AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NBK107: ದುನಿಯಾ ವಿಜಯ್ ಆಯ್ತು, ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ; ಹಿರಿದಾಗುತ್ತಿದೆ ‘ಎನ್​ಬಿಕೆ107’ ತಾರಾಗಣ

Nandamuri Balakrishna | Duniya Vijay: ನಂದಮೂರಿ ಬಾಲಕೃಷ್ಣ ನಟನೆಯ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರತಂಡದ ಕಲಾವಿದರನ್ನು ಪರಿಚಯಿಸಲಾಗುತ್ತಿದೆ. ಇತ್ತೀಚೆಗೆ ದುನಿಯಾ ವಿಜಯ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ.

NBK107: ದುನಿಯಾ ವಿಜಯ್ ಆಯ್ತು, ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ; ಹಿರಿದಾಗುತ್ತಿದೆ ‘ಎನ್​ಬಿಕೆ107’ ತಾರಾಗಣ
ವರಲಕ್ಷ್ಮಿ, ದುನಿಯಾ ವಿಜಯ್
TV9 Web
| Updated By: shivaprasad.hs|

Updated on:Jan 05, 2022 | 7:30 PM

Share

ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನ ಸಂತಸದಲ್ಲಿದ್ದಾರೆ. ಅವರ ಹೊಸ ಚಿತ್ರ ಎನ್​ಬಿಕೆ107 ಅನೌನ್ಸ್ ಆಗಿದ್ದು, ಖ್ಯಾತ ಕಲಾವಿದರು ಚಿತ್ರತಂಡವನ್ನು ಕೂಡಿಕೊಳ್ಳುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ನೀಡಿದ ಗೋಪಿಚಂದ್ ಮಲಿನೇನಿ ಆಕ್ಷನ್ ಕಟ್ ಹೇಳುತ್ತಿರುವ ಎನ್​ಬಿಕೆ107ಗೆ ಶೃತಿ ಹಾಸನ್ ನಾಯಕಿ. ಇತ್ತೀಚೆಗೆ ಸ್ಯಾಂಡಲ್​ವುಡ್ ತಾರೆ ದುನಿಯಾ ವಿಜಯ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಕಿಚ್ಚ ಸುದೀಪ್ ಜತೆ ‘ಮಾಣಿಕ್ಯ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ವರಲಕ್ಷ್ಮಿ ಶರತ್​ಕುಮಾರ್ ಇದೀಗ ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಚಿತ್ರತಂಡ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಅವರಿಗೆ ಸ್ವಾಗತ ಕೋರಿದೆ.

ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ. ಸದ್ಯ ಅದನ್ನು ಎನ್​ಬಿಕೆ 107 ಎಂದು ಕರೆಯಲಾಗುತ್ತಿದ್ದು, ಶ್ರುತಿ ಹಾಸನ್ ನಾಯಕಿಯಾಗಿ​ ಬಣ್ಣಹಚ್ಚಲಿದ್ದಾರೆ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದ್ದು, ನೈಜ ಘಟನೆಗಳನ್ನು ಆಧರಿಸಿ ಚಿತ್ರ ತಯಾರಾಗುತ್ತಿದೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ವರಲಕ್ಷ್ಮಿ ಶರತ್​ಕುಮಾರ್ ‘ಎನ್​ಬಿಕೆ107’ರಲ್ಲಿ ‘ಜಯಮ್ಮ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿನ ಅವರ ಪಾತ್ರವನ್ನು ಎಲ್ಲರೂ ನೆನಪಿನಲ್ಲಿಡಲಿದ್ದೀರಿ ಎನ್ನುವ ಭರವಸೆಯನ್ನು ನಿರ್ದೇಶಕ ಗೋಪಿಚಂದ್ ನೀಡಿದ್ದಾರೆ. ಈ ಮೂಲಕ ವರಲಕ್ಷ್ಮಿ ಅವರದ್ದು ಪ್ರಮುಖ ಪಾತ್ರವಾಗಿದೆ ಎಂಬ ಸುಳಿವನ್ನು ಅವರು ನೀಡಿದ್ದಾರೆ. ನಿರ್ದೇಶಕ ಗೋಪಿಚಂದ್ ಹಂಚಿಕೊಂಡ ಟ್ವೀಟ್ ಇಲ್ಲಿದೆ.

ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದ ದುನಿಯಾ ವಿಜಯ್: ದುನಿಯಾ ವಿಜಯ್​ ಟಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಮೊದಲೇ ಓಡಾಡಿತ್ತು. ಇತ್ತೀಚೆಗೆ ಚಿತ್ರತಂಡ ಅದನ್ನು ಅಧಿಕೃತವಾಗಿ ಹಂಚಿಕೊಂಡಿತ್ತು. ಸ್ಯಾಂಡಲ್​ವುಡ್ ಸೆನ್ಸೇಶನ್ ಚಿತ್ರತಂಡ ಕೂಡಿಕೊಳ್ಳುತ್ತಿರುವುದು ಬಹಳ ಸಂತಸದ ವಿಚಾರ. ವಿಲನ್ ಎಂಬುದಕ್ಕೆ ಹೊಸ ಅರ್ಥ ಬರೆಯಲಿದ್ದಾರೆ ಎಂದು ಗೋಪಿಚಂದ್ ಟ್ವೀಟ್ ಮಾಡಿದ್ದರು. ಈ ಮೂಲಕ ದುನಿಯಾ ವಿಜಯ್ ಪಾತ್ರದ ಬಗ್ಗೆ ಅಪಾರ ನಿರೀಕ್ಷೆಗಳು ಮೂಡಿದ್ದವು.

‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಈ ತಿಂಗಳಿನಿಂದ ಪ್ರಾರಂಭವಾಗಲಿದೆ ಎನ್ನಲಾಗಿದೆ. ಎಸ್.ತಮನ್ ಸಂಗೀತ ನೀಡುತ್ತಿದ್ದು, ಬಿಗ್ ಬಜೆಟ್​ನಲ್ಲಿ ಚಿತ್ರ ತಯಾರಾಗಲಿದೆ.

ಇದನ್ನೂ ಓದಿ:

ಟಾಲಿವುಡ್​ಗೆ ಎಂಟ್ರಿ ನೀಡಿದ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​

Shubha Poonja: ಸಿಂಪಲ್ ಆಗಿ ಗೆಳೆಯ ಸುಮಂತ್ ಜತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಶುಭಾ ಪೂಂಜ

Published On - 7:18 pm, Wed, 5 January 22

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ