AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4ನೇ ಮದುವೆ ಆಗಲಿರುವ ನಟಿ ವನಿತಾ ವಿಜಯ್​ಕುಮಾರ್; ಹಳೇ ಗೆಳೆಯನಿಗೆ ಮಂಡಿಯೂರಿ ಪ್ರಪೋಸ್

ನಟಿ ವನಿತಾ ವಿಜಯ್​ಕುಮಾರ್​ ಅವರು ಈಗಾಗಲೇ ಮೂರು ಮದುವೆಯಾಗಿ ವಿಚ್ಛೇದನ ಪಡೆದಿದ್ದಾರೆ. ಈಗ 4ನೇ ಮದುವೆಗೆ ತಯಾರಾಗಿದ್ದಾರೆ. ಬಾಯ್​ಫ್ರೆಂಡ್​ ರಾಬರ್ಟ್​ಗೆ ವನಿತಾ ಅವರೇ ಪ್ರಪೋಸ್​ ಮಾಡಿದ್ದು, ಅವರಿಬ್ಬರ ಫೋಟೋ ವೈರಲ್​ ಆಗುತ್ತಿದೆ. ಅಕ್ಟೋಬರ್​ 5ರಂದು ದೊಡ್ಡ ಸುದ್ದಿ ನೀಡುವುದಾಗಿ ರಾಬರ್ಟ್​ ಅವರು ತಿಳಿಸಿದ್ದಾರೆ. ಇಬ್ಬರ ಬಗ್ಗೆ ಇಲ್ಲಿದೆ ವಿವರ..

4ನೇ ಮದುವೆ ಆಗಲಿರುವ ನಟಿ ವನಿತಾ ವಿಜಯ್​ಕುಮಾರ್; ಹಳೇ ಗೆಳೆಯನಿಗೆ ಮಂಡಿಯೂರಿ ಪ್ರಪೋಸ್
ರಾಬರ್ಟ್​, ವನಿತಾ ವಿಜಯ್​ಕುಮಾರ್
ಮದನ್​ ಕುಮಾರ್​
|

Updated on: Oct 01, 2024 | 5:21 PM

Share

ಸದಾ ವಿವಾದಗಳಿಂದ ಸುದ್ದಿಯಾಗುವ ನಟಿ ವನಿತಾ ವಿಜಯ್​ಕುಮಾರ್​ ಅವರು ಈಗ ಒಂದು ಅಚ್ಚರಿಯ ವಿಷಯ ಹಂಚಿಕೊಂಡಿದ್ದಾರೆ. ಸದ್ಯ ವನಿತಾ ಅವರಿಗೆ 43 ವರ್ಷ ವಯಸ್ಸು. ಈ ಪ್ರಾಯದಲ್ಲಿ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಇದು ಅವರ ಮೊದಲ ಮದುವೆ ಅಲ್ಲ. ಈಗಾಗಲೇ 3 ಬಾರಿ ಮದುವೆ ಆಗಿ ವಿಚ್ಛೇದನ ಪಡೆದಿರುವ ಅವರಿಗೆ ಇದು 4ನೇ ಮದುವೆ! ಆ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಹಳೇ ಗೆಳೆಯ ರಾಬರ್ಟ್​ಗೆ ವನಿತಾ ಅವರು ಪ್ರಪೋಸ್​ ಮಾಡಿದ್ದಾರೆ. ಈ ಫೋಟೋವನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ಕಡಲ ತೀರದಲ್ಲಿ ವನಿತಾ ವಿಜಯ್​ಕುಮಾರ್​ ಅವರು ಮಂಡಿಯೂರಿ ಪ್ರಪೋಸ್​ ಮಾಡಿದ್ದಾರೆ. ಈ ಫೋಟೋದಲ್ಲಿ ರಾಬರ್ಟ್​ ಅವರು ನಗು ಬೀರಿದ್ದಾರೆ. ‘ದಿನಾಂಕ ನೆನಪಿಟ್ಟುಕೊಳ್ಳಿ. 5 ಅಕ್ಟೋಬರ್​ 2024. ವನಿತಾ ವಿಜಯ್​ ಕುಮಾರ್​ ಲವ್ಸ್​ ರಾಬರ್ಟ್​’ ಎಂದು ಈ ಫೋಟೋಗೆ ಕ್ಯಾಪ್ಷನ್​ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಈ ಫೋಟೋವನ್ನು ರಾಬರ್ಟ್​ ಕೂಡ ಶೇರ್​ ಮಾಡಿಕೊಂಡಿದ್ದು, ‘ವಿಆರ್​. ದೊಡ್ಡ ಘೋಷಣೆ. 5 ಅಕ್ಟೋಬರ್​ 2024’ ಎಂದು ಬರೆದುಕೊಂಡಿದ್ದಾರೆ.

ವನಿತಾ ವಿಜಯ್​ಕುಮಾರ್​ ಅವರು 2000ನೇ ಇಸವಿಯಲ್ಲಿ ಮೊದಲ ಮದುವೆ ಆಗಿದ್ದರು. ಆದರೆ 2007ರಲ್ಲಿ ಅವರು ವಿಚ್ಛೇದನ ಪಡೆದರು. ಬಳಿಕ 2007ರಲ್ಲಿ ರಾಜನ್​ ಆನಂದ್​ ಜೊತೆ ಅವರ ಎರಡನೇ ಮದುವೆ ನೆರವೇರಿತು. ಆ ವಿವಾಹ ಕೂಡ ಹೆಚ್ಚು ಕಾಲ ಉಳಿಯಲಿಲ್ಲ. 2012ರಲ್ಲಿ ಈ ಮದುವೆ ಕೂಡ ಮುರಿದುಬಿತ್ತು. 2020ರಲ್ಲಿ ಪೀಟರ್​ ಪೌಲ್​ ಜೊತೆ ವನಿತಾ ಅವರು 3ನೇ ಮದುವೆಯಾದರು. ಕೆಲವೇ ದಿನಗಳಲ್ಲಿ ಅವರಿಬ್ಬರ ದಾಂಪತ್ಯ ಹಳಸಿತು.

ಇದನ್ನೂ ಓದಿ: ವಿಚ್ಛೇದನ ಪಡೆಯಲು ಮುಂದಾದ ನಟಿ ಊರ್ಮಿಳಾ; 8 ವರ್ಷದ ದಾಂಪತ್ಯ ಅಂತ್ಯ?

ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರದಲ್ಲಿ ವನಿತಾ ವಿಜಯ್​ಕುಮಾರ್​ ಅವರಿಗೆ ಉತ್ಸಾಹ ಕಡಿಮೆ ಆಗಿಲ್ಲ. ಈಗ ಕೋರಿಯೋಗ್ರಾಫರ್​ ರಾಬರ್ಟ್​ ಜೊತೆ ಅವರಿಗೆ ಪ್ರೀತಿ ಚಿಗುರಿದೆ. ಅಕ್ಟೋಬರ್ 5ರಂದು ಅವರು ಮದುವೆ ಆಗುವ ಸಾಧ್ಯತೆ ಇದೆ. ಇದು ಪ್ರಚಾರದ ಗಿಮಿಕ್​ ಕೂಡ ಆಗಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಅಂದಹಾಗೆ, ರಾಬರ್ಟ್​ ಮತ್ತು ವನಿತಾ ಗೆಳೆತನ ಹೊಸದೇನೂ ಅಲ್ಲ. 2013ರಲ್ಲೇ ವನಿತಾ ಮತ್ತು ರಾಬರ್ಟ್​ ಅವರು ಡೇಟಿಂಗ್​ ಮಾಡಿದ್ದರು. ಬಳಿಕ ಬ್ರೇಕಪ್​ ಆಗಿತ್ತು. ಈಗ ಮತ್ತೆ ಹಳೇ ಗೆಳೆಯನ ಜೊತೆಗೆ ವನಿತಾಗೆ ಪ್ರೀತಿ ಚಿಗುರಿದಂತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?