AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ವರ್ತೂರು ಸಂತೋಷ್ ಮಾಲೂರು, ಚನ್ನಪಟ್ಟಣ, ಹೊಸಕೋಟೆಗೆ ಭೇಟಿ ನೀಡಿದ್ದಾರೆ. ಆಗ ಜನಸಾಗರವೇ ನೆರೆದಿತ್ತು. ಅಷ್ಟೇ ಅಲ್ಲ ಹೂವಿನ ದಳಗಳನ್ನು ಹಾಕಿ ಅವರನ್ನು ಸ್ವಾಗತಿಸಲಾಗಿದೆ. ಪುಷ್ಪ ರಾಶಿಯಲ್ಲಿ ಅವರು ಮಿಂದೆದ್ದಿದ್ದಾರೆ. ದೊಡ್ಡ ದೊಡ್ಡ ಹೂವಿನ ಮಾಲೆಯನ್ನು ಹಾಕಲಾಗಿದೆ.  ಅವರಿಗೆ ಸಿಕ್ಕ ಸ್ವಾಗತ ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್
ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Feb 09, 2024 | 12:36 PM

Share

ವರ್ತೂರು ಸಂತೋಷ್ (varthur Santosh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಸ್ಪರ್ಧಿ ಆಗಿದ್ದರು. ಅವರು ಹುಲಿ ಉಗುರು ಪ್ರಕರಣದ ಕಾರಣದಿಂದ ಒಂದು ವಾರ ಹೊರಗೆ ಇರಬೇಕಾಯಿತು. ನಂತರ ಮರಳಿ ದೊಡ್ಮನೆಗೆ ಬಂದ ಅವರು ಬೇರೆಯದೇ ರೀತಿಯಲ್ಲಿ ಆಟ ಶುರು ಮಾಡಿದರು. ತುಕಾಲಿ ಸಂತೋಷ್ ಜೊತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ವರ್ತೂರು ಸಂತೋಷ್ ಅನೇಕರಿಗೆ ಇಷ್ಟವಾಗಿದ್ದಾರೆ. ಈಗ ಬಿಗ್ ಬಾಸ್ ಪೂರ್ಣಗೊಂಡಿದೆ. ಅವರು ನಾನಾ ಊರುಗಳಿಗೆ ತೆರಳುತ್ತಿದ್ದಾರೆ. ಈಗ ಅವರು ಕೋಲಾರ ಸಮೀಪದ ಮಾಲೂರಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸಿಕ್ಕ ಸ್ವಾಗತ ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

ವರ್ತೂರು ಸಂತೋಷ್ ಅವರು ಹಳ್ಳಿಕಾರ್ ಹೋರಿಗಳ ತಳಿ ರಕ್ಷಣೆ ಮಾಡಲು ಪಣ ತೊಟ್ಟಿದ್ದಾರೆ. ಈ ಬಗ್ಗೆ ಜನರಿಗೆ ತಿಳಿಸಬೇಕು ಎನ್ನುವ ದ್ಯೇಯೋದ್ದೇಶ ಇಟ್ಟುಕೊಂಡು ಅವರು ಬಿಗ್ ಬಾಸ್ ಮನೆಗೆ ತೆರಳಿದರು. ಫಿನಾಲೆವರೆಗೂ ಅವರು ದೊಡ್ಮನೆಯಲ್ಲಿ ಇದ್ದರು. ಅವರ ಮ್ಯಾನರಿಸಂ, ಮಾತನಾಡೋ ಶೈಲಿ ಅನೇಕರಿಗೆ ಇಷ್ಟ ಆಗಿದೆ. ಈ ಕಾರಣಕ್ಕೆ ವರ್ತೂರು ಸಂತೋಷ್ ಅವರ ಅಭಿಮಾನಿ ಬಳಗ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಮೂರು ಲಕ್ಷಕ್ಕೂ ಅಧಿಕ ಹಿಂಬಾಲಕರು ಸಿಕ್ಕಿದ್ದಾರೆ. ಅವರು ಹಂಚಿಕೊಂಡಿರೋ ವಿಡಿಯೋ ಈಗ ವೈರಲ್ ಆಗಿದೆ.

ವರ್ತೂರು ಸಂತೋಷ್​ಗೆ ಸ್ವಾಗತ ಸಿಕ್ಕಿದ್ದು ಹೀಗೆ..

ವರ್ತೂರು ಸಂತೋಷ್ ಅವರು ಮಾಲೂರಿಗೆ ಭೇಟಿ ನೀಡಿದ್ದರು. ಈ ವೇಳೆ ಜನಸಾಗರವೇ ನೆರೆದಿತ್ತು. ಅಷ್ಟೇ ಅಲ್ಲ ಹೂವಿನ ದಳಗಳನ್ನು ಹಾಕಿ ಅವರನ್ನು ಸ್ವಾಗತಿಸಲಾಯಿತು. ಪುಷ್ಪ ರಾಶಿಯಲ್ಲಿ ಅವರು ಮಿಂದೆದ್ದರು. ದೊಡ್ಡ ದೊಡ್ಡ ಹೂವಿನ ಮಾಲೆಯನ್ನು ಹಾಕಲಾಗಿದೆ. ಪಟಾಕಿ ಸಿಡಿ ಸಂಭ್ರಮಿಸಲಾಗಿದೆ. ಅವರು ಹೋದಲೆಲ್ಲೇ ಜನರೇ ನೆರೆದಿದ್ದರು. ಇದು ಅವರ ಬಗ್ಗೆ ಇರೋ ಕ್ರೇಜ್​ಗೆ ಸಾಕ್ಷಿ. ‘ಸಮಸ್ತ ಮಾಲೂರು ಜನತೆಗೆ ಧನ್ಯವಾದ’ ಎಂದು ಅವರು ಬರೆದುಕೊಂಡಿದ್ದಾರೆ. ಈ ವಿಡಿಯೋಗೆ ಕೆಲವರು ‘ಕಾರ್ತಿಕ್​ಗೂ ಈ ಪರಿ ಕ್ರೇಜ್ ಇಲ್ಲ’ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿನಿಮಾ ಮಾಡ್ತಾರೆ ವರ್ತೂರು ಸಂತೋಷ್; ಸೂಚನೆ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

ಹೊಸಕೋಟೆ, ಚನ್ನಪಟ್ಟಣಕ್ಕೆ ವರ್ತೂರು ಸಂತೋಷ್ ತೆರಳಿದ್ದರು. ಅಲ್ಲಿಯೂ ಇದೇ ರೀತಿಯ ಬೆಂಬಲ ಸಿಕ್ಕಿದೆ. ಇದರಿಂದ ಅವರಿಗೆ ಖುಷಿ ಆಗಿದೆ. ಅವರ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಿದೆ. ಮುಂದಿನ ವರ್ಷಗಳಲ್ಲಿ ಅವರು ಸಿನಿಮಾ ನಿರ್ಮಾಣ ಮಾಡುವ ಆಲೋಚನೆಯನ್ನೂ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್