

ಗುರುವಾರ (ಫೆಬ್ರವರಿ 24) ಬಿಡುಗಡೆ ಆಗಿರುವ ‘ವಲಿಮೈ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಜಿತ್​ ನಟಿಸಿದ್ದಾರೆ. ಎಚ್​. ವಿನೋದ್​ ಅವರು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಬಾಲಿವುಡ್​ನ ಖ್ಯಾತ ನಿರ್ಮಾಪಕ ಬೋನಿ ಕಪೂರ್​ ಅವರು ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಹೈಲೈಟ್​ ಆಗಿವೆ. ಕೆಲವರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಸಾಕಷ್ಟು ಹೈಪ್​ನೊಂದಿಗೆ ಸಿನಿಮಾ ರಿಲೀಸ್​ ಆಗಿದ್ದರಿಂದ ಮೊದಲ ದಿನ ಒಳ್ಳೆಯ ಕಲೆಕ್ಷನ್ ಆಗಿದೆ.

ಮೊದಲ ದಿನ ಈ ಸಿನಿಮಾ ಚೆನ್ನೈ ಒಂದರಲ್ಲೇ 1.82 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ತಮಿಳುನಾಡಿನಾದ್ಯಂತ ಈ ಸಿನಿಮಾ ಗಳಿಕೆ ಮಾಡಿದ್ದು 36 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಈ ಮೂಲಕ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿದಂತಾಗಿದೆ. ಈ ಮೊದಲು ರಜನಿಕಾಂತ್​ ನಟೆಯ ‘ಅಣ್ಣಾಥೆ’ ಸಿನಿಮಾ 34 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಅದನ್ನು ದಾಟಿ, 36 ಕೋಟಿ ರೂಪಾಯಿ ಗಳಿಕೆ ಮಾಡಿದೆ ‘ವಲಿಮೈ’. ವಿಶ್ವಾದ್ಯಂತ ಈ ಸಿನಿಮಾ 62 ಕೋಟಿ ರೂಪಾಯಿ ಬಾಚಿಕೊಂಡಿದೆ.

ಭಾರತ ಮಾತ್ರವಲ್ಲದೆ, ಬೇರೆ ದೇಶದಲ್ಲೂ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಅಮೆರಿಕ, ಮಲೇಷಿಯಾ, ಸಿಂಗಾಪೂರ್​ನಲ್ಲಿಯೂ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಈ ಮೂಲಕ ಅಜಿತ್​ ಸಿನಿಮಾಗೆ ಒಳ್ಳೆಯ ಮೈಲೇಜ್​ ಸಿಕ್ಕಿದೆ.

ಇದನ್ನೂ ಓದಿ: ವಿಮಾನದಲ್ಲಿ ಸಂಚರಿಸುವಾಗ ರಾಧಿಕಾ ಪಂಡಿತ್​ ಮಕ್ಕಳು ಮಾಡೋ ಕೆಲಸವೇನು? ಫೋಟೋ ಹಂಚಿಕೊಂಡ ನಟಿ

ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ