AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varun Tej Lavanya Tripathi Wedding: ವರುಣ್ ತೇಜ್-ಲಾವಣ್ಯ ತ್ರಿಪಾಠಿ ಮದುವೆ; ಅದ್ದೂರಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು

ಮೆಗಾಸ್ಟಾರ್ ಚಿರಂಜೀವಿ ಶೇರ್ ಮಾಡಿರುವ ಹೊಸ ಫೋಟೋ ಇದೀಗ ವೈರಲ್ ಆಗುತ್ತಿದೆ. ವರುಣ್ ತೇಜ್ ಹಾಗೂ ಲಾವಣ್ಯ ಮದುವೆಯಲ್ಲಿ ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಮ್ ತೇಜ್, ಅಲ್ಲು ಸಿರಿಶ್, ಪವನ್​ ಕಲ್ಯಾಣ್, ಚಿರಂಜೀವಿ ಮೊದಲಾದವರು ಹಾಜರಿ ಹಾಕಿದ್ದಾರೆ.

Varun Tej Lavanya Tripathi Wedding: ವರುಣ್ ತೇಜ್-ಲಾವಣ್ಯ ತ್ರಿಪಾಠಿ ಮದುವೆ; ಅದ್ದೂರಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು
ವರುಣ್​-ಲಾವಣ್ಯ ಮದುವೆ
ರಾಜೇಶ್ ದುಗ್ಗುಮನೆ
|

Updated on:Nov 02, 2023 | 10:40 AM

Share

ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ (Lavanya Tripathi) ಬುಧವಾರ (ನವೆಂಬರ್ 1) ಇಟಲಿಯಲ್ಲಿ ವಿವಾಹವಾದರು. ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವರುಣ್ ತೇಜ್ ಹಾಗೂ ಲಾವಣ್ಯ ಮದುವೆ ಸಮಾರಂಭವನ್ನು ಮೆಗಾ ಫ್ಯಾಮಿಲಿ ಅದ್ದೂರಿಯಾಗಿ ಆಯೋಜಿಸಿತ್ತು. ಈ ಮದುವೆಯಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು. ಮದುವೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವ ದಂಪತಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಶೇರ್ ಮಾಡಿರುವ ಹೊಸ ಫೋಟೋ ಇದೀಗ ವೈರಲ್ ಆಗುತ್ತಿದೆ. ವರುಣ್ ತೇಜ್ ಹಾಗೂ ಲಾವಣ್ಯ ಮದುವೆಯಲ್ಲಿ ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಮ್ ತೇಜ್, ಅಲ್ಲು ಸಿರಿಶ್, ಪವನ್​ ಕಲ್ಯಾಣ್, ಚಿರಂಜೀವಿ ಮೊದಲಾದವರು ಹಾಜರಿ ಹಾಕಿದ್ದಾರೆ. ನವ ದಂಪತಿ ಕೂಡ ಫೋಟೋಗೆ ಪೋಸ್​ ನೀಡಿದ್ದಾರೆ. ಇವರೆಲ್ಲ ಒಟ್ಟಾಗಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋನ ಚಿರಂಜೀವಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನವದಂಪತಿಗೆ ಶುಭ ಹಾರೈಸಿದ್ದಾರೆ.

‘ಇಬ್ಬರೂ ಒಟ್ಟಿಗೆ ಪ್ರೀತಿಯ ಹೊಸ ಪಯಣ ಆರಂಭಿಸಿದ್ದಾರೆ. ಹೊಸ ತಾರಾ ಜೋಡಿಗೆ ಶುಭಾಶಯ’ ಎಂದು ಚಿರಂಜೀವಿ ಅವರು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ‘ಮಿಸ್ಟರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ. ಅಂದಿನಿಂದ ಇವರಿಬ್ಬರ ಪ್ರೇಮ ವಿಚಾರವನ್ನು ಗೌಪ್ಯವಾಗಿಡಲಾಗಿತ್ತು.

ಇದನ್ನೂ ಓದಿ: ವರುಣ್ ತೇಜ್-ಲಾವಣ್ಯ ತ್ರಿಪಾಠಿ ವಿವಾಹಪೂರ್ವ ಸಂಭ್ರಮ ಶುರು

ಇಟಲಿಯಲ್ಲಿ ಈ ದಂಪತಿ ಹಸೆಮಣೆ ಏರೋಕೆ ಕಾರಣ ಇದೆ. ‘ಮಿಸ್ಟರ್’ ಸಿನಿಮಾದ ಶೂಟ್ ನಡೆದಿದ್ದು ಇಟಲಿಯಲ್ಲಿ. ಇವರ ಪ್ರೀತಿ ಹುಟ್ಟಿದ್ದು ಅಲ್ಲಿಯೇ. ಹೀಗಾಗಿ, ದಂಪತಿ ಮದುವೆಗೆ ಇಟಲಿಯನ್ನು ಆಯ್ಕೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Thu, 2 November 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್