AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ವಿಜಯ್ ನಟನೆಯ ಇತ್ತೀಚಿನ ಸಿನಿಮಾಗಳು ಡಬ್​ ಆಗಿ ತೆಲುಗಿನಲ್ಲಿ ರಿಲೀಸ್​ ಆಗುತ್ತಿತ್ತು. ಆದರೆ, ಈ ಬಾರಿ ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಪಡಿಸಲು ನಿರ್ಮಾಪಕ ದಿಲ್​ ರಾಜು ಚಿಂತನೆ ನಡೆಸಿದ್ದಾರೆ

ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​
ರಾಜೇಶ್ ದುಗ್ಗುಮನೆ
|

Updated on: May 30, 2021 | 9:25 PM

Share

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿದ್ದವು. ಈಗ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರಂತೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ವಿಜಯ್ ನಟನೆಯ ಇತ್ತೀಚಿನ ಸಿನಿಮಾಗಳು ಡಬ್​ ಆಗಿ ತೆಲುಗಿನಲ್ಲಿ ರಿಲೀಸ್​ ಆಗುತ್ತಿತ್ತು. ಆದರೆ, ಈ ಬಾರಿ ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಪಡಿಸಲು ನಿರ್ಮಾಪಕ ದಿಲ್​ ರಾಜು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ವಂಶಿ ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು ಮುಂದಿನ ಸಿನಿಮಾ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ, ಫ್ಯಾನ್ಸ್​​ ಈ ಬಗ್ಗೆ ಸಾಕಷ್ಟು ಟ್ವೀಟ್​ ಮಾಡುತ್ತಿದ್ದಾರೆ.

ಹಾಗಾದರೆ, ಈ ಬಗ್ಗೆ ಅಧಿಕೃತ ಘೋಷಣೆ ಯಾವಾಗ? ಅದಕ್ಕೂ ಉತ್ತರವಿದೆ. ಜೂನ್​ 22 ವಿಜಯ್​ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲು ಚಿಂತಿಸಿದೆ ಎನ್ನುವ ಮಾತು ಕೇಳಿ ಬಂದಿದೆ.

ಮಹರ್ಷಿ, ಊಪಿರಿ, ಎವಡು ಮೊದಲಾದ ಚಿತ್ರಗಳನ್ನು ವಂಶಿ ನಿರ್ದೇಶನ ಮಾಡಿದ್ದಾರೆ. ಅವರಿಗೆ ತೆಲುಗಿನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್ನು, ವಿಜಯ್​ ಕಾಲಿವುಡ್​ನಲ್ಲಿ ಬಹುಬೇಡಿಕೆಯ ನಟ. ಇಬ್ಬರ ಕಾಂಬಿನೇಷನ್​ನಿಂದ ಚಿತ್ರ ತೆಲುಗು ಮತ್ತು ತಮಿಳು ಎರಡೂ ಕಡೆ ದೊಡ್ಡ ಮಾರುಕಟ್ಟೆ ಪಡೆದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.

ಈ ವರ್ಷ ತೆರೆಗೆ ಬಂದ ಮಾಸ್ಟರ್​ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ವಿಜಯ್​ 65ನೇ ಚಿತ್ರಕ್ಕೆ ನೆಲ್ಸನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ, ಕೊವಿಡ್ ಕಾರಣಕ್ಕೆ ಶೂಟಿಂಗ್​ ನಿಂತಿದೆ.

ಇದನ್ನೂ ಓದಿ: Radhika Apte: ಕೊವಿಡ್​ ಲಸಿಕೆ ಪಡೆದ ನಟಿ ರಾಧಿಕಾ ಆಪ್ಟೆ; ಸುತ್ತಿಬಳಸಿ ಕಾಲೆಳೆದ ನಟ ವಿಜಯ್​ ವರ್ಮಾ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ