AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಸ್ಟಿನೇಷನ್​ ಮದುವೆಗೆ ರೆಡಿ ಆದ ವರುಣ್ ತೇಜ್-ಲಾವಣ್ಯಾ? ವಿವಾಹ ದಿನಾಂಕ ಲೀಕ್

ವಿದೇಶಕ್ಕೆ ತೆರಳಿ ಮದುವೆ ಆಗುವ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ಸೆಲೆಬ್ರಿಟಿಗಳು ಇದೇ ರೀತಿಯಲ್ಲಿ ಮದುವೆ ಆಗಿದ್ದರು. ಈಗ ವರುಣ್-ಲಾವಣ್ಯ ಕೂಡ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ.

ಡೆಸ್ಟಿನೇಷನ್​ ಮದುವೆಗೆ ರೆಡಿ ಆದ ವರುಣ್ ತೇಜ್-ಲಾವಣ್ಯಾ? ವಿವಾಹ ದಿನಾಂಕ ಲೀಕ್
ವರುಣ್-ಲಾವಣ್ಯಾ
ರಾಜೇಶ್ ದುಗ್ಗುಮನೆ
|

Updated on: Jul 22, 2023 | 6:30 AM

Share

ನಟ ವರುಣ್ ತೇಜ್ (Varun Tej) ಹಾಗೂ ನಟಿ ಲಾವಣ್ಯಾ ತ್ರಿಪಾಠಿ ಹಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇದನ್ನು ಅವರು ಅಲ್ಲಗಳೆಯುತ್ತಲೇ ಬಂದರು. ಹೀಗೆ ಹೇಳುತ್ತಲೇ ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡರು. ಈಗ ಇವರ ಮದುವೆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಮೂಡಿದೆ.  ಹೀಗುರವಾಗಲೇ ಮೆಗಾ ಫ್ಯಾಮಿಲಿಯಲ್ಲಿ ಮದುವೆಯ ಸಡಗರ ಶುರುವಾಗಿದೆ ಎಂಬ ಸುದ್ದಿ ಹರಿದಾಡಿದೆ. ತೆರೆಮರೆಯಲ್ಲಿ ಮದುವೆ ಸಿದ್ಧತೆ ನಡೆಯುತ್ತಿದೆಯಂತೆ.

ಚಿರಂಜೀವಿ ಅವರ ಸಹೋದರ ನಾಗ ಬಾಬು ಪುತ್ರ ವರುಣ್ ತೇಜ್ ಹಾಗೂ ಲಾವಣ್ಯ ಅವರ ನಿಶ್ಚಿತಾರ್ಥ ಜೂನ್ 9 ರಂದು ಅದ್ದೂರಿಯಾಗಿ ನೆರವೇರಿತು. ಮೆಗಾಸ್ಟಾರ್​ ಮತ್ತು ಅಲ್ಲು ಕುಟುಂದ ಜೊತೆಗೆ ಅನೇಕ ಸೆಲೆಬ್ರಿಟಿಗಳು ನಿಶ್ಚಿತಾರ್ಥದಲ್ಲಿ ಉಪಸ್ಥಿತರಿದ್ದರು. ಇವರು ಸ್ವಲ್ಪ ಸಮಯ ತೆಗೆದುಕೊಂಡು ಮದುವೆ ಆಗಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಮೂಲಗಳ ಪ್ರಕಾರ ಮುಂದಿನ ತಿಂಗಳು ಅದ್ದೂರಿಯಾಗಿ ಮದುವೆ ನಡೆಯಲಿದೆ ಎನ್ನಲಾಗುತ್ತಿದೆ.

‘ಗಾಂಡೀವಧಾರಿ ಅರ್ಜುನ’ ಸಿನಿಮಾದಲ್ಲಿ ವರುಣ್ ತೇಜ್ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ಚಿತ್ರ ಆಗಸ್ಟ್​ 25ಕ್ಕೆ ರಿಲೀಸ್ ಆಗಲಿದೆ ಎನ್ನಲಾಗಿದೆ. ಈ ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು ಅಂದರೆ ಆಗಸ್ಟ್ 24ಕ್ಕೆ ವರುಣ್ ಮತ್ತು ಲಾವಣ್ಯ ಮದುವೆ ನಡೆಯಲಿದೆಯಂತೆ.

ವಿದೇಶಕ್ಕೆ ತೆರಳಿ ಮದುವೆ ಆಗುವ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ಸೆಲೆಬ್ರಿಟಿಗಳು ಇದೇ ರೀತಿಯಲ್ಲಿ ಮದುವೆ ಆಗಿದ್ದರು. ಈಗ ವರುಣ್-ಲಾವಣ್ಯ ಕೂಡ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. ಇವರ ಮದುವೆಕಾರ್ಯ ಇಟಲಿಯಲ್ಲಿ ನಡೆಯಲಿದೆ. ಈ ಬಗ್ಗೆ ದಂಪತಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

2017ರಲ್ಲಿ ರಿಲೀಸ್ ಆದ ‘ಮಿಸ್ಟರ್’ ಹಾಗೂ ಮೊದಲಾದ ಸಿನಿಮಾಗಳಲ್ಲಿ ವರುಣ್ ತೇಜ್​-ಲಾವಣ್ಯ ಒಟ್ಟಾಗಿ ನಟಿಸಿದ್ದರು. ಶೂಟಿಂಗ್ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ. ಶೀಘ್ರವೇ ಇವರು ಹಸೆಮಣೆ ಏರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು