Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು
ವರ್ತೂರು ಸಂತೋಷ್
Follow us
ರಾಜೇಶ್ ದುಗ್ಗುಮನೆ
|

Updated on:Nov 15, 2023 | 8:06 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ವರ್ತೂರು ಸಂತೋಷ್ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹುಲಿ ಉಗುರು ಪ್ರಕರಣ ಅವರನ್ನು ತುಂಬಾನೇ ಕಾಡಿದೆ. ಈ ಕಾರಣಕ್ಕೆ ಅವರು ದೊಡ್ಮನೆಯಿಂದ ಹೊರ ಹೋಗಲು ನಿರ್ಧರಿಸಿದ್ದರು. ಅವರು ಈಗ ಬಿಗ್ ಬಾಸ್​ನಲ್ಲೇ (Bigg Boss) ಉಳಿದುಕೊಳ್ಳಲು ನಿರ್ಧರಿಸಿದ್ದಾರೆ. ಈಗ ಸಂತೋಷ್ ಅವರು ಅಸಲಿ ಆಟ ಶುರು ಮಾಡಿದ್ದಾರೆ. ಗುಂಪು ಕಟ್ಟಿಕೊಂಡು ಆಟ ಆಡುತ್ತಿರುವ ವಿನಯ್ ವಿರುದ್ಧ ಅವರು ತೊಡೆ ತಟ್ಟೋಕೆ ರೆಡಿ ಆಗಿದ್ದಾರೆ. ಅವರು ತಂಡ ಕಟ್ಟಿ ವಿನಯ್​ನ ಬಗ್ಗಿ ಬಡಿಯಲು ಸಿದ್ಧರಾಗಿದ್ದಾರೆ.

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಅಸಲಿ ಆಟ ಶುರು ಮಾಡಿದ್ದಾರೆ. ಮೊದಲ ಚಾಲೆಂಜ್​ನಲ್ಲೇ ಗೆಲುವು ಕಂಡಿದ್ದಾರೆ.

ಕೈನ ಸಹಾಯ ಇಲ್ಲದೆ ಶಾರ್ಟ್ಸ್ ಧರಿಸುವ ಚಟುವಟಿಕೆ ಬಿಗ್ ಬಾಸ್ ನೀಡಿದ್ದರು. ಈ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರು ಕೂಡ ಆಡಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ಅವರು, ಈಗ ಮತ್ತೆ ಆಸಕ್ತಿ ತೋರಿಸುತ್ತಿದ್ದಾರೆ. ಮೊದಲ ಚಾಲೆಂಜ್​ನ ಸುಲಭದಲ್ಲಿ ಮುಗಿಸಿದ್ದಾರೆ. ಈ ಮೂಲಕ ಅವರು ಮನೆಗೆ ದಿನಸಿ ವಸ್ತುಗಳನ್ನು ಕೊಡಿಸಿದ್ದಾರೆ.

ಇದನ್ನೂ ಓದಿ: ಮೋಸಗಾರ, ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವ ಆರೋಪ

ವರ್ತೂರು ಸಂತೋಷ್ ಅವರು ಆರಂಭದ ದಿನಗಳಲ್ಲಿ ಸಖತ್ ಆಗಿ ಆಡುತ್ತಿದ್ದರು. ಹುಲಿ ಉಗುರು ಪ್ರಕರಣದ ಬಳಿಕ ಅವರು ಡಲ್ ಆದರು. ಈಗ ಅವರು ಮತ್ತೆ ಟ್ರ್ಯಾಕ್​ಗೆ ಮರಳಿದ್ದಾರೆ. ತಮ್ಮ ನಿಜವಾದ ಆಟದ ಶೈಲಿ ತೋರಿಸೋಕೆ ಮುಂದಾಗಿದ್ದಾರೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 15 November 23

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!