AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕಣ್ಣಿಗೆ ಅವರು ಸುಂದರವಾಗಿದ್ದಾರೆ’: ಭಾವಿ ಪತಿಯನ್ನು ಟ್ರೋಲ್​ ಮಾಡಿದಕ್ಕೆ ನಟಿ ಪ್ರತಿಕ್ರಿಯೆ

ನಿಕೋಲಯ್​​ ಸಚ್​ದೇವ್​ ಅವರಿಗೆ ವಿಚ್ಛೇದನ ಆಗಿದೆ. ಈಗ ವರಲಕ್ಷ್ಮಿ ಶರತ್​ ಕುಮಾರ್​ ಜೊತೆ ಅವರು 2ನೇ ಮದುವೆ ಆಗುತ್ತಿದ್ದಾರೆ. ಅವರ ಫೋಟೋಗಳನ್ನು ನೋಡಿ ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಈ ವಿಚಾರಗಳ ಕುರಿತು ವರಲಕ್ಷ್ಮಿ ಮಾತನಾಡಿದ್ದಾರೆ. ತಾವು ಮದುವೆ ಆಗಲಿರುವ ವ್ಯಕ್ತಿಯ ಬಗ್ಗೆ ಇರುವ ನೆಗೆಟಿವ್​ ಕಮೆಂಟ್​ಗಳ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ.

‘ನನ್ನ ಕಣ್ಣಿಗೆ ಅವರು ಸುಂದರವಾಗಿದ್ದಾರೆ’: ಭಾವಿ ಪತಿಯನ್ನು ಟ್ರೋಲ್​ ಮಾಡಿದಕ್ಕೆ ನಟಿ ಪ್ರತಿಕ್ರಿಯೆ
ವರಲಕ್ಷ್ಮಿ ಶರತ್​ಕುಮಾರ್​, ನಿಕೋಲಯ್​ ಸಚ್​ದೇವ್​
Follow us
ಮದನ್​ ಕುಮಾರ್​
|

Updated on: Apr 28, 2024 | 12:48 PM

ಬಹುಭಾಷಾ ನಟಿ ವರಲಕ್ಷ್ಮಿ ಶರತ್​ಕುಮಾರ್​ ಅವರು ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ಕಾರಣಕ್ಕಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಮಾರ್ಚ್​ ಮೊದಲ ವಾರದಲ್ಲಿ ಅವರು ನಿಶ್ಚಿತಾರ್ಥ ಮಾಡಿಕೊಂಡರು. ಬೇಸರದ ಸಂಗತಿ ಏನೆಂದರೆ, ವರಲಕ್ಷ್ಮಿ ಅವರು ಮದುವೆ ಆಗಲಿರುವ ನಿಕೋಲಯ್​​ ಸಚ್​ದೇವ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಜನರು ನೆಗೆಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಹಾಗಂತ ಅದಕ್ಕೆಲ್ಲ ವರಲಕ್ಷ್ಮಿ ಅವರು ಬೇಸರ ಮಾಡಿಕೊಂಡಿಲ್ಲ. ತಮ್ಮ ಭಾವಿ ಪತಿ ಸುಂದರವಾಗಿಯೇ ಇದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈನಲ್ಲಿ ಗ್ಯಾಲರಿಸ್ಟ್​ ಆಗಿರುವ ಹಾಗೂ ಪವರ್​ ಲಿಫ್ಟರ್​ ಆಗಿ ಗುರುತಿಸಿಕೊಂಡಿರುವ ನಿಕೋಲಯ್​​ ಸಚ್​ದೇವ್​ ಜೊತೆ ವರಲಕ್ಷ್ಮಿ ಶರತ್​ ಕುಮಾರ್​ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ನಿಶ್ವಿತಾರ್ಥದ ಬಳಿಕ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡರು. ಆ ಫೋಟೋದಲ್ಲಿ ನಿಕೋಲಯ್​ ಸಚ್​ದೇವ್​ ಅವರನ್ನು ನೋಡಿ ಅನೇಕರು ಟ್ರೋಲ್​ ಮಾಡಿದ್ದಾರೆ. ಆದರೆ ಅವುಗಳಿಗೆಲ್ಲ ವರಲಕ್ಷ್ಮೀ ಶರತ್​ಕುಮಾರ್​ ತಲೆ ಕೆಡಿಸಿಕೊಂಡಿಲ್ಲ.

ಅತಿ ಚಿಕ್ಕ ಬಟ್ಟೆ ಧರಿಸಿ ಬಂದ ಮೌನಿ ರಾಯ್​; ವೈರಲ್​ ವಿಡಿಯೋ ನೋಡಿ ಟ್ರೋಲ್​ ಮಾಡಿದ ನೆಟ್ಟಿಗರು

ಅಂದಹಾಗೆ, ನಿಕೋಲಯ್​​ ಸಚ್​ದೇವ್​ ಅವರಿಗೆ ಈಗಾಗಲೇ ಮದುವೆ ಆಗಿ, ವಿಚ್ಛೇದನ ಕೂಡ ಆಗಿದೆ. ಈಗ ಅವರು ವರಲಕ್ಷ್ಮಿ ಶರತ್​ ಕುಮಾರ್​ ಜೊತೆ ಎರಡನೇ ಮದುವೆ ಆಗಲು ಸಜ್ಜಾಗಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ವರಲಕ್ಷ್ಮಿ ಮಾತನಾಡಿದ್ದಾರೆ. ‘ನನ್ನ ತಂದೆ ಕೂಡ 2ನೇ ಮದುವೆ ಆದರು. ಅದರಲ್ಲಿ ಯಾವ ತಪ್ಪೂ ಇಲ್ಲ. ನಿಕ್​ (ನಿಕೋಲಯ್​​ ಸಚ್​ದೇವ್​) ಬಗ್ಗೆ ಜನರು ಮಾತಾಡುವುದನ್ನು ನಾನು ಕೇಳಿದ್ದೇನೆ. ನನ್ನ ಕಣ್ಣಿಗೆ ಅವರು ಹ್ಯಾಂಡ್ಸಮ್​ ಆಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್​ ಕಮೆಂಟ್​ ಮಾಡುವವರ ಬಗ್ಗೆ ನಾನು ಕೇರ್​ ಮಾಡುವುದಿಲ್ಲ’ ಎಂದು ವರಲಕ್ಷ್ಮೀ ಹೇಳಿದ್ದಾರೆ.

‘ಬೇರೆಯವರಿಗೆ ನಾನು ಯಾಕೆ ಉತ್ತರ ಕೊಡಬೇಕು? ಮೊದಲಿನಿಂದಲೂ ನಾನು ಅದನ್ನು ಅವಾಯ್ಡ್​ ಮಾಡಿಕೊಂಡು ಬಂದಿದ್ದೇನೆ. ನಿಕ್​ ತಂದೆ-ತಾಯಿ ಒಂದು ಆರ್ಟ್​ ಗ್ಯಾಲರಿ ನಡೆಸುತ್ತಾರೆ. ನಿಕ್​ ಮತ್ತು ಅವರ ಪುತ್ರಿ ಪವರ್ ಲಿಫ್ಟಿಂಗ್​ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಅವರ ಮಾಜಿ ಪತ್ನಿ ಜೊತೆಗೂ ನಾನು ಆತ್ಮೀಯವಾಗಿ ಇದ್ದೇನೆ. ಅವರು ಒಳ್ಳೆಯ ವ್ಯಕ್ತಿ. ಎಲ್ಲವೂ ಚೆನ್ನಾಗಿದೆ’ ಎಂದಿದ್ದಾರೆ ವರಲಕ್ಷ್ಮಿ. ಈ ವರ್ಷ ತೆರೆಕಂಡು ಸೂಪರ್​ ಹಿಟ್​ ಆದ ‘ಹನುಮಾನ್​’ ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದಾರೆ. ಕನ್ನಡದ ‘ಮಾಣಿಕ್ಯ’ ಚಿತ್ರದಲ್ಲಿ ಅವರು ಸುದೀಪ್​ ಜತೆ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO