AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ವಿಜಯ್ ನಟನೆಯ ಇತ್ತೀಚಿನ ಸಿನಿಮಾಗಳು ಡಬ್​ ಆಗಿ ತೆಲುಗಿನಲ್ಲಿ ರಿಲೀಸ್​ ಆಗುತ್ತಿತ್ತು. ಆದರೆ, ಈ ಬಾರಿ ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಪಡಿಸಲು ನಿರ್ಮಾಪಕ ದಿಲ್​ ರಾಜು ಚಿಂತನೆ ನಡೆಸಿದ್ದಾರೆ

ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​
ರಾಜೇಶ್ ದುಗ್ಗುಮನೆ
|

Updated on: May 30, 2021 | 9:25 PM

Share

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿದ್ದವು. ಈಗ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರಂತೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ವಿಜಯ್ ನಟನೆಯ ಇತ್ತೀಚಿನ ಸಿನಿಮಾಗಳು ಡಬ್​ ಆಗಿ ತೆಲುಗಿನಲ್ಲಿ ರಿಲೀಸ್​ ಆಗುತ್ತಿತ್ತು. ಆದರೆ, ಈ ಬಾರಿ ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಪಡಿಸಲು ನಿರ್ಮಾಪಕ ದಿಲ್​ ರಾಜು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ವಂಶಿ ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು ಮುಂದಿನ ಸಿನಿಮಾ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ, ಫ್ಯಾನ್ಸ್​​ ಈ ಬಗ್ಗೆ ಸಾಕಷ್ಟು ಟ್ವೀಟ್​ ಮಾಡುತ್ತಿದ್ದಾರೆ.

ಹಾಗಾದರೆ, ಈ ಬಗ್ಗೆ ಅಧಿಕೃತ ಘೋಷಣೆ ಯಾವಾಗ? ಅದಕ್ಕೂ ಉತ್ತರವಿದೆ. ಜೂನ್​ 22 ವಿಜಯ್​ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲು ಚಿಂತಿಸಿದೆ ಎನ್ನುವ ಮಾತು ಕೇಳಿ ಬಂದಿದೆ.

ಮಹರ್ಷಿ, ಊಪಿರಿ, ಎವಡು ಮೊದಲಾದ ಚಿತ್ರಗಳನ್ನು ವಂಶಿ ನಿರ್ದೇಶನ ಮಾಡಿದ್ದಾರೆ. ಅವರಿಗೆ ತೆಲುಗಿನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್ನು, ವಿಜಯ್​ ಕಾಲಿವುಡ್​ನಲ್ಲಿ ಬಹುಬೇಡಿಕೆಯ ನಟ. ಇಬ್ಬರ ಕಾಂಬಿನೇಷನ್​ನಿಂದ ಚಿತ್ರ ತೆಲುಗು ಮತ್ತು ತಮಿಳು ಎರಡೂ ಕಡೆ ದೊಡ್ಡ ಮಾರುಕಟ್ಟೆ ಪಡೆದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.

ಈ ವರ್ಷ ತೆರೆಗೆ ಬಂದ ಮಾಸ್ಟರ್​ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ವಿಜಯ್​ 65ನೇ ಚಿತ್ರಕ್ಕೆ ನೆಲ್ಸನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ, ಕೊವಿಡ್ ಕಾರಣಕ್ಕೆ ಶೂಟಿಂಗ್​ ನಿಂತಿದೆ.

ಇದನ್ನೂ ಓದಿ: Radhika Apte: ಕೊವಿಡ್​ ಲಸಿಕೆ ಪಡೆದ ನಟಿ ರಾಧಿಕಾ ಆಪ್ಟೆ; ಸುತ್ತಿಬಳಸಿ ಕಾಲೆಳೆದ ನಟ ವಿಜಯ್​ ವರ್ಮಾ

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ