AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕಣ್ಣಿಗೆ ಅವರು ಸುಂದರವಾಗಿದ್ದಾರೆ’: ಭಾವಿ ಪತಿಯನ್ನು ಟ್ರೋಲ್​ ಮಾಡಿದಕ್ಕೆ ನಟಿ ಪ್ರತಿಕ್ರಿಯೆ

ನಿಕೋಲಯ್​​ ಸಚ್​ದೇವ್​ ಅವರಿಗೆ ವಿಚ್ಛೇದನ ಆಗಿದೆ. ಈಗ ವರಲಕ್ಷ್ಮಿ ಶರತ್​ ಕುಮಾರ್​ ಜೊತೆ ಅವರು 2ನೇ ಮದುವೆ ಆಗುತ್ತಿದ್ದಾರೆ. ಅವರ ಫೋಟೋಗಳನ್ನು ನೋಡಿ ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಈ ವಿಚಾರಗಳ ಕುರಿತು ವರಲಕ್ಷ್ಮಿ ಮಾತನಾಡಿದ್ದಾರೆ. ತಾವು ಮದುವೆ ಆಗಲಿರುವ ವ್ಯಕ್ತಿಯ ಬಗ್ಗೆ ಇರುವ ನೆಗೆಟಿವ್​ ಕಮೆಂಟ್​ಗಳ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ.

‘ನನ್ನ ಕಣ್ಣಿಗೆ ಅವರು ಸುಂದರವಾಗಿದ್ದಾರೆ’: ಭಾವಿ ಪತಿಯನ್ನು ಟ್ರೋಲ್​ ಮಾಡಿದಕ್ಕೆ ನಟಿ ಪ್ರತಿಕ್ರಿಯೆ
ವರಲಕ್ಷ್ಮಿ ಶರತ್​ಕುಮಾರ್​, ನಿಕೋಲಯ್​ ಸಚ್​ದೇವ್​
ಮದನ್​ ಕುಮಾರ್​
|

Updated on: Apr 28, 2024 | 12:48 PM

Share

ಬಹುಭಾಷಾ ನಟಿ ವರಲಕ್ಷ್ಮಿ ಶರತ್​ಕುಮಾರ್​ ಅವರು ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ಕಾರಣಕ್ಕಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಮಾರ್ಚ್​ ಮೊದಲ ವಾರದಲ್ಲಿ ಅವರು ನಿಶ್ಚಿತಾರ್ಥ ಮಾಡಿಕೊಂಡರು. ಬೇಸರದ ಸಂಗತಿ ಏನೆಂದರೆ, ವರಲಕ್ಷ್ಮಿ ಅವರು ಮದುವೆ ಆಗಲಿರುವ ನಿಕೋಲಯ್​​ ಸಚ್​ದೇವ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಜನರು ನೆಗೆಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಹಾಗಂತ ಅದಕ್ಕೆಲ್ಲ ವರಲಕ್ಷ್ಮಿ ಅವರು ಬೇಸರ ಮಾಡಿಕೊಂಡಿಲ್ಲ. ತಮ್ಮ ಭಾವಿ ಪತಿ ಸುಂದರವಾಗಿಯೇ ಇದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈನಲ್ಲಿ ಗ್ಯಾಲರಿಸ್ಟ್​ ಆಗಿರುವ ಹಾಗೂ ಪವರ್​ ಲಿಫ್ಟರ್​ ಆಗಿ ಗುರುತಿಸಿಕೊಂಡಿರುವ ನಿಕೋಲಯ್​​ ಸಚ್​ದೇವ್​ ಜೊತೆ ವರಲಕ್ಷ್ಮಿ ಶರತ್​ ಕುಮಾರ್​ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ನಿಶ್ವಿತಾರ್ಥದ ಬಳಿಕ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡರು. ಆ ಫೋಟೋದಲ್ಲಿ ನಿಕೋಲಯ್​ ಸಚ್​ದೇವ್​ ಅವರನ್ನು ನೋಡಿ ಅನೇಕರು ಟ್ರೋಲ್​ ಮಾಡಿದ್ದಾರೆ. ಆದರೆ ಅವುಗಳಿಗೆಲ್ಲ ವರಲಕ್ಷ್ಮೀ ಶರತ್​ಕುಮಾರ್​ ತಲೆ ಕೆಡಿಸಿಕೊಂಡಿಲ್ಲ.

ಅತಿ ಚಿಕ್ಕ ಬಟ್ಟೆ ಧರಿಸಿ ಬಂದ ಮೌನಿ ರಾಯ್​; ವೈರಲ್​ ವಿಡಿಯೋ ನೋಡಿ ಟ್ರೋಲ್​ ಮಾಡಿದ ನೆಟ್ಟಿಗರು

ಅಂದಹಾಗೆ, ನಿಕೋಲಯ್​​ ಸಚ್​ದೇವ್​ ಅವರಿಗೆ ಈಗಾಗಲೇ ಮದುವೆ ಆಗಿ, ವಿಚ್ಛೇದನ ಕೂಡ ಆಗಿದೆ. ಈಗ ಅವರು ವರಲಕ್ಷ್ಮಿ ಶರತ್​ ಕುಮಾರ್​ ಜೊತೆ ಎರಡನೇ ಮದುವೆ ಆಗಲು ಸಜ್ಜಾಗಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ವರಲಕ್ಷ್ಮಿ ಮಾತನಾಡಿದ್ದಾರೆ. ‘ನನ್ನ ತಂದೆ ಕೂಡ 2ನೇ ಮದುವೆ ಆದರು. ಅದರಲ್ಲಿ ಯಾವ ತಪ್ಪೂ ಇಲ್ಲ. ನಿಕ್​ (ನಿಕೋಲಯ್​​ ಸಚ್​ದೇವ್​) ಬಗ್ಗೆ ಜನರು ಮಾತಾಡುವುದನ್ನು ನಾನು ಕೇಳಿದ್ದೇನೆ. ನನ್ನ ಕಣ್ಣಿಗೆ ಅವರು ಹ್ಯಾಂಡ್ಸಮ್​ ಆಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್​ ಕಮೆಂಟ್​ ಮಾಡುವವರ ಬಗ್ಗೆ ನಾನು ಕೇರ್​ ಮಾಡುವುದಿಲ್ಲ’ ಎಂದು ವರಲಕ್ಷ್ಮೀ ಹೇಳಿದ್ದಾರೆ.

‘ಬೇರೆಯವರಿಗೆ ನಾನು ಯಾಕೆ ಉತ್ತರ ಕೊಡಬೇಕು? ಮೊದಲಿನಿಂದಲೂ ನಾನು ಅದನ್ನು ಅವಾಯ್ಡ್​ ಮಾಡಿಕೊಂಡು ಬಂದಿದ್ದೇನೆ. ನಿಕ್​ ತಂದೆ-ತಾಯಿ ಒಂದು ಆರ್ಟ್​ ಗ್ಯಾಲರಿ ನಡೆಸುತ್ತಾರೆ. ನಿಕ್​ ಮತ್ತು ಅವರ ಪುತ್ರಿ ಪವರ್ ಲಿಫ್ಟಿಂಗ್​ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಅವರ ಮಾಜಿ ಪತ್ನಿ ಜೊತೆಗೂ ನಾನು ಆತ್ಮೀಯವಾಗಿ ಇದ್ದೇನೆ. ಅವರು ಒಳ್ಳೆಯ ವ್ಯಕ್ತಿ. ಎಲ್ಲವೂ ಚೆನ್ನಾಗಿದೆ’ ಎಂದಿದ್ದಾರೆ ವರಲಕ್ಷ್ಮಿ. ಈ ವರ್ಷ ತೆರೆಕಂಡು ಸೂಪರ್​ ಹಿಟ್​ ಆದ ‘ಹನುಮಾನ್​’ ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದಾರೆ. ಕನ್ನಡದ ‘ಮಾಣಿಕ್ಯ’ ಚಿತ್ರದಲ್ಲಿ ಅವರು ಸುದೀಪ್​ ಜತೆ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ