AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varun Tej Lavanya Tripathi Wedding: ವರುಣ್ ತೇಜ್-ಲಾವಣ್ಯ ತ್ರಿಪಾಠಿ ಮದುವೆ; ಅದ್ದೂರಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು

ಮೆಗಾಸ್ಟಾರ್ ಚಿರಂಜೀವಿ ಶೇರ್ ಮಾಡಿರುವ ಹೊಸ ಫೋಟೋ ಇದೀಗ ವೈರಲ್ ಆಗುತ್ತಿದೆ. ವರುಣ್ ತೇಜ್ ಹಾಗೂ ಲಾವಣ್ಯ ಮದುವೆಯಲ್ಲಿ ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಮ್ ತೇಜ್, ಅಲ್ಲು ಸಿರಿಶ್, ಪವನ್​ ಕಲ್ಯಾಣ್, ಚಿರಂಜೀವಿ ಮೊದಲಾದವರು ಹಾಜರಿ ಹಾಕಿದ್ದಾರೆ.

Varun Tej Lavanya Tripathi Wedding: ವರುಣ್ ತೇಜ್-ಲಾವಣ್ಯ ತ್ರಿಪಾಠಿ ಮದುವೆ; ಅದ್ದೂರಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು
ವರುಣ್​-ಲಾವಣ್ಯ ಮದುವೆ
Follow us
ರಾಜೇಶ್ ದುಗ್ಗುಮನೆ
|

Updated on:Nov 02, 2023 | 10:40 AM

ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ (Lavanya Tripathi) ಬುಧವಾರ (ನವೆಂಬರ್ 1) ಇಟಲಿಯಲ್ಲಿ ವಿವಾಹವಾದರು. ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವರುಣ್ ತೇಜ್ ಹಾಗೂ ಲಾವಣ್ಯ ಮದುವೆ ಸಮಾರಂಭವನ್ನು ಮೆಗಾ ಫ್ಯಾಮಿಲಿ ಅದ್ದೂರಿಯಾಗಿ ಆಯೋಜಿಸಿತ್ತು. ಈ ಮದುವೆಯಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು. ಮದುವೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವ ದಂಪತಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಶೇರ್ ಮಾಡಿರುವ ಹೊಸ ಫೋಟೋ ಇದೀಗ ವೈರಲ್ ಆಗುತ್ತಿದೆ. ವರುಣ್ ತೇಜ್ ಹಾಗೂ ಲಾವಣ್ಯ ಮದುವೆಯಲ್ಲಿ ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಮ್ ತೇಜ್, ಅಲ್ಲು ಸಿರಿಶ್, ಪವನ್​ ಕಲ್ಯಾಣ್, ಚಿರಂಜೀವಿ ಮೊದಲಾದವರು ಹಾಜರಿ ಹಾಕಿದ್ದಾರೆ. ನವ ದಂಪತಿ ಕೂಡ ಫೋಟೋಗೆ ಪೋಸ್​ ನೀಡಿದ್ದಾರೆ. ಇವರೆಲ್ಲ ಒಟ್ಟಾಗಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋನ ಚಿರಂಜೀವಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನವದಂಪತಿಗೆ ಶುಭ ಹಾರೈಸಿದ್ದಾರೆ.

‘ಇಬ್ಬರೂ ಒಟ್ಟಿಗೆ ಪ್ರೀತಿಯ ಹೊಸ ಪಯಣ ಆರಂಭಿಸಿದ್ದಾರೆ. ಹೊಸ ತಾರಾ ಜೋಡಿಗೆ ಶುಭಾಶಯ’ ಎಂದು ಚಿರಂಜೀವಿ ಅವರು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ‘ಮಿಸ್ಟರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ. ಅಂದಿನಿಂದ ಇವರಿಬ್ಬರ ಪ್ರೇಮ ವಿಚಾರವನ್ನು ಗೌಪ್ಯವಾಗಿಡಲಾಗಿತ್ತು.

ಇದನ್ನೂ ಓದಿ: ವರುಣ್ ತೇಜ್-ಲಾವಣ್ಯ ತ್ರಿಪಾಠಿ ವಿವಾಹಪೂರ್ವ ಸಂಭ್ರಮ ಶುರು

ಇಟಲಿಯಲ್ಲಿ ಈ ದಂಪತಿ ಹಸೆಮಣೆ ಏರೋಕೆ ಕಾರಣ ಇದೆ. ‘ಮಿಸ್ಟರ್’ ಸಿನಿಮಾದ ಶೂಟ್ ನಡೆದಿದ್ದು ಇಟಲಿಯಲ್ಲಿ. ಇವರ ಪ್ರೀತಿ ಹುಟ್ಟಿದ್ದು ಅಲ್ಲಿಯೇ. ಹೀಗಾಗಿ, ದಂಪತಿ ಮದುವೆಗೆ ಇಟಲಿಯನ್ನು ಆಯ್ಕೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Thu, 2 November 23

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?