AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಣಿ ಜಯರಾಮ್​ ಅವರದ್ದು ಆಕಸ್ಮಿಕ ಸಾವಲ್ಲ, ಕೊಲೆ? ಅನುಮಾನ ಮೂಡಿಸಿದ ಗಾಯಗಳು

ಪೊಲೀಸರು ಬಂದು ಬಾಗಿಲು ಒಡೆದಿದ್ದಾರೆ. ಅಲ್ಲಿ ವಾಣಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವಾಣಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವಾಣಿ ಜಯರಾಮ್​ ಅವರದ್ದು ಆಕಸ್ಮಿಕ ಸಾವಲ್ಲ, ಕೊಲೆ? ಅನುಮಾನ ಮೂಡಿಸಿದ ಗಾಯಗಳು
ರಾಜೇಶ್ ದುಗ್ಗುಮನೆ
|

Updated on:Feb 04, 2023 | 6:09 PM

Share

ಕನ್ನಡ ಸೇರಿ ಹಲವು ಭಾಷೆಗಳಲ್ಲಿ 10 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದ ನಟಿ ವಾಣಿ ಜಯರಾಮ್ (Vani Jayaram)  ಅವರು ಇಂದು (ಫೆಬ್ರವರಿ 4) ಚೆನ್ನೈನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಹಣೆಗೆ ಪೆಟ್ಟಾಗಿದ್ದು ಅವರ ಸಾವಿಗೆ ಕಾರಣ ಆಗಿದೆ. ಸದ್ಯ ಅವರ ಸಾವು ಸಾಕಷ್ಟು ಅನುಮಾನ ಮೂಡಿಸಿದೆ. ಇದು ಆಕಸ್ಮಿಕ ಸಾವಲ್ಲ ಕೊಲೆ ಎನ್ನುವ ಅನುಮಾನ ಮೂಡಿದೆ.

ಚೆನ್ನೈನಲ್ಲಿರುವ ನುಂಗಬಾಕಂ ಮನೆಯಲ್ಲಿ ವಾಣಿ ಅವರು ವಾಸವಾಗಿದ್ದರು. ಅವರ ಹಣೆಗೆ ಪೆಟ್ಟು ಬಿದ್ದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಇಂದು ಎಂದಿನಂತೆ ಮನೆ ಕೆಲಸದವಳು ವಾಣಿ ಮನೆಗೆ ತೆರಳಿದ್ದರು. ಡೋರ್ ಲಾಕ್ ಆದ ಕಾರಣ ಕಾಲಿಂಗ್ ಬೆಲ್ ಒತ್ತಿದ್ದಾರೆ. ಆದರೆ, ಒಳಗಡೆ ಇಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಕಾರಣಕ್ಕೆ ಮನೆ ಕೆಲಸದವಳು ಪತಿಯ ಮೊಬೈಲ್​ನಿಂದ ವಾಣಿ ಅವರಿಗೆ ಕರೆ ಮಾಡಿದ್ದಾರೆ. ಆದರೂ ಅವರ ಕಡೆಯಿಂದ ಪ್ರತಿಕ್ರಿಯೆ ಬಂದಿಲ್ಲ.

ಇದರಿಂದ ಅನುಮಾನಗೊಂಡ ಮನೆಕೆಲಸದವಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಒಡೆದಿದ್ದಾರೆ. ಅಲ್ಲಿ ವಾಣಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವಾಣಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ವಾಣಿ ಹಣೆಯ ಮೇಲೆ ದೊಡ್ಡ ಗಾಯ ಆಗಿದೆ. ಮುಖದ ಮೇಲೂ ಗಾಯಗಳು ಇವೆ. ಹೀಗಾಗಿ, ಯಾರಾದರೂ ಅವರನ್ನು ಹೊಡೆದು ಸಾಯಿಸಿದರೇ ಎನ್ನುವ ಅನುಮಾನ ಮೂಡಿದೆ. ಸದ್ಯ ಮನೆ ಕೆಲಸದವಳ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ
Image
Singer Vani Jairam Birthday : ಮೂಲೆಯಲ್ಲಿ ಕುಳಿತಿದ್ದ ವಾಣಿಯವರನ್ನು ಯಾರೂ ಗುರುತು ಹಿಡಿದಿರಲಿಲ್ಲ!
Image
Singer Vani Jairam Birthday : ಹಾಡು ಹಳೆಯದಾದರೇನು, ಜೀವನವೆಲ್ಲಾ ಸುಂದರ ಬೆಸುಗೆ, ಭಾವವೆಂಬ ಹೂವು ಅರಳಿ…

ವಾಣಿ ಮುಖಕ್ಕೆ ಬಿದ್ದಿದ್ದರಿಂದಲೂ ಗಾಯ ಆಗಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಕೆಲಸದವಳು ಹೇಳುವ ಪ್ರಕಾರ ವಾಣಿ ಆರೋಗ್ಯವಾಗಿಯೇ ಇದ್ದರು. ವಾಣಿ ಅವರು ಜನವರಿ 26ರಂದು ಪದ್ಮ ಭೂಷಣ ಅವಾರ್ಡ್​​ ಸ್ವೀಕರಿಸಿದ್ದರು. ಇದಕ್ಕಾಗಿ ಅನೇಕರು ಅವರಿಗೆ ವಿಶ್ ಮಾಡುತ್ತಿದ್ದರು.

ಇದನ್ನೂ ಓದಿ: ಗಾನ ನಿಲ್ಲಿಸಿದ ಕೋಗಿಲೆ, ಪದ್ಮ ಭೂಷಣ ವಾಣಿ ಜಯರಾಂ ಇನ್ನಿಲ್ಲ

‘ಪದ್ಮಭೂಷಣ ಬಂದಿರೋದಕ್ಕೆ ಅವರಿಗೆ ಖುಷಿ ಇತ್ತು. ಅನೇಕರು ಕರೆ ಮಾಡಿ ವಿಶ್ ಮಾಡುತ್ತಿದ್ದರು. ಇಡೀ ದಿನ ಅವರಿಗೆ ಕಾಲ್​ಗಳು ಬರುತ್ತಲೇ ಇತ್ತು. ಅವರು ಒಂಟಿಯಾಗಿ ವಾಸವಾಗಿದ್ದರು’ ಎಂದು ಕೆಲಸದಾಕೆ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:55 pm, Sat, 4 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು