AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NBK107: ದುನಿಯಾ ವಿಜಯ್ ಆಯ್ತು, ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ; ಹಿರಿದಾಗುತ್ತಿದೆ ‘ಎನ್​ಬಿಕೆ107’ ತಾರಾಗಣ

Nandamuri Balakrishna | Duniya Vijay: ನಂದಮೂರಿ ಬಾಲಕೃಷ್ಣ ನಟನೆಯ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರತಂಡದ ಕಲಾವಿದರನ್ನು ಪರಿಚಯಿಸಲಾಗುತ್ತಿದೆ. ಇತ್ತೀಚೆಗೆ ದುನಿಯಾ ವಿಜಯ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ.

NBK107: ದುನಿಯಾ ವಿಜಯ್ ಆಯ್ತು, ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ; ಹಿರಿದಾಗುತ್ತಿದೆ ‘ಎನ್​ಬಿಕೆ107’ ತಾರಾಗಣ
ವರಲಕ್ಷ್ಮಿ, ದುನಿಯಾ ವಿಜಯ್
TV9 Web
| Edited By: |

Updated on:Jan 05, 2022 | 7:30 PM

Share

ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನ ಸಂತಸದಲ್ಲಿದ್ದಾರೆ. ಅವರ ಹೊಸ ಚಿತ್ರ ಎನ್​ಬಿಕೆ107 ಅನೌನ್ಸ್ ಆಗಿದ್ದು, ಖ್ಯಾತ ಕಲಾವಿದರು ಚಿತ್ರತಂಡವನ್ನು ಕೂಡಿಕೊಳ್ಳುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ನೀಡಿದ ಗೋಪಿಚಂದ್ ಮಲಿನೇನಿ ಆಕ್ಷನ್ ಕಟ್ ಹೇಳುತ್ತಿರುವ ಎನ್​ಬಿಕೆ107ಗೆ ಶೃತಿ ಹಾಸನ್ ನಾಯಕಿ. ಇತ್ತೀಚೆಗೆ ಸ್ಯಾಂಡಲ್​ವುಡ್ ತಾರೆ ದುನಿಯಾ ವಿಜಯ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಕಿಚ್ಚ ಸುದೀಪ್ ಜತೆ ‘ಮಾಣಿಕ್ಯ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ವರಲಕ್ಷ್ಮಿ ಶರತ್​ಕುಮಾರ್ ಇದೀಗ ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಚಿತ್ರತಂಡ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಅವರಿಗೆ ಸ್ವಾಗತ ಕೋರಿದೆ.

ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ. ಸದ್ಯ ಅದನ್ನು ಎನ್​ಬಿಕೆ 107 ಎಂದು ಕರೆಯಲಾಗುತ್ತಿದ್ದು, ಶ್ರುತಿ ಹಾಸನ್ ನಾಯಕಿಯಾಗಿ​ ಬಣ್ಣಹಚ್ಚಲಿದ್ದಾರೆ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದ್ದು, ನೈಜ ಘಟನೆಗಳನ್ನು ಆಧರಿಸಿ ಚಿತ್ರ ತಯಾರಾಗುತ್ತಿದೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ವರಲಕ್ಷ್ಮಿ ಶರತ್​ಕುಮಾರ್ ‘ಎನ್​ಬಿಕೆ107’ರಲ್ಲಿ ‘ಜಯಮ್ಮ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿನ ಅವರ ಪಾತ್ರವನ್ನು ಎಲ್ಲರೂ ನೆನಪಿನಲ್ಲಿಡಲಿದ್ದೀರಿ ಎನ್ನುವ ಭರವಸೆಯನ್ನು ನಿರ್ದೇಶಕ ಗೋಪಿಚಂದ್ ನೀಡಿದ್ದಾರೆ. ಈ ಮೂಲಕ ವರಲಕ್ಷ್ಮಿ ಅವರದ್ದು ಪ್ರಮುಖ ಪಾತ್ರವಾಗಿದೆ ಎಂಬ ಸುಳಿವನ್ನು ಅವರು ನೀಡಿದ್ದಾರೆ. ನಿರ್ದೇಶಕ ಗೋಪಿಚಂದ್ ಹಂಚಿಕೊಂಡ ಟ್ವೀಟ್ ಇಲ್ಲಿದೆ.

ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದ ದುನಿಯಾ ವಿಜಯ್: ದುನಿಯಾ ವಿಜಯ್​ ಟಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಮೊದಲೇ ಓಡಾಡಿತ್ತು. ಇತ್ತೀಚೆಗೆ ಚಿತ್ರತಂಡ ಅದನ್ನು ಅಧಿಕೃತವಾಗಿ ಹಂಚಿಕೊಂಡಿತ್ತು. ಸ್ಯಾಂಡಲ್​ವುಡ್ ಸೆನ್ಸೇಶನ್ ಚಿತ್ರತಂಡ ಕೂಡಿಕೊಳ್ಳುತ್ತಿರುವುದು ಬಹಳ ಸಂತಸದ ವಿಚಾರ. ವಿಲನ್ ಎಂಬುದಕ್ಕೆ ಹೊಸ ಅರ್ಥ ಬರೆಯಲಿದ್ದಾರೆ ಎಂದು ಗೋಪಿಚಂದ್ ಟ್ವೀಟ್ ಮಾಡಿದ್ದರು. ಈ ಮೂಲಕ ದುನಿಯಾ ವಿಜಯ್ ಪಾತ್ರದ ಬಗ್ಗೆ ಅಪಾರ ನಿರೀಕ್ಷೆಗಳು ಮೂಡಿದ್ದವು.

‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಈ ತಿಂಗಳಿನಿಂದ ಪ್ರಾರಂಭವಾಗಲಿದೆ ಎನ್ನಲಾಗಿದೆ. ಎಸ್.ತಮನ್ ಸಂಗೀತ ನೀಡುತ್ತಿದ್ದು, ಬಿಗ್ ಬಜೆಟ್​ನಲ್ಲಿ ಚಿತ್ರ ತಯಾರಾಗಲಿದೆ.

ಇದನ್ನೂ ಓದಿ:

ಟಾಲಿವುಡ್​ಗೆ ಎಂಟ್ರಿ ನೀಡಿದ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​

Shubha Poonja: ಸಿಂಪಲ್ ಆಗಿ ಗೆಳೆಯ ಸುಮಂತ್ ಜತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಶುಭಾ ಪೂಂಜ

Published On - 7:18 pm, Wed, 5 January 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್