AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕಣ್ಣಿಗೆ ಅವರು ಸುಂದರವಾಗಿದ್ದಾರೆ’: ಭಾವಿ ಪತಿಯನ್ನು ಟ್ರೋಲ್​ ಮಾಡಿದಕ್ಕೆ ನಟಿ ಪ್ರತಿಕ್ರಿಯೆ

ನಿಕೋಲಯ್​​ ಸಚ್​ದೇವ್​ ಅವರಿಗೆ ವಿಚ್ಛೇದನ ಆಗಿದೆ. ಈಗ ವರಲಕ್ಷ್ಮಿ ಶರತ್​ ಕುಮಾರ್​ ಜೊತೆ ಅವರು 2ನೇ ಮದುವೆ ಆಗುತ್ತಿದ್ದಾರೆ. ಅವರ ಫೋಟೋಗಳನ್ನು ನೋಡಿ ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಈ ವಿಚಾರಗಳ ಕುರಿತು ವರಲಕ್ಷ್ಮಿ ಮಾತನಾಡಿದ್ದಾರೆ. ತಾವು ಮದುವೆ ಆಗಲಿರುವ ವ್ಯಕ್ತಿಯ ಬಗ್ಗೆ ಇರುವ ನೆಗೆಟಿವ್​ ಕಮೆಂಟ್​ಗಳ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ.

‘ನನ್ನ ಕಣ್ಣಿಗೆ ಅವರು ಸುಂದರವಾಗಿದ್ದಾರೆ’: ಭಾವಿ ಪತಿಯನ್ನು ಟ್ರೋಲ್​ ಮಾಡಿದಕ್ಕೆ ನಟಿ ಪ್ರತಿಕ್ರಿಯೆ
ವರಲಕ್ಷ್ಮಿ ಶರತ್​ಕುಮಾರ್​, ನಿಕೋಲಯ್​ ಸಚ್​ದೇವ್​
ಮದನ್​ ಕುಮಾರ್​
|

Updated on: Apr 28, 2024 | 12:48 PM

Share

ಬಹುಭಾಷಾ ನಟಿ ವರಲಕ್ಷ್ಮಿ ಶರತ್​ಕುಮಾರ್​ ಅವರು ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ಕಾರಣಕ್ಕಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಮಾರ್ಚ್​ ಮೊದಲ ವಾರದಲ್ಲಿ ಅವರು ನಿಶ್ಚಿತಾರ್ಥ ಮಾಡಿಕೊಂಡರು. ಬೇಸರದ ಸಂಗತಿ ಏನೆಂದರೆ, ವರಲಕ್ಷ್ಮಿ ಅವರು ಮದುವೆ ಆಗಲಿರುವ ನಿಕೋಲಯ್​​ ಸಚ್​ದೇವ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಜನರು ನೆಗೆಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಹಾಗಂತ ಅದಕ್ಕೆಲ್ಲ ವರಲಕ್ಷ್ಮಿ ಅವರು ಬೇಸರ ಮಾಡಿಕೊಂಡಿಲ್ಲ. ತಮ್ಮ ಭಾವಿ ಪತಿ ಸುಂದರವಾಗಿಯೇ ಇದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈನಲ್ಲಿ ಗ್ಯಾಲರಿಸ್ಟ್​ ಆಗಿರುವ ಹಾಗೂ ಪವರ್​ ಲಿಫ್ಟರ್​ ಆಗಿ ಗುರುತಿಸಿಕೊಂಡಿರುವ ನಿಕೋಲಯ್​​ ಸಚ್​ದೇವ್​ ಜೊತೆ ವರಲಕ್ಷ್ಮಿ ಶರತ್​ ಕುಮಾರ್​ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ನಿಶ್ವಿತಾರ್ಥದ ಬಳಿಕ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡರು. ಆ ಫೋಟೋದಲ್ಲಿ ನಿಕೋಲಯ್​ ಸಚ್​ದೇವ್​ ಅವರನ್ನು ನೋಡಿ ಅನೇಕರು ಟ್ರೋಲ್​ ಮಾಡಿದ್ದಾರೆ. ಆದರೆ ಅವುಗಳಿಗೆಲ್ಲ ವರಲಕ್ಷ್ಮೀ ಶರತ್​ಕುಮಾರ್​ ತಲೆ ಕೆಡಿಸಿಕೊಂಡಿಲ್ಲ.

ಅತಿ ಚಿಕ್ಕ ಬಟ್ಟೆ ಧರಿಸಿ ಬಂದ ಮೌನಿ ರಾಯ್​; ವೈರಲ್​ ವಿಡಿಯೋ ನೋಡಿ ಟ್ರೋಲ್​ ಮಾಡಿದ ನೆಟ್ಟಿಗರು

ಅಂದಹಾಗೆ, ನಿಕೋಲಯ್​​ ಸಚ್​ದೇವ್​ ಅವರಿಗೆ ಈಗಾಗಲೇ ಮದುವೆ ಆಗಿ, ವಿಚ್ಛೇದನ ಕೂಡ ಆಗಿದೆ. ಈಗ ಅವರು ವರಲಕ್ಷ್ಮಿ ಶರತ್​ ಕುಮಾರ್​ ಜೊತೆ ಎರಡನೇ ಮದುವೆ ಆಗಲು ಸಜ್ಜಾಗಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ವರಲಕ್ಷ್ಮಿ ಮಾತನಾಡಿದ್ದಾರೆ. ‘ನನ್ನ ತಂದೆ ಕೂಡ 2ನೇ ಮದುವೆ ಆದರು. ಅದರಲ್ಲಿ ಯಾವ ತಪ್ಪೂ ಇಲ್ಲ. ನಿಕ್​ (ನಿಕೋಲಯ್​​ ಸಚ್​ದೇವ್​) ಬಗ್ಗೆ ಜನರು ಮಾತಾಡುವುದನ್ನು ನಾನು ಕೇಳಿದ್ದೇನೆ. ನನ್ನ ಕಣ್ಣಿಗೆ ಅವರು ಹ್ಯಾಂಡ್ಸಮ್​ ಆಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್​ ಕಮೆಂಟ್​ ಮಾಡುವವರ ಬಗ್ಗೆ ನಾನು ಕೇರ್​ ಮಾಡುವುದಿಲ್ಲ’ ಎಂದು ವರಲಕ್ಷ್ಮೀ ಹೇಳಿದ್ದಾರೆ.

‘ಬೇರೆಯವರಿಗೆ ನಾನು ಯಾಕೆ ಉತ್ತರ ಕೊಡಬೇಕು? ಮೊದಲಿನಿಂದಲೂ ನಾನು ಅದನ್ನು ಅವಾಯ್ಡ್​ ಮಾಡಿಕೊಂಡು ಬಂದಿದ್ದೇನೆ. ನಿಕ್​ ತಂದೆ-ತಾಯಿ ಒಂದು ಆರ್ಟ್​ ಗ್ಯಾಲರಿ ನಡೆಸುತ್ತಾರೆ. ನಿಕ್​ ಮತ್ತು ಅವರ ಪುತ್ರಿ ಪವರ್ ಲಿಫ್ಟಿಂಗ್​ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಅವರ ಮಾಜಿ ಪತ್ನಿ ಜೊತೆಗೂ ನಾನು ಆತ್ಮೀಯವಾಗಿ ಇದ್ದೇನೆ. ಅವರು ಒಳ್ಳೆಯ ವ್ಯಕ್ತಿ. ಎಲ್ಲವೂ ಚೆನ್ನಾಗಿದೆ’ ಎಂದಿದ್ದಾರೆ ವರಲಕ್ಷ್ಮಿ. ಈ ವರ್ಷ ತೆರೆಕಂಡು ಸೂಪರ್​ ಹಿಟ್​ ಆದ ‘ಹನುಮಾನ್​’ ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದಾರೆ. ಕನ್ನಡದ ‘ಮಾಣಿಕ್ಯ’ ಚಿತ್ರದಲ್ಲಿ ಅವರು ಸುದೀಪ್​ ಜತೆ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ