ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?

ಕಳೆದ ನವೆಂಬರ್​ನಲ್ಲಿ ವನಿತಾ ಅವರ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು. ಸದ್ಯ, ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?
ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?
Follow us
| Updated By: ಮದನ್​ ಕುಮಾರ್​

Updated on: Jun 11, 2021 | 4:34 PM

ನಟಿ ವನಿತಾ ವಿಜಯ್​ಕುಮಾರ್​ ಅವರು ಮದುವೆ ವಿಚಾರಕ್ಕೆ ಸಾಕಷ್ಟು ಸುದ್ದಿ ಆಗುತ್ತಿರುತ್ತಾರೆ. ಈಗಾಗಲೇ ಅವರು ಮೂರು ಮದುವೆ ಆಗಿದ್ದು, ಮೂರೂ ಸಂಬಂಧಗಳು ಮುರಿದು ಬಿದ್ದಿವೆ. ಈಗ ಅವರು ಮತ್ತೊಂದು ಮದುವೆ ಆಗುವ ಸೂಚನೆ ನೀಡಿದ್ದಾರೆ. ಸದ್ಯ ಅವರ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ವನಿತಾ ವಿಜಯ್​ಕುಮಾರ್​ ಕಳೆದ ಜೂನ್​ 27ರಂದು ಪೀಟರ್​ ಪೌಲ್​ ಜತೆ ಮದುವೆ ಆಗಿದ್ದರು. ಪೀಟರ್​ ಪೌಲ್​ಗೆ ಆಗಲೇ ವಿವಾಹ ಆಗಿತ್ತು. ಪೀಟರ್​ ಮೊದಲನೇ ಪತ್ನಿ ಜಗಳ ತೆಗೆದಿದ್ದರು. ‘ನನಗೆ ವಿಚ್ಛೇದನ ನೀಡದೇ ನನ್ನ ಪತಿ ಎರಡನೇ ಮದುವೆ ಆಗಿದ್ದಾನೆ. ಹೀಗಾಗಿ, ಆತನ ಎರಡನೇ ಮದುವೆಗೆ ಕಾನೂನಿನಲ್ಲಿ ಮನ್ನಣೆ ಇಲ್ಲ’ ಎಂದು ಅವರ ಪತ್ನಿ ವಾದಿಸಿದ್ದರು.

ಪೀಟರ್​ ಸ್ವಲ್ಪ ಹೆಚ್ಚಾಗಿ ಕುಡಿಯುತ್ತಿದ್ದ. ಕೆಲ ಸಮಯ ಇದನ್ನು ವನಿತಾ ಸಹಿಸಿಕೊಂಡರು. ಕೊನೆಗೆ ಕಳೆದ ನವೆಂಬರ್​ ತಿಂಗಳಲ್ಲಿ ಇಬ್ಬರೂ ಬೇರೆ ಆದರು. ಈ ಮೂಲಕ ಅವರ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು. ಸದ್ಯ, ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಈಗ ಅವರು ಅಚ್ಚರಿಯ ಟ್ವೀಟ್​ ಒಂದನ್ನು ಮಾಡಿದ್ದಾರೆ. ‘ನಾನು ಸಿಂಗಲ್​ ಆಗಿದ್ದೇನೆ ಮತ್ತು ಲಭ್ಯವಿದ್ದೇನೆ. ನನ್ನ ಬಗ್ಗೆ ಯಾವುದೇ ಸುಳ್ಳು ಸುದ್ದಿ ಹಬ್ಬಿಸಬೇಡಿ ಮತ್ತು ಅದನ್ನು ನಂಬಬೇಡಿ’ ಎಂದು ಹೇಳಿದ್ದಾರೆ. ಅಂದಹಾಗೆ, ವನಿತಾ ಯಾವ ಅರ್ಥದಲ್ಲಿ ಈ ಟ್ವೀಟ್​ ಮಾಡಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಕೆಲವರು ವನಿತಾ ನಾಲ್ಕನೇ ಮದುವೆ ಆಗುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ವನಿತಾ ಬಿಗ್​ ಬಾಸ್​ ಜೋಡಿಗಳ್​ ಶೋನಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್​ ಬಾಸ್​ನಲ್ಲಿ ಪಾಲ್ಗೊಂಡ ಸ್ಪರ್ಧಿಗಳು ಇದರಲ್ಲಿ ಸ್ಪರ್ಧಿಗಳಾಗಿದ್ದಾರೆ.

ಇದನ್ನೂ ಓದಿ: Viral Photo: ಮಮತಾ ಬ್ಯಾನರ್ಜಿಗೆ ಮದುವೆಯಂತೆ! ವರ ಯಾರು ಗೊತ್ತಾ? ಲಗ್ನ ಪತ್ರಿಕೆ ನೋಡಿ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ