AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Nov 15, 2023 | 8:06 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ವರ್ತೂರು ಸಂತೋಷ್ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹುಲಿ ಉಗುರು ಪ್ರಕರಣ ಅವರನ್ನು ತುಂಬಾನೇ ಕಾಡಿದೆ. ಈ ಕಾರಣಕ್ಕೆ ಅವರು ದೊಡ್ಮನೆಯಿಂದ ಹೊರ ಹೋಗಲು ನಿರ್ಧರಿಸಿದ್ದರು. ಅವರು ಈಗ ಬಿಗ್ ಬಾಸ್​ನಲ್ಲೇ (Bigg Boss) ಉಳಿದುಕೊಳ್ಳಲು ನಿರ್ಧರಿಸಿದ್ದಾರೆ. ಈಗ ಸಂತೋಷ್ ಅವರು ಅಸಲಿ ಆಟ ಶುರು ಮಾಡಿದ್ದಾರೆ. ಗುಂಪು ಕಟ್ಟಿಕೊಂಡು ಆಟ ಆಡುತ್ತಿರುವ ವಿನಯ್ ವಿರುದ್ಧ ಅವರು ತೊಡೆ ತಟ್ಟೋಕೆ ರೆಡಿ ಆಗಿದ್ದಾರೆ. ಅವರು ತಂಡ ಕಟ್ಟಿ ವಿನಯ್​ನ ಬಗ್ಗಿ ಬಡಿಯಲು ಸಿದ್ಧರಾಗಿದ್ದಾರೆ.

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಅಸಲಿ ಆಟ ಶುರು ಮಾಡಿದ್ದಾರೆ. ಮೊದಲ ಚಾಲೆಂಜ್​ನಲ್ಲೇ ಗೆಲುವು ಕಂಡಿದ್ದಾರೆ.

ಕೈನ ಸಹಾಯ ಇಲ್ಲದೆ ಶಾರ್ಟ್ಸ್ ಧರಿಸುವ ಚಟುವಟಿಕೆ ಬಿಗ್ ಬಾಸ್ ನೀಡಿದ್ದರು. ಈ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರು ಕೂಡ ಆಡಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ಅವರು, ಈಗ ಮತ್ತೆ ಆಸಕ್ತಿ ತೋರಿಸುತ್ತಿದ್ದಾರೆ. ಮೊದಲ ಚಾಲೆಂಜ್​ನ ಸುಲಭದಲ್ಲಿ ಮುಗಿಸಿದ್ದಾರೆ. ಈ ಮೂಲಕ ಅವರು ಮನೆಗೆ ದಿನಸಿ ವಸ್ತುಗಳನ್ನು ಕೊಡಿಸಿದ್ದಾರೆ.

ಇದನ್ನೂ ಓದಿ: ಮೋಸಗಾರ, ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವ ಆರೋಪ

ವರ್ತೂರು ಸಂತೋಷ್ ಅವರು ಆರಂಭದ ದಿನಗಳಲ್ಲಿ ಸಖತ್ ಆಗಿ ಆಡುತ್ತಿದ್ದರು. ಹುಲಿ ಉಗುರು ಪ್ರಕರಣದ ಬಳಿಕ ಅವರು ಡಲ್ ಆದರು. ಈಗ ಅವರು ಮತ್ತೆ ಟ್ರ್ಯಾಕ್​ಗೆ ಮರಳಿದ್ದಾರೆ. ತಮ್ಮ ನಿಜವಾದ ಆಟದ ಶೈಲಿ ತೋರಿಸೋಕೆ ಮುಂದಾಗಿದ್ದಾರೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 15 November 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ