AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ರಿಲೀಸ್ ಆಗುವ ಮೊದಲೇ ಅಟ್ಲಿಗೆ ಬಾಲಿವುಡ್​ನಲ್ಲಿ ಹೆಚ್ಚಾಯ್ತು ಆಫರ್; ಮುಂದಿನ ವರ್ಷ ಮತ್ತೊಂದು ಸಿನಿಮಾ ರಿಲೀಸ್

ಅಟ್ಲಿ ಅವರು ನಿರ್ದೇಶನದ ಜೊತೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ವರುಣ್ ಧವನ್ ಚಿತ್ರವನ್ನು ಅವರು ನಿರ್ದೇಶನ ಮಾಡುತ್ತಿಲ್ಲ ಬದಲಿಗೆ ಹಂಚಿಕೆ ಮಾಡುತ್ತಿದ್ದಾರೆ.

‘ಜವಾನ್’ ರಿಲೀಸ್ ಆಗುವ ಮೊದಲೇ ಅಟ್ಲಿಗೆ ಬಾಲಿವುಡ್​ನಲ್ಲಿ ಹೆಚ್ಚಾಯ್ತು ಆಫರ್; ಮುಂದಿನ ವರ್ಷ ಮತ್ತೊಂದು ಸಿನಿಮಾ ರಿಲೀಸ್
ಅಟ್ಲೀ-ವರುಣ್ ಧವನ್
ರಾಜೇಶ್ ದುಗ್ಗುಮನೆ
|

Updated on: Jul 03, 2023 | 7:43 AM

Share

ಶಾರುಖ್ ಖಾನ್ (Shah Rukh Khan) ಜೊತೆ ಕೆಲಸ ಮಾಡಿದರೆ ಆಫರ್ ಹೆಚ್ಚುತ್ತದೆ. ಇದು ಅಟ್ಲಿ ವಿಚಾರದಲ್ಲಿ ನಿಜವಾಗಿದೆ. ಅಟ್ಲಿ ದಕ್ಷಿಣ ಭಾರತದಲ್ಲಿ ಗುರುತಿಸಿಕೊಂಡವರು. ತಮಿಳಿನಲ್ಲಿ ನಾಲ್ಕು ಬ್ಲಾಕ್​ಬಸ್ಟರ್ ಹಿಟ್ ಕೊಟ್ಟಿದ್ದಾರೆ. ‘ಜವಾನ್’ ಚಿತ್ರದ ಮೂಲಕ ಅವರು ಬಾಲಿವುಡ್​ಗೆ ಪರಿಚಯಗೊಳ್ಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಹೀಗಿರುವಾಗಲೇ ಅವರ ಹೊಸ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ವರುಣ್ ಧವನ್ (Varun Dhawan) ಜೊತೆ ಅಟ್ಲಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ 2023ರ ಮೇ 31ಕ್ಕೆ ರಿಲೀಸ್ ಆಗಲಿದೆ.

ಅಟ್ಲಿ ಅವರು ನಿರ್ದೇಶನದ ಜೊತೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ವರುಣ್ ಧವನ್ ಚಿತ್ರವನ್ನು ಅವರು ನಿರ್ದೇಶನ ಮಾಡುತ್ತಿಲ್ಲ ಬದಲಿಗೆ ಹಂಚಿಕೆ ಮಾಡುತ್ತಿದ್ದಾರೆ. ಅವರ ಪತ್ನಿ ಪ್ರಿಯಾ ಅಟ್ಲಿ ಹಾಗೂ ಮುರದ್ ಖೇತಾನಿ ಅವರು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅಟ್ಲಿ ಅವರು ಈ ಸಿನಿಮಾ ಹಂಚಿಕೆ ಮಾಡಲು ಮುಂದೆ ಬಂದಿದ್ದಾರೆ.

ಈ ಚಿತ್ರಕ್ಕೆ ವರುಣ್ ಧವನ್ ಹೀರೋ. ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ವರುಣ್​ ಧವನ್​ಗೆ ಇದೆ. ಈ ಚಿತ್ರವನ್ನು ಕಲೀಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. 2019ರಲ್ಲಿ ‘ಕೀ’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಈಗ ವರುಣ್ ಧವನ್ ಜೊತೆ ಅವರು ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘VD18’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ರಿಲೀಸ್ ಡೇಟ್ ಕೂಡ ಘೋಷಣೆ ಆಗಿದ್ದು, ಮುಂದಿನ ಮೇ 31ಕ್ಕೆ ರಿಲೀಸ್ ಆಗಲಿದೆ.

ಇದನ್ನೂ ಓದಿ: Atlee Kumar: ಮೊದಲ ಬಾರಿ ಕಾನ್​ ಚಿತ್ರೋತ್ಸವದಲ್ಲಿ ಭಾಗಿಯಾದ ಅಟ್ಲಿ ಕುಮಾರ್​-ಪ್ರಿಯಾ ದಂಪತಿ; ಫೋಟೋ ವೈರಲ್​

ಸದ್ಯ ಅಟ್ಲಿ ಅವರ ಗಮನ ‘ಜವಾನ್’ ಸಿನಿಮಾ ಮೇಲಿದೆ. ಶಾರುಖ್ ಖಾನ್, ನಯನತಾರಾ ಹಾಗೂ ವಿಜಯ್ ಸೇತುಪತಿ ಮೊದಲಾದವರು ನಟಿಸುತ್ತಿದ್ದಾರೆ. ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ವರುಣ್ ಧವನ್ ಅವರು ‘ಸಿಟಾಡೆಲ್’ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಸಮಂತಾ ಈ ಸೀರಿಸ್​ನಲ್ಲಿ ನಟಿಸಿದ್ದು, ರಾಜ್ ಮತ್ತು ಡಿಕೆ ನಿರ್ದೇಶಕರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು