AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ವಿರುದ್ಧ ಗಂಭೀರ ಆರೋಪ ಮಾಡಿದ ಬಿಗ್​ ಬಾಸ್​ ಸ್ಪರ್ಧಿ; ರಿಯಾಲಿಟಿ ಶೋದಿಂದ ಹೊರ ಬರುವ ನಿರ್ಧಾರ

ಬಿಗ್​ ಬಾಸ್​ 4 ಖ್ಯಾತಿಯ ಸುರೇಶ್​ ಚಕ್ರವರ್ತಿಗೆ ವನಿತಾ ಜತೆಯಾಗಿದ್ದರು. ಇವರ ಡಾನ್ಸ್​ ಪರ್ಫಾರ್ಮೆನ್ಸ್​ ವೀಕ್ಷಕರಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಆದರೆ, ಈಗ ಅವರು ಏಕಾಏಕಿ ಬಿಗ್​ ಬಾಸ್ ಜೋಡಿಗಳ್​ ತೊರೆಯುತ್ತಿರುವುದಾಗಿ ವಿಜಯ್​ ಟಿವಿಗೆ ಪತ್ರ ಬರೆದಿದ್ದಾರೆ.

ಹಿರಿಯ ನಟಿ ವಿರುದ್ಧ ಗಂಭೀರ ಆರೋಪ ಮಾಡಿದ ಬಿಗ್​ ಬಾಸ್​ ಸ್ಪರ್ಧಿ; ರಿಯಾಲಿಟಿ ಶೋದಿಂದ ಹೊರ ಬರುವ ನಿರ್ಧಾರ
ವನಿತಾ ವಿಜಯ್​ಕುಮಾರ್​
TV9 Web
| Edited By: |

Updated on:Jul 05, 2021 | 7:51 PM

Share

ತಮಿಳು ಬಿಗ್​ ಬಾಸ್​ ಸೀಸನ್​ 3ರ ಖ್ಯಾತಿಯ ವನಿತಾ ವಿಜಯಕುಮಾರ್​ ತಮ್ಮ ನೇರ ನುಡಿಗಳಿಂದಲೇ ಹೆಚ್ಚು ಗುರುತಿಸಿಕೊಂಡಿದ್ದಾರೆ. ಬಿಗ್​ ಬಾಸ್​ನಿಂದಾಗಿ ಅವರ ಅಭಿಮಾನಿ ಬಳಗ ಹಿರಿದಾಗಿತ್ತು. ಇತ್ತೀಚೆಗೆ ಅವರು ಬಿಗ್​ ಬಾಸ್​ ಸ್ಪರ್ಧಿಗಳಿಗಾಗಿ ಏರ್ಪಡಿಸಿದ ‘ಬಿಗ್ ಬಾಸ್​ ಜೋಡಿಗಳ್​’ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡಿದ್ದರು. ಈಗ ಅವರು ರಿಯಾಲಿಟಿ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೆ, ಹಿರಿಯ ನಟಿಯ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಗ್​ ಬಾಸ್​ 4 ಖ್ಯಾತಿಯ ಸುರೇಶ್​ ಚಕ್ರವರ್ತಿಗೆ ವನಿತಾ ಜತೆಯಾಗಿದ್ದರು. ಇವರ ಡಾನ್ಸ್​ ಪರ್ಫಾರ್ಮೆನ್ಸ್​ ವೀಕ್ಷಕರಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಆದರೆ, ಈಗ ಅವರು ಏಕಾಏಕಿ ಬಿಗ್​ ಬಾಸ್ ಜೋಡಿಗಳ್​ ತೊರೆಯುತ್ತಿರುವುದಾಗಿ ವಿಜಯ್​ ಟಿವಿಗೆ ಪತ್ರ ಬರೆದಿದ್ದಾರೆ.

ವನಿತಾ ಅವರು ಚಾನೆಲ್​ಗೆ ಧನ್ಯವಾದ ಹೇಳಿದ್ದಾರೆ. ಬಿಗ್​ ಬಾಸ್​ 3, ಕೂಕು ವಿತ್​ ಕೋಮಲಿ ಸೇರಿ ಹಲವು ಶೋಗಳಿಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ವನಿತಾ ಬರೆದುಕೊಂಡಿದ್ದಾರೆ. ಅಲ್ಲದೆ, ಹಿರಿಯ ನಟಿಯಿಂದ ನನಗೆ ಬೆದರಿಕೆ ಇದೆ. ಅವರು ಶೋ ಹಾಗೂ ಚಾನೆಲ್​ ಎರಡು ಬಿಟ್ಟು ಹೋಗುವಂತೆ ಒತ್ತಡ ಹೇರಿದ್ದಾರೆ ಎಂಬುದಾಗಿ ವನಿತಾ ಹೇಳಿಕೊಂಡಿದ್ದಾರೆ.

ಆ ಹಿರಿಯ ನಟಿ ಯಾರು ಎಂದು ವನಿತಾ ಎಲ್ಲಿಯೂ ಹೆಸರು ಉಲ್ಲೇಖ ಮಾಡಿಲ್ಲ. ಈ ಶೋ ನಡೆಸಿಕೊಡುವ ನಿರೂಪಕಿ ಮೇಲೆ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ, ವನಿತಾ ಅವರ ಈ ನಿರ್ಧಾರದಿಂದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ

Published On - 7:41 pm, Mon, 5 July 21

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!