AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?

ಕಳೆದ ನವೆಂಬರ್​ನಲ್ಲಿ ವನಿತಾ ಅವರ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು. ಸದ್ಯ, ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?
ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?
ರಾಜೇಶ್ ದುಗ್ಗುಮನೆ
| Edited By: |

Updated on: Jun 11, 2021 | 4:34 PM

Share

ನಟಿ ವನಿತಾ ವಿಜಯ್​ಕುಮಾರ್​ ಅವರು ಮದುವೆ ವಿಚಾರಕ್ಕೆ ಸಾಕಷ್ಟು ಸುದ್ದಿ ಆಗುತ್ತಿರುತ್ತಾರೆ. ಈಗಾಗಲೇ ಅವರು ಮೂರು ಮದುವೆ ಆಗಿದ್ದು, ಮೂರೂ ಸಂಬಂಧಗಳು ಮುರಿದು ಬಿದ್ದಿವೆ. ಈಗ ಅವರು ಮತ್ತೊಂದು ಮದುವೆ ಆಗುವ ಸೂಚನೆ ನೀಡಿದ್ದಾರೆ. ಸದ್ಯ ಅವರ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ವನಿತಾ ವಿಜಯ್​ಕುಮಾರ್​ ಕಳೆದ ಜೂನ್​ 27ರಂದು ಪೀಟರ್​ ಪೌಲ್​ ಜತೆ ಮದುವೆ ಆಗಿದ್ದರು. ಪೀಟರ್​ ಪೌಲ್​ಗೆ ಆಗಲೇ ವಿವಾಹ ಆಗಿತ್ತು. ಪೀಟರ್​ ಮೊದಲನೇ ಪತ್ನಿ ಜಗಳ ತೆಗೆದಿದ್ದರು. ‘ನನಗೆ ವಿಚ್ಛೇದನ ನೀಡದೇ ನನ್ನ ಪತಿ ಎರಡನೇ ಮದುವೆ ಆಗಿದ್ದಾನೆ. ಹೀಗಾಗಿ, ಆತನ ಎರಡನೇ ಮದುವೆಗೆ ಕಾನೂನಿನಲ್ಲಿ ಮನ್ನಣೆ ಇಲ್ಲ’ ಎಂದು ಅವರ ಪತ್ನಿ ವಾದಿಸಿದ್ದರು.

ಪೀಟರ್​ ಸ್ವಲ್ಪ ಹೆಚ್ಚಾಗಿ ಕುಡಿಯುತ್ತಿದ್ದ. ಕೆಲ ಸಮಯ ಇದನ್ನು ವನಿತಾ ಸಹಿಸಿಕೊಂಡರು. ಕೊನೆಗೆ ಕಳೆದ ನವೆಂಬರ್​ ತಿಂಗಳಲ್ಲಿ ಇಬ್ಬರೂ ಬೇರೆ ಆದರು. ಈ ಮೂಲಕ ಅವರ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು. ಸದ್ಯ, ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಈಗ ಅವರು ಅಚ್ಚರಿಯ ಟ್ವೀಟ್​ ಒಂದನ್ನು ಮಾಡಿದ್ದಾರೆ. ‘ನಾನು ಸಿಂಗಲ್​ ಆಗಿದ್ದೇನೆ ಮತ್ತು ಲಭ್ಯವಿದ್ದೇನೆ. ನನ್ನ ಬಗ್ಗೆ ಯಾವುದೇ ಸುಳ್ಳು ಸುದ್ದಿ ಹಬ್ಬಿಸಬೇಡಿ ಮತ್ತು ಅದನ್ನು ನಂಬಬೇಡಿ’ ಎಂದು ಹೇಳಿದ್ದಾರೆ. ಅಂದಹಾಗೆ, ವನಿತಾ ಯಾವ ಅರ್ಥದಲ್ಲಿ ಈ ಟ್ವೀಟ್​ ಮಾಡಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಕೆಲವರು ವನಿತಾ ನಾಲ್ಕನೇ ಮದುವೆ ಆಗುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ವನಿತಾ ಬಿಗ್​ ಬಾಸ್​ ಜೋಡಿಗಳ್​ ಶೋನಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್​ ಬಾಸ್​ನಲ್ಲಿ ಪಾಲ್ಗೊಂಡ ಸ್ಪರ್ಧಿಗಳು ಇದರಲ್ಲಿ ಸ್ಪರ್ಧಿಗಳಾಗಿದ್ದಾರೆ.

ಇದನ್ನೂ ಓದಿ: Viral Photo: ಮಮತಾ ಬ್ಯಾನರ್ಜಿಗೆ ಮದುವೆಯಂತೆ! ವರ ಯಾರು ಗೊತ್ತಾ? ಲಗ್ನ ಪತ್ರಿಕೆ ನೋಡಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ