AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾಸ್ಟಾರ್ ಕುಟುಂಬದಿಂದ ಗುಡ್ ನ್ಯೂಸ್; ಪಾಲಕರಾಗುತ್ತಿದ್ದಾರೆ ವರುಣ್ ತೇಜ್-ಲಾವಣ್ಯ

ವರುಣ್ ತೇಜ್ ಮತ್ತು ಲಾವಣ್ಯಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಘೋಷಿಸಿದ್ದಾರೆ. 2023ರ ನವೆಂಬರ್‌ನಲ್ಲಿ ವಿವಾಹವಾದ ಈ ದಂಪತಿ, ತಮ್ಮ ಸಂತೋಷದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮೆಗಾ ಕುಟುಂಬದ ಈ ಸಂತೋಷದ ಘೋಷಣೆ ಅಭಿಮಾನಿಗಳಿಗೆ ಸಂತಸ ತಂದಿದೆ. ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಮೆಗಾಸ್ಟಾರ್ ಕುಟುಂಬದಿಂದ ಗುಡ್ ನ್ಯೂಸ್; ಪಾಲಕರಾಗುತ್ತಿದ್ದಾರೆ ವರುಣ್ ತೇಜ್-ಲಾವಣ್ಯ
ವರುಣ್ ತೇಜ್-ಲಾವಣ್ಯಾ
ರಾಜೇಶ್ ದುಗ್ಗುಮನೆ
|

Updated on:May 06, 2025 | 3:03 PM

Share

ವರುಣ್ ತೇಜ್ (Varun Tej) ಹಾಗೂ ಲಾವಣ್ಯ 2023ರ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರಿದರು. ಮೆಗಾಸ್ಟಾರ್ ಕುಟುಂಬದ ಮದುವೆ ಆಗಿದ್ದರಿಂದ ಅದ್ದೂರಿಯಾಗಿ ವಿವಾಹ ನೆರವೇರಿತು. 2025ರಲ್ಲಿ ದಂಪತಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ವರುಣ್ ತೇಜ್ ಹಾಗೂ ಲಾವಣ್ಯಾ ಹೊಸ ಜವಾಬ್ದಾರಿ ಪಡೆದುಕೊಳ್ಳಲು ರೆಡಿ ಆಗಿದ್ದಾರೆ. ಅಂದರೆ, ಈ ದಂಪತಿ ತಂದೆ-ತಾಯಿ ಆಗುತ್ತಿದ್ದಾರೆ.  ಈ ವಿಚಾರ ಕೇಳಿ ಮೆಗಾ ಕುಟುಂಬದ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ವರುಣ್ ತೇಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜೀವನದ ಅತ್ಯಂತ ಸುಂದರವಾದ ಪಾತ್ರ, ಶೀಘ್ರದಲ್ಲೇ ಬರಲಿದೆ’ ಎಂದು ವರುಣ್ ತೇಜ್ ಪೋಸ್ಟ್ ಹಾಕಿದ್ದಾರೆ. ಸಣ್ಣ ಮಗುವಿನ ಶೂನ ವರುಣ್ ಹಾಗೂ ಲಾವಣ್ಯ ಕೈನಲ್ಲಿ ಹಿಡಿದಿರೋ ಫೋಟೋನ ಹಾಕಿದ್ದಾರೆ. ಎಲ್ಲಿಯೂ ಲಾವಣ್ಯಾಗೆ ಎಷ್ಟು ವರ್ಷ ತುಂಬಿದೆ ಎಂಬ ವಿಚಾರವನ್ನು ರಿವೀಲ್ ಮಾಡಿಲ್ಲ.

ಇದನ್ನೂ ಓದಿ
Image
ಜೀವನದಲ್ಲಿ ಇರೋ ಕೊನೆಯ ಆಸೆಯನ್ನು ಈಡೇರಿಸಿಕೊಂಡ ರಶ್ಮಿಕಾ ಮಂದಣ್ಣ
Image
ಮೆಟ್ ಗಾಲಾ ರೆಡ್ ಕಾರ್ಪೆಟ್​ನಲ್ಲಿ ಶಾರುಖ್ ಖಾನ್ ಐಕಾನಿಕ್ ಪೋಸ್
Image
ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ
Image
ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟ ಶ್ರೀಲೀಲಾ; ಕೇಳಿಬಂತು ಹೊಸ ಗಾಸಿಪ್

ಈ ಮೊದಲೇ ಲಾವಣ್ಯಾ ಅವರ ಪ್ರೆಗ್ನೆನ್ಸಿ ವಿಚಾರ ಹರಿದಾಡುತ್ತಲೇ ಇತ್ತು. ಇದಕ್ಕೆ ಕಾರಣವೂ ಇದೆ. ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿರಲಿಲ್ಲ. ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಇದರಿಂದ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು.

ವರುಣ್ ತೇಜ್ ಹಾಗೂ ಲಾವಣ್ಯ ಅವರು 2023ರ ನವೆಂಬರ್ 1ರಂದು ವಿವಾಹ ಆದರು. ಇಟಲಿಯಲ್ಲಿ ಇವರ ಮದುವೆ ನೆರವೇರಿತು. ಇಬ್ಬರೂ ಬರೋಬ್ಬರಿ 6 ವರ್ಷಗಳ ಕಾಲ ಪ್ರೀತಿಸಿದ್ದರು. ಲಾವಣ್ಯಾ ಅವರು ವಿವಾಹದ ಬಳಿಕವೂ ನಟನೆ ಮುಂದುವರಿಸಿದರು. ಸದ್ಯ ಅವರ ಕೈಯಲ್ಲಿ ಈ ಮೊದಲು ಒಪ್ಪಿಕೊಂಡ ಕೆಲವು ಸಿನಿಮಾಗಳಿವೆ. ಮಗು ಜನಿಸಿದ ಬಳಿಕ ಅವರ ಸಂಪೂರ್ಣ ಗಮನ ಕುಟುಂಬದ ಮೇಲೆ ಇರಲಿದೆ.

ವರುಣ್ ತೇಜ್ ಅವರು ವಿರಿಂಚಿ ವರ್ಮಾ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ವರುಣ್ ಅವರು ಹಾಸ್ಯ ಮಾಡಲಿದ್ದಾರೆ. ಸದ್ಯ ವರುಣ್ ತೇಜ್ ಅವರಿಗೆ ಯಾವುದೇ ದೊಡ್ಡ ಯಶಸ್ಸು ಸಿಕ್ಕಿಲ್ಲ. ಅವರು ಈ ಚಿತ್ರದಿಂದ ಗೆಲ್ಲುವ ಭರವಸೆಯಲ್ಲಿ ಇದ್ದಾರೆ. ಈ ಮೂಲಕ ಬೌನ್ಸ್ ಬ್ಯಾಕ್ ಆಗಬೇಕು ಎಂದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರೀತಿ ವಿಚಾರ ಹೇಳದ ವರುಣ್ ತೇಜ್ ಮೇಲೆ ಚಿರಂಜೀವಿಗೆ ಇನ್ನೂ ಇದೆ ಕೋಪ

ವರುಣ್ ಹಾಗೂ ಲಾವಣ್ಯಾಗೆ ಪವನ್ ಕಲ್ಯಾಣ್, ಚಿರಂಜೀವಿ, ರಾಮ್ ಚರಣ್ ಮೊದಲಾದವರು ಶುಭಾಶಯ ತಿಳಿಸುತ್ತಿದ್ದಾರೆ. ಇನ್​ಸ್ಟಾಗ್ರಾಮ್ ಕಮೆಂಟ್ ಬಾಕ್ಸ್​ನಲ್ಲಿ ಕಾಜಲ್ ಅಗರ್​ವಾಲ್ ಸೇರಿದಂತೆ ಅನೇಕರು ನಟಿಗೆ ಶುಭಾಶಯ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:02 pm, Tue, 6 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ