AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಮೊದಲ ಬಾರಿ ಡಬ್​ ಆಯ್ತು ಗುಜರಾತಿ ಚಿತ್ರ; ಜುಲೈ 7ರಂದು ‘ರಾಯರು ಬಂದರು ಮಾವನ ಮನೆಗೆ’ ರಿಲೀಸ್

Rayaru Bandaru Mavana Manege: ಸಿನಿಮಾಗಳು ಈಗ ಭಾಷೆಯ ಗಡಿಯನ್ನು ಮೀರುತ್ತಿವೆ. ಬೇರೆ ಬೇರೆ ರಾಜ್ಯಗಳ ಚಿತ್ರರಂಗಗಳು ಡಬ್ಬಿಂಗ್​ ಮೊರೆ ಹೋಗುತ್ತಿವೆ. ಗುಜರಾತಿ ಭಾಷೆಯ ಸಿನಿಮಾ ಕೂಡ ಕನ್ನಡಕ್ಕೆ ಡಬ್​ ಆಗಿ ತೆರೆಗೆ ಬರಲು ಸಜ್ಜಾಗಿದೆ.

ಕನ್ನಡಕ್ಕೆ ಮೊದಲ ಬಾರಿ ಡಬ್​ ಆಯ್ತು ಗುಜರಾತಿ ಚಿತ್ರ; ಜುಲೈ 7ರಂದು ‘ರಾಯರು ಬಂದರು ಮಾವನ ಮನೆಗೆ’ ರಿಲೀಸ್
‘ರಾಯರು ಬಂದರು ಮಾವನ ಮನೆಗೆ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 05, 2023 | 4:26 PM

Share

‘ರಾಯರು ಬಂದರು ಮಾವನ ಮನೆಗೆ’ ಎಂದ ತಕ್ಷಣ ‘ಮೈಸೂರು ಮಲ್ಲಿಗೆ’ ಸಿನಿಮಾ ನೆನಪಾಗುತ್ತದೆ. ಈಗ ‘ರಾಯರು ಬಂದರು ಮಾವನ ಮನೆಗೆ’ ಶೀರ್ಷಿಕೆಯಲ್ಲೊಂದು ಹೊಸ ಸಿನಿಮಾ ಬಿಡುಗಡೆ ಆಗಲು ಸಜ್ಜಾಗಿದೆ. ಹಾಗಂತ ಇದು ಕನ್ನಡದ ಸಿನಿಮಾ ಅಲ್ಲ! ವಿಶೇಷ ಏನಂದರೆ ಇದು ಗುಜರಾತಿ ಸಿನಿಮಾ (​Gujarati Movie). ‘ವರ್​ ಪಧಾರವೋ ಸಾವಧಾನ್​’ (​Var Padharavo Saavdhan) ಎಂಬುದು ಇದರ ಮೂಲ ಟೈಟಲ್. ಜುಲೈ​ 7ರಂದು ಈ ಚಿತ್ರ ಗುಜರಾತಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೇ ಸಿನಿಮಾ ಕನ್ನಡಕ್ಕೂ ಡಬ್​ ಆಗಿದೆ. ಕನ್ನಡದಲ್ಲಿ ಈ ಸಿನಿಮಾಗೆ ‘ರಾಯರು ಬಂದರು ಮಾವನ ಮನೆಗೆ’ ಎಂದು ಶೀರ್ಷಿಕೆ ಇಡಲಾಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾಗಳ (​Pan India Cinema) ಕಾಲ. ಬೇರೆ ಬೇರೆ ಭಾಷೆಯ ಚಿತ್ರಗಳನ್ನು ಕನ್ನಡಕ್ಕೆ ಡಬ್​ ಆಗುತ್ತಿದೆ. ಅಚ್ಚರಿ ಎಂದರೆ ಇದೇ ಮೊದಲ ಬಾರಿಗೆ ಗುಜರಾತಿ ಭಾಷೆಯ ಸಿನಿಮಾ ಕನ್ನಡಕ್ಕೆ ಡಬ್​ ಆಗಿ ತೆರೆಕಾಣುತ್ತಿದೆ.

ಸಿನಿಮಾಗಳು ಈಗ ಭಾಷೆಯ ಗಡಿಯನ್ನು ಮೀರುತ್ತಿವೆ. ಬೇರೆ ಬೇರೆ ರಾಜ್ಯಗಳ ಚಿತ್ರರಂಗಗಳು ಡಬ್ಬಿಂಗ್​ ಮೊರೆ ಹೋಗುತ್ತಿವೆ. ಗುಜರಾತಿ ಭಾಷೆಯ ಸಿನಿಮಾ ಕೂಡ ಕನ್ನಡಕ್ಕೆ ಡಬ್​ ಆಗುವ ಕಾಲ ಈಗ ಬಂದಿದೆ. ‘ವರ್​ ಪಧಾರವೋ ಸಾವಧಾನ್​’ ಸಿನಿಮಾವನ್ನು ‘ರಾಯರು ಬಂದರು ಮಾವನ ಮನೆಗೆ’ ಶೀರ್ಷಿಕೆಯಡಿ ಕನ್ನಡಕ್ಕೆ ತರುತ್ತಿರುವುದು ನಿರ್ಮಾಪಕ ಜಾಕ್ ಮಂಜು. ‘ವಿಕ್ರಾಂತ್​ ರೋಣ’ ಸಿನಿಮಾ ನಿರ್ಮಾಣ ಮಾಡಿದ್ದ ಜಾಕ್​ ಮಂಜು ಅವರು ಕಿಚ್ಚ ಸುದೀಪ್​ಗೆ ಆಪ್ತರು. ತಮ್ಮ ‘ಶಾಲಿನಿ ಆರ್ಟ್ಸ್​’ ಬ್ಯಾನರ್ ಮೂಲಕ ‘ರಾಯರು ಬಂದರು ಮಾವನ ಮನೆಗೆ’ ಸಿನಿಮಾವನ್ನು ಅವರು ಕನ್ನಡದ ಪ್ರೇಕ್ಷಕರ ಎದುರು ತರುತ್ತಿದ್ದಾರೆ.

‘ರತ್ನಪುರ’, ‘ಜಿತಿ ಲೇ ಜಿಂದಗಿ’ ಎಂಬ ಎರಡು ಹಿಟ್ ಚಿತ್ರಗಳನ್ನು ನೀಡಿರುವ ವಿಫುಲ್ ಶರ್ಮಾ ನಿರ್ದೇಶನದಲ್ಲಿ ‘ರಾಯರು ಬಂದರು ಮಾವನ ಮನೆಗೆ’ ಚಿತ್ರ ತಯಾರಾಗಿದೆ. ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧು ತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಶಾಂತ್ ಬರೋಟ್, ಜಯ್ ಪಾಂಡ್ಯ, ಜೈಮಿನಿ ತ್ರಿವೇದಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: Viduthalai Part 1: ಜನ ಮೆಚ್ಚಿದ ‘ವಿಡುದಲೈ’ ಸಿನಿಮಾ ಈಗ ಕನ್ನಡದಲ್ಲೂ ಲಭ್ಯ; ಜೀ5 ಒಟಿಟಿ ಮೂಲಕ ಪ್ರಸಾರ

ಕನ್ನಡದ ಪ್ರೇಕ್ಷಕರನ್ನು ತಲುಪಲು ಗುಜರಾತಿ ಚಿತ್ರತಂಡ ಸಕಲ ತಯಾರಿ ಮಾಡಿಕೊಂಡಿದೆ. ಜುಲೈ 7ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಕುರಿತು ಮಾಹಿತಿ ಹಂಚಿಕೊಳ್ಳಲು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಲ್ಲಿ ಇಡೀ ತಂಡ ಭಾಗಿಯಾಗಲಿದೆ. ಜೂನ್​ 9ರಂದು ಸುದ್ದಿಗೋಷ್ಠಿ ನಡೆಯಲಿದ್ದು, ಅಂದು ಹೆಚ್ಚಿನ ವಿವರಗಳು ಸಿಗಲಿದೆ. ಕರುನಾಡಿನಲ್ಲಿ ಈ ಸಿನಿಮಾದ ಪ್ರಚಾರ ಕಾರ್ಯಕ್ಕೆ ವೇದಿಕೆ ಸಜ್ಜಾಗುತ್ತಿದೆ.

ಇದನ್ನೂ ಓದಿ: ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ

‘ರಾಯರು ಬಂದರು ಮಾವನ ಮನೆಗೆ’ ಚಿತ್ರವು ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ, ಕುಟುಂಬ, ಸಂಬಂಧಗಳ ಸುತ್ತ ಇಡೀ ಸಿನಿಮಾ ಸಾಗಲಿದೆ. ಗುಜರಾತಿ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆ ಆಗುತ್ತಿರುವುದು ಇದೇ ಮೊದಲು ಎಂಬ ಕಾರಣಕ್ಕೆ ಸಹಜವಾಗಿಯೇ ಕುತೂಹಲ ಮೂಡಿದೆ. ಈ ಚಿತ್ರಕ್ಕೆ ಕರುನಾಡಿನ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ