AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ವಿರುದ್ಧ ಗಂಭೀರ ಆರೋಪ ಮಾಡಿದ ಬಿಗ್​ ಬಾಸ್​ ಸ್ಪರ್ಧಿ; ರಿಯಾಲಿಟಿ ಶೋದಿಂದ ಹೊರ ಬರುವ ನಿರ್ಧಾರ

ಬಿಗ್​ ಬಾಸ್​ 4 ಖ್ಯಾತಿಯ ಸುರೇಶ್​ ಚಕ್ರವರ್ತಿಗೆ ವನಿತಾ ಜತೆಯಾಗಿದ್ದರು. ಇವರ ಡಾನ್ಸ್​ ಪರ್ಫಾರ್ಮೆನ್ಸ್​ ವೀಕ್ಷಕರಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಆದರೆ, ಈಗ ಅವರು ಏಕಾಏಕಿ ಬಿಗ್​ ಬಾಸ್ ಜೋಡಿಗಳ್​ ತೊರೆಯುತ್ತಿರುವುದಾಗಿ ವಿಜಯ್​ ಟಿವಿಗೆ ಪತ್ರ ಬರೆದಿದ್ದಾರೆ.

ಹಿರಿಯ ನಟಿ ವಿರುದ್ಧ ಗಂಭೀರ ಆರೋಪ ಮಾಡಿದ ಬಿಗ್​ ಬಾಸ್​ ಸ್ಪರ್ಧಿ; ರಿಯಾಲಿಟಿ ಶೋದಿಂದ ಹೊರ ಬರುವ ನಿರ್ಧಾರ
ವನಿತಾ ವಿಜಯ್​ಕುಮಾರ್​
TV9 Web
| Edited By: |

Updated on:Jul 05, 2021 | 7:51 PM

Share

ತಮಿಳು ಬಿಗ್​ ಬಾಸ್​ ಸೀಸನ್​ 3ರ ಖ್ಯಾತಿಯ ವನಿತಾ ವಿಜಯಕುಮಾರ್​ ತಮ್ಮ ನೇರ ನುಡಿಗಳಿಂದಲೇ ಹೆಚ್ಚು ಗುರುತಿಸಿಕೊಂಡಿದ್ದಾರೆ. ಬಿಗ್​ ಬಾಸ್​ನಿಂದಾಗಿ ಅವರ ಅಭಿಮಾನಿ ಬಳಗ ಹಿರಿದಾಗಿತ್ತು. ಇತ್ತೀಚೆಗೆ ಅವರು ಬಿಗ್​ ಬಾಸ್​ ಸ್ಪರ್ಧಿಗಳಿಗಾಗಿ ಏರ್ಪಡಿಸಿದ ‘ಬಿಗ್ ಬಾಸ್​ ಜೋಡಿಗಳ್​’ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡಿದ್ದರು. ಈಗ ಅವರು ರಿಯಾಲಿಟಿ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೆ, ಹಿರಿಯ ನಟಿಯ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಗ್​ ಬಾಸ್​ 4 ಖ್ಯಾತಿಯ ಸುರೇಶ್​ ಚಕ್ರವರ್ತಿಗೆ ವನಿತಾ ಜತೆಯಾಗಿದ್ದರು. ಇವರ ಡಾನ್ಸ್​ ಪರ್ಫಾರ್ಮೆನ್ಸ್​ ವೀಕ್ಷಕರಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಆದರೆ, ಈಗ ಅವರು ಏಕಾಏಕಿ ಬಿಗ್​ ಬಾಸ್ ಜೋಡಿಗಳ್​ ತೊರೆಯುತ್ತಿರುವುದಾಗಿ ವಿಜಯ್​ ಟಿವಿಗೆ ಪತ್ರ ಬರೆದಿದ್ದಾರೆ.

ವನಿತಾ ಅವರು ಚಾನೆಲ್​ಗೆ ಧನ್ಯವಾದ ಹೇಳಿದ್ದಾರೆ. ಬಿಗ್​ ಬಾಸ್​ 3, ಕೂಕು ವಿತ್​ ಕೋಮಲಿ ಸೇರಿ ಹಲವು ಶೋಗಳಿಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ವನಿತಾ ಬರೆದುಕೊಂಡಿದ್ದಾರೆ. ಅಲ್ಲದೆ, ಹಿರಿಯ ನಟಿಯಿಂದ ನನಗೆ ಬೆದರಿಕೆ ಇದೆ. ಅವರು ಶೋ ಹಾಗೂ ಚಾನೆಲ್​ ಎರಡು ಬಿಟ್ಟು ಹೋಗುವಂತೆ ಒತ್ತಡ ಹೇರಿದ್ದಾರೆ ಎಂಬುದಾಗಿ ವನಿತಾ ಹೇಳಿಕೊಂಡಿದ್ದಾರೆ.

ಆ ಹಿರಿಯ ನಟಿ ಯಾರು ಎಂದು ವನಿತಾ ಎಲ್ಲಿಯೂ ಹೆಸರು ಉಲ್ಲೇಖ ಮಾಡಿಲ್ಲ. ಈ ಶೋ ನಡೆಸಿಕೊಡುವ ನಿರೂಪಕಿ ಮೇಲೆ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ, ವನಿತಾ ಅವರ ಈ ನಿರ್ಧಾರದಿಂದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ

Published On - 7:41 pm, Mon, 5 July 21

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ