AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu first look: ವಾರಿಸು ಲುಕ್​ಗೆ ದಿ ಬಾಸ್ ರಿಟರ್ನ್ಸ್​ ಎಂದ ವಿಜಯ್ ಫ್ಯಾನ್ಸ್​

Varisu first look: ಕಾಲಿವುಡ್​ನಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದ ಅವರ ಕೊನೆಯ ಸಿನಿಮಾ ಬೀಸ್ಟ್ ಅಟ್ಟರ್ ಫ್ಲಾಪ್ ಆಗಿತ್ತು. ಆ ಚಿತ್ರದ ಬಗ್ಗೆ ಇಳಯ ದಳಪತಿ ಅಭಿಮಾನಿಗಳೇ ಅಸಾಮಾಧಾನ ಹೊರಹಾಕಿದ್ದರು.

Varisu first look: ವಾರಿಸು ಲುಕ್​ಗೆ ದಿ ಬಾಸ್ ರಿಟರ್ನ್ಸ್​ ಎಂದ ವಿಜಯ್ ಫ್ಯಾನ್ಸ್​
Varisu first look
TV9 Web
| Edited By: |

Updated on: Jun 21, 2022 | 8:27 PM

Share

Varisu first look: ತಮಿಳು ನಟ ಇಳಯ ದಳಪತಿ ವಿಜಯ್ (Vijay) ನಟನೆಯ ಮುಂಬರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ತಮ್ಮ 48 ನೇ ಹುಟ್ಟುಹಬ್ಬದ ಮುನ್ನ ದಿನದಂದು ವಿಜಯ್ ತಮ್ಮ 66ನೇ ಚಿತ್ರದ ಲುಕ್ ಹಾಗೂ ಟೈಟಲ್ ಅನ್ನು ಅನಾವರಣಗೊಳಿಸಿದ್ದಾರೆ. ಚಿತ್ರಕ್ಕೆ ವಾರಿಸು (Varisu first look) ಎಂದು ಶೀರ್ಷಿಕೆ ಇಡಲಾಗಿದ್ದು, ಇದರ ಅರ್ಥ ವಾರಸು ಅಥವಾ ವಾರಸುದಾರ ಎಂದಾಗಿದೆ. ಇನ್ನು ಟೈಟಲ್​ ಅಡಿಯಲ್ಲಿ ‘ದಿ ಬಾಸ್ ರಿಟರ್ನ್ಸ್’ ಎನ್ನುವ ಟ್ಯಾಗ್ ಲೈನ್ ನೀಡಲಾಗಿರುವುದು ವಿಶೇಷ. ಈ ಪೋಸ್ಟರ್​ನಲ್ಲಿ ವಿಜಯ್ ರಾಜಭಂಗಿಯಲ್ಲಿ ಕಾಣಿಸಿಕೊಂಡಿದ್ದು, ದುಬಾರಿ ಸೂಟ್‌ ಲುಕ್​ನಲ್ಲಿ ಮಿಂಚಿದ್ದಾರೆ.

ವಾರಿಸು ಚಿತ್ರಕ್ಕೆ ತೆಲುಗು ನಿರ್ದೇಶಕ ವಂಶಿ ಪೈಡಿಪಲ್ಲಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರದಲ್ಲಿ ವಿಜಯ್ ತನ್ನ ತಾಯ್ನಾಡಿಗೆ ಹಿಂದಿರುಗುವ ಎನ್‌ಆರ್‌ಐ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದೆಡೆ ವಂಶಿ ನಿರ್ದೇಶಿಸಿದ ಕೊನೆಯ ಚಿತ್ರ ಮಹರ್ಷಿ ತೆಲುಗಿನಲ್ಲಿ ಸೂಪರ್ ಡೂಪರ್ ಹಿಟ್ ಆಗಿತ್ತು. ಆ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಮಹೇಶ್ ಬಾಬು ಕಾಣಿಸಿಕೊಂಡಿದ್ದರು. ಅಲ್ಲದೆ ಅವರು ವಿದೇಶದಿಂದ ತನ್ನ ತಾಯ್ನಾಡಿಗೆ ಸೇವೆ ಸಲ್ಲಿಸಲು ಬರುವ ಕಥೆ ಹೊಂದಿತ್ತು. ಹೀಗಾಗಿ ಇದೇ ಕಥೆಯನ್ನೇ ತಮಿಳಿನಲ್ಲಿ ವಿಜಯ್ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಸದ್ಯ ಹೈದರಾಬಾದ್​ನಲ್ಲಿ ವಾರಿಸು ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ವಿಜಯ್​ಗೆ ಜೋಡಿಯಾಗುತ್ತಿದ್ದಾರೆ. ಇವರಲ್ಲದೆ , ಶಾಮ್, ಯೋಗಿ ಬಾಬು, ಶರತ್‌ಕುಮಾರ್, ಪ್ರಭು, ಪ್ರಕಾಶ್ ರಾಜ್ ಮತ್ತು ಜಯಸುಧಾ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಾರಿಸು ಚಿತ್ರವು ಮುಂದಿನ ವರ್ಷ ಸಂಕ್ರಾಂತಿ/ಪೊಂಗಲ್ ಹಬ್ಬದಂದು ಚಿತ್ರಮಂದಿರಗಳಿಗೆ ಬರುವ ನಿರೀಕ್ಷೆಯಿದ್ದು, ಈ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದ್ದಾರೆ ನಟ ವಿಜಯ್.

ಏಕೆಂದರೆ ಕಾಲಿವುಡ್​ನಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದ ಅವರ ಕೊನೆಯ ಸಿನಿಮಾ ಬೀಸ್ಟ್ ಅಟ್ಟರ್ ಫ್ಲಾಪ್ ಆಗಿತ್ತು. ಆ ಚಿತ್ರದ ಬಗ್ಗೆ ಇಳಯ ದಳಪತಿ ಅಭಿಮಾನಿಗಳೇ ಅಸಾಮಾಧಾನ ಹೊರಹಾಕಿದ್ದರು. ಹೀಗಾಗಿ ವಾರಿಸು ಮೂಲಕ ಅಭಿಮಾನಿಗಳ ಮನತಣಿಸುವ ವಿಶ್ವಾಸವನ್ನು ನಟ ವಿಜಯ್ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ