AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​

Thalapathy Vijay | Varisu Movie Trailer: ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ‘ವಾರಿಸು’ ಸಿನಿಮಾ ಸಿದ್ಧವಾಗಿದೆ. ಟ್ರೇಲರ್​ನಲ್ಲಿ ಅದ್ದೂರಿ ಮೇಕಿಂಗ್​ ಗಮನ ಸೆಳೆಯುತ್ತಿದೆ. ಟ್ರೇಲರ್​ ನೋಡಿದ ಅಭಿಮಾನಿಗಳು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ.

Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
ದಳಪತಿ ವಿಜಯ್
Follow us
TV9 Web
| Updated By: ಮದನ್​ ಕುಮಾರ್​

Updated on:Jan 04, 2023 | 6:32 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ವಾರಿಸು’ (Varisu Movie) ಚಿತ್ರದ ಬಿಡುಗಡೆ ದಿನಾಂಕ ಹತ್ತಿರವಾಗಿದೆ. ಜನವರಿ 12ರಂದು ಈ ಸಿನಿಮಾ ವಿಶ್ವಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಅದಕ್ಕೂ ಮುನ್ನ ನಿರೀಕ್ಷೆ ಹೆಚ್ಚಿಸಲು ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ದಳಪತಿ ವಿಜಯ್​ (Thalapathy Vijay) ಅಭಿನಯದ ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಚಿತ್ರದಲ್ಲಿ ಕೌಟುಂಬಿಕ ಕಥಾಹಂದರದ ಜೊತೆಗೆ ಸಾಹಸ ಸನ್ನಿವೇಶಗಳು ಕೂಡ ಭರ್ಜರಿಯಾಗಿ ಇವೆ ಎಂಬುದಕ್ಕೆ ‘ವಾರಿಸು’ ಟ್ರೇಲರ್​ (Varisu Trailer) ಮೂಲಕ ಸುಳಿವು ಸಿಕ್ಕಿದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದು, ಅನೇಕ ಘಟಾನುಘಟಿ ಕಲಾವಿದರು ನಟಿಸಿದ್ದಾರೆ.

ಬುಧವಾರ (ಜ.4) ಸಂಜೆ ‘ವಾರಿಸು’ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಒಂದು ಗಂಟೆ ಕಳೆಯುವುದೊಳಗೆ 4.2 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ಇದು ವೀಕ್ಷಣೆ ಕಂಡಿದೆ. ಸಿನಿಮಾ ಮೇಲೆ ಅಭಿಮಾನಿಗಳು ಎಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ. ದಳಪತಿ ವಿಜಯ್​ ಅವರು ಈ ಬಾರಿ ಫ್ಯಾಮಿಲಿ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಇದಕ್ಕೆ ಜನರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Rashmika Mandanna: ಮೊದಲು ‘ವಾರಿಸು’, ನಂತರ ‘ಮಿಷನ್​ ಮಜ್ನು’; ರಶ್ಮಿಕಾ ಮಂದಣ್ಣಗೆ ಈ ತಿಂಗಳು ಡಬಲ್​ ಧಮಾಕಾ

ದಳಪತಿ ವಿಜಯ್​ ಜೊತೆ ನಟಿಸಬೇಕು ಎಂಬುದು ರಶ್ಮಿಕಾ ಮಂದಣ್ಣ ಅವರ ಬಹುಕಾಲದ ಕನಸಾಗಿತ್ತು. ‘ವಾರಿಸು’ ಸಿನಿಮಾ ಮೂಲಕ ಅವರ ಕನಸು ನನಸಾಗಿದೆ. ಈ ಚಿತ್ರ ಸೂಪರ್​ ಹಿಟ್​ ಆದರೆ ಕಾಲಿವುಡ್​ನಲ್ಲಿ ಅವರ ಡಿಮ್ಯಾಂಡ್​ ಹೆಚ್ಚಾಗಲಿದೆ. ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡಿನಲ್ಲಿ ವಿಜಯ್​ ಮತ್ತು ರಶ್ಮಿಕಾ ಮಂದಣ್ಣ ಅವರ ಕೆಮಿಸ್ಟ್ರಿ ನೋಡಿ ಜನರು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ‘ವಾರಿಸು’ ಆಡಿಯೋ ಲಾಂಚ್​ನಲ್ಲಿ ‘ರಂಜಿತಮೆ..’ ಹಾಡಿಗೆ ಮಸ್ತ್ ಸ್ಟೆಪ್ ಹಾಕಿದ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್

ಎಸ್​. ತಮನ್​ ಅವರು ‘ವಾರಿಸು’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗಿದೆ. ಟ್ರೇಲರ್​ನಲ್ಲಿ ಅದ್ದೂರಿ ಮೇಕಿಂಗ್​ ಗಮನ ಸೆಳೆಯುತ್ತಿದೆ. ಟ್ರೇಲರ್​ ನೋಡಿದ ಅಭಿಮಾನಿಗಳು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಮೊದಲ ದಿನ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಯು ಪ್ರಮಾಣಪತ್ರ ಪಡೆದ ‘ವಾರಿಸು’

‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Wed, 4 January 23

ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ