Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಸ್ಟಿನೇಷನ್​ ಮದುವೆಗೆ ರೆಡಿ ಆದ ವರುಣ್ ತೇಜ್-ಲಾವಣ್ಯಾ? ವಿವಾಹ ದಿನಾಂಕ ಲೀಕ್

ವಿದೇಶಕ್ಕೆ ತೆರಳಿ ಮದುವೆ ಆಗುವ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ಸೆಲೆಬ್ರಿಟಿಗಳು ಇದೇ ರೀತಿಯಲ್ಲಿ ಮದುವೆ ಆಗಿದ್ದರು. ಈಗ ವರುಣ್-ಲಾವಣ್ಯ ಕೂಡ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ.

ಡೆಸ್ಟಿನೇಷನ್​ ಮದುವೆಗೆ ರೆಡಿ ಆದ ವರುಣ್ ತೇಜ್-ಲಾವಣ್ಯಾ? ವಿವಾಹ ದಿನಾಂಕ ಲೀಕ್
ವರುಣ್-ಲಾವಣ್ಯಾ
Follow us
ರಾಜೇಶ್ ದುಗ್ಗುಮನೆ
|

Updated on: Jul 22, 2023 | 6:30 AM

ನಟ ವರುಣ್ ತೇಜ್ (Varun Tej) ಹಾಗೂ ನಟಿ ಲಾವಣ್ಯಾ ತ್ರಿಪಾಠಿ ಹಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇದನ್ನು ಅವರು ಅಲ್ಲಗಳೆಯುತ್ತಲೇ ಬಂದರು. ಹೀಗೆ ಹೇಳುತ್ತಲೇ ಇಬ್ಬರೂ ಎಂಗೇಜ್​ಮೆಂಟ್ ಮಾಡಿಕೊಂಡರು. ಈಗ ಇವರ ಮದುವೆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಮೂಡಿದೆ.  ಹೀಗುರವಾಗಲೇ ಮೆಗಾ ಫ್ಯಾಮಿಲಿಯಲ್ಲಿ ಮದುವೆಯ ಸಡಗರ ಶುರುವಾಗಿದೆ ಎಂಬ ಸುದ್ದಿ ಹರಿದಾಡಿದೆ. ತೆರೆಮರೆಯಲ್ಲಿ ಮದುವೆ ಸಿದ್ಧತೆ ನಡೆಯುತ್ತಿದೆಯಂತೆ.

ಚಿರಂಜೀವಿ ಅವರ ಸಹೋದರ ನಾಗ ಬಾಬು ಪುತ್ರ ವರುಣ್ ತೇಜ್ ಹಾಗೂ ಲಾವಣ್ಯ ಅವರ ನಿಶ್ಚಿತಾರ್ಥ ಜೂನ್ 9 ರಂದು ಅದ್ದೂರಿಯಾಗಿ ನೆರವೇರಿತು. ಮೆಗಾಸ್ಟಾರ್​ ಮತ್ತು ಅಲ್ಲು ಕುಟುಂದ ಜೊತೆಗೆ ಅನೇಕ ಸೆಲೆಬ್ರಿಟಿಗಳು ನಿಶ್ಚಿತಾರ್ಥದಲ್ಲಿ ಉಪಸ್ಥಿತರಿದ್ದರು. ಇವರು ಸ್ವಲ್ಪ ಸಮಯ ತೆಗೆದುಕೊಂಡು ಮದುವೆ ಆಗಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಮೂಲಗಳ ಪ್ರಕಾರ ಮುಂದಿನ ತಿಂಗಳು ಅದ್ದೂರಿಯಾಗಿ ಮದುವೆ ನಡೆಯಲಿದೆ ಎನ್ನಲಾಗುತ್ತಿದೆ.

‘ಗಾಂಡೀವಧಾರಿ ಅರ್ಜುನ’ ಸಿನಿಮಾದಲ್ಲಿ ವರುಣ್ ತೇಜ್ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ಚಿತ್ರ ಆಗಸ್ಟ್​ 25ಕ್ಕೆ ರಿಲೀಸ್ ಆಗಲಿದೆ ಎನ್ನಲಾಗಿದೆ. ಈ ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು ಅಂದರೆ ಆಗಸ್ಟ್ 24ಕ್ಕೆ ವರುಣ್ ಮತ್ತು ಲಾವಣ್ಯ ಮದುವೆ ನಡೆಯಲಿದೆಯಂತೆ.

ವಿದೇಶಕ್ಕೆ ತೆರಳಿ ಮದುವೆ ಆಗುವ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ಸೆಲೆಬ್ರಿಟಿಗಳು ಇದೇ ರೀತಿಯಲ್ಲಿ ಮದುವೆ ಆಗಿದ್ದರು. ಈಗ ವರುಣ್-ಲಾವಣ್ಯ ಕೂಡ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. ಇವರ ಮದುವೆಕಾರ್ಯ ಇಟಲಿಯಲ್ಲಿ ನಡೆಯಲಿದೆ. ಈ ಬಗ್ಗೆ ದಂಪತಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

2017ರಲ್ಲಿ ರಿಲೀಸ್ ಆದ ‘ಮಿಸ್ಟರ್’ ಹಾಗೂ ಮೊದಲಾದ ಸಿನಿಮಾಗಳಲ್ಲಿ ವರುಣ್ ತೇಜ್​-ಲಾವಣ್ಯ ಒಟ್ಟಾಗಿ ನಟಿಸಿದ್ದರು. ಶೂಟಿಂಗ್ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ. ಶೀಘ್ರವೇ ಇವರು ಹಸೆಮಣೆ ಏರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್