AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ವರ್ತೂರು ಸಂತೋಷ್ ಮಾಲೂರು, ಚನ್ನಪಟ್ಟಣ, ಹೊಸಕೋಟೆಗೆ ಭೇಟಿ ನೀಡಿದ್ದಾರೆ. ಆಗ ಜನಸಾಗರವೇ ನೆರೆದಿತ್ತು. ಅಷ್ಟೇ ಅಲ್ಲ ಹೂವಿನ ದಳಗಳನ್ನು ಹಾಕಿ ಅವರನ್ನು ಸ್ವಾಗತಿಸಲಾಗಿದೆ. ಪುಷ್ಪ ರಾಶಿಯಲ್ಲಿ ಅವರು ಮಿಂದೆದ್ದಿದ್ದಾರೆ. ದೊಡ್ಡ ದೊಡ್ಡ ಹೂವಿನ ಮಾಲೆಯನ್ನು ಹಾಕಲಾಗಿದೆ.  ಅವರಿಗೆ ಸಿಕ್ಕ ಸ್ವಾಗತ ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್
ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Feb 09, 2024 | 12:36 PM

Share

ವರ್ತೂರು ಸಂತೋಷ್ (varthur Santosh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಸ್ಪರ್ಧಿ ಆಗಿದ್ದರು. ಅವರು ಹುಲಿ ಉಗುರು ಪ್ರಕರಣದ ಕಾರಣದಿಂದ ಒಂದು ವಾರ ಹೊರಗೆ ಇರಬೇಕಾಯಿತು. ನಂತರ ಮರಳಿ ದೊಡ್ಮನೆಗೆ ಬಂದ ಅವರು ಬೇರೆಯದೇ ರೀತಿಯಲ್ಲಿ ಆಟ ಶುರು ಮಾಡಿದರು. ತುಕಾಲಿ ಸಂತೋಷ್ ಜೊತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ವರ್ತೂರು ಸಂತೋಷ್ ಅನೇಕರಿಗೆ ಇಷ್ಟವಾಗಿದ್ದಾರೆ. ಈಗ ಬಿಗ್ ಬಾಸ್ ಪೂರ್ಣಗೊಂಡಿದೆ. ಅವರು ನಾನಾ ಊರುಗಳಿಗೆ ತೆರಳುತ್ತಿದ್ದಾರೆ. ಈಗ ಅವರು ಕೋಲಾರ ಸಮೀಪದ ಮಾಲೂರಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸಿಕ್ಕ ಸ್ವಾಗತ ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

ವರ್ತೂರು ಸಂತೋಷ್ ಅವರು ಹಳ್ಳಿಕಾರ್ ಹೋರಿಗಳ ತಳಿ ರಕ್ಷಣೆ ಮಾಡಲು ಪಣ ತೊಟ್ಟಿದ್ದಾರೆ. ಈ ಬಗ್ಗೆ ಜನರಿಗೆ ತಿಳಿಸಬೇಕು ಎನ್ನುವ ದ್ಯೇಯೋದ್ದೇಶ ಇಟ್ಟುಕೊಂಡು ಅವರು ಬಿಗ್ ಬಾಸ್ ಮನೆಗೆ ತೆರಳಿದರು. ಫಿನಾಲೆವರೆಗೂ ಅವರು ದೊಡ್ಮನೆಯಲ್ಲಿ ಇದ್ದರು. ಅವರ ಮ್ಯಾನರಿಸಂ, ಮಾತನಾಡೋ ಶೈಲಿ ಅನೇಕರಿಗೆ ಇಷ್ಟ ಆಗಿದೆ. ಈ ಕಾರಣಕ್ಕೆ ವರ್ತೂರು ಸಂತೋಷ್ ಅವರ ಅಭಿಮಾನಿ ಬಳಗ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಮೂರು ಲಕ್ಷಕ್ಕೂ ಅಧಿಕ ಹಿಂಬಾಲಕರು ಸಿಕ್ಕಿದ್ದಾರೆ. ಅವರು ಹಂಚಿಕೊಂಡಿರೋ ವಿಡಿಯೋ ಈಗ ವೈರಲ್ ಆಗಿದೆ.

ವರ್ತೂರು ಸಂತೋಷ್​ಗೆ ಸ್ವಾಗತ ಸಿಕ್ಕಿದ್ದು ಹೀಗೆ..

ವರ್ತೂರು ಸಂತೋಷ್ ಅವರು ಮಾಲೂರಿಗೆ ಭೇಟಿ ನೀಡಿದ್ದರು. ಈ ವೇಳೆ ಜನಸಾಗರವೇ ನೆರೆದಿತ್ತು. ಅಷ್ಟೇ ಅಲ್ಲ ಹೂವಿನ ದಳಗಳನ್ನು ಹಾಕಿ ಅವರನ್ನು ಸ್ವಾಗತಿಸಲಾಯಿತು. ಪುಷ್ಪ ರಾಶಿಯಲ್ಲಿ ಅವರು ಮಿಂದೆದ್ದರು. ದೊಡ್ಡ ದೊಡ್ಡ ಹೂವಿನ ಮಾಲೆಯನ್ನು ಹಾಕಲಾಗಿದೆ. ಪಟಾಕಿ ಸಿಡಿ ಸಂಭ್ರಮಿಸಲಾಗಿದೆ. ಅವರು ಹೋದಲೆಲ್ಲೇ ಜನರೇ ನೆರೆದಿದ್ದರು. ಇದು ಅವರ ಬಗ್ಗೆ ಇರೋ ಕ್ರೇಜ್​ಗೆ ಸಾಕ್ಷಿ. ‘ಸಮಸ್ತ ಮಾಲೂರು ಜನತೆಗೆ ಧನ್ಯವಾದ’ ಎಂದು ಅವರು ಬರೆದುಕೊಂಡಿದ್ದಾರೆ. ಈ ವಿಡಿಯೋಗೆ ಕೆಲವರು ‘ಕಾರ್ತಿಕ್​ಗೂ ಈ ಪರಿ ಕ್ರೇಜ್ ಇಲ್ಲ’ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿನಿಮಾ ಮಾಡ್ತಾರೆ ವರ್ತೂರು ಸಂತೋಷ್; ಸೂಚನೆ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

ಹೊಸಕೋಟೆ, ಚನ್ನಪಟ್ಟಣಕ್ಕೆ ವರ್ತೂರು ಸಂತೋಷ್ ತೆರಳಿದ್ದರು. ಅಲ್ಲಿಯೂ ಇದೇ ರೀತಿಯ ಬೆಂಬಲ ಸಿಕ್ಕಿದೆ. ಇದರಿಂದ ಅವರಿಗೆ ಖುಷಿ ಆಗಿದೆ. ಅವರ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಿದೆ. ಮುಂದಿನ ವರ್ಷಗಳಲ್ಲಿ ಅವರು ಸಿನಿಮಾ ನಿರ್ಮಾಣ ಮಾಡುವ ಆಲೋಚನೆಯನ್ನೂ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?