AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varun Tej Lavanya Tripathi Wedding: ವರುಣ್ ತೇಜ್-ಲಾವಣ್ಯ ತ್ರಿಪಾಠಿ ವಿವಾಹಪೂರ್ವ ಸಂಭ್ರಮ ಶುರು

ವಿವಾಹ ಪೂರ್ವ ಸಂಭ್ರಮಾಚರಣೆಯ ಅಂಗವಾಗಿ ಸೋಮವಾರ (ಅ.30) ರಾತ್ರಿ ಕಾಕ್​ಟೇಲ್​ ಪಾರ್ಟಿ ಏರ್ಪಡಿಸಲಾಗಿತ್ತು. ಭಾವಿ ದಂಪತಿಗಳಾದ ವರುಣ್ ಮತ್ತು ಲಾವಣ್ಯ ಜೊತೆಗೆ ಅಲ್ಲು ಕುಟುಂಬ ಸದಸ್ಯರು, ಲಾವಣ್ಯ ತ್ರಿಪಾಠಿ ಅವರ ಕುಟುಂಬ ಸದಸ್ಯರು ಈ ಸಮಾರಂಭದಲ್ಲಿ ಭಾಗಿವಹಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Varun Tej Lavanya Tripathi Wedding: ವರುಣ್ ತೇಜ್-ಲಾವಣ್ಯ ತ್ರಿಪಾಠಿ ವಿವಾಹಪೂರ್ವ ಸಂಭ್ರಮ ಶುರು
ವರುಣ್ ಮತ್ತು ಲಾವಣ್ಯ ಮದುವೆಯ ಕಾಕ್​ಟೇಲ್​ ಪಾರ್ಟಿ
ಮದನ್​ ಕುಮಾರ್​
|

Updated on: Oct 31, 2023 | 2:28 PM

Share

ಟಾಲಿವುಡ್ ಲವ್ ಬರ್ಡ್ಸ್ ವರುಣ್ ತೇಜ್ (Varun Tej) ಮತ್ತು ಲಾವಣ್ಯ ತ್ರಿಪಾಠಿ ಮದುವೆ (Lavanya Tripathi Varun Tej Wedding) ಕಾರ್ಯಗಳು ಸಂಭ್ರಮ, ಸಡಗರದಿಂದ ಆರಂಭವಾಗಿದೆ. ಇಟಲಿಯಲ್ಲಿ ಈ ಡೆಸ್ಟಿನೇಶನ್ ವೆಡ್ಡಿಂಗ್‌ಗೆ ಈಗಾಗಲೇ ಅದ್ಧೂರಿಯಾಗಿ ಸಿದ್ಧತೆಗಳು ನಡೆದಿವೆ. ವಿವಾಹ ಪೂರ್ವ ಸಂಭ್ರಮಾಚರಣೆಯ ಅಂಗವಾಗಿ ಸೋಮವಾರ (ಅಕ್ಟೋಬರ್ 30) ರಾತ್ರಿ ಕಾಕ್​ಟೇಲ್​ ಪಾರ್ಟಿ ಏರ್ಪಡಿಸಲಾಗಿತ್ತು. ಈ ಖುಷಿಯಲ್ಲಿ ಭಾವಿ ಜೋಡಿಗಳಾದ ವರುಣ್ ಮತ್ತು ಲಾವಣ್ಯ (Lavanya Tripathi), ಮೆಗಾ ಸ್ಟಾರ್​ ಫ್ಯಾಮಿಲಿ, ಅಲ್ಲು ಕುಟುಂಬ ಸದಸ್ಯರು ಭಾಗಿಯಾಗಿದ್ದರು. ಇತ್ತೀಚೆಗೆ ಈ ಸಮಾರಂಭದ ಫೋಟೋಗಳು ಹೊರಬಿದ್ದಿವೆ.

ಇದರಲ್ಲಿ ಭಾವಿ ಜೋಡಿ ವರುಣ್ ತೇಜ್ ಮತ್ತು ಲಾವಣ್ಯ ಬಿಳಿ ಬಣ್ಣದ ಡ್ರೆಸ್‌ನಲ್ಲಿ ಸೂಪರ್​ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಬಿಳಿ ಮತ್ತು ಕಪ್ಪು ಬಣ್ಣದ ಡ್ರೆಸ್​ನಲ್ಲಿ ಕಂಗೊಳಿಸಿದ್ದಾರೆ. ಅಲ್ಲು ಅರ್ಜುನ್ ಮತ್ತು ಸಾಯಿ ಧರಮ್ ತೇಜ್ ಕಪ್ಪು ಬಣ್ಣದ ಸೂಟ್‌ನಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ಸದ್ಯ, ವರುಣ್ ಮತ್ತು ಲಾವಣ್ಯ ಅವರ ಮದುವೆಯ ಫೋಟೋಗಳು ವೈರಲ್ ಆಗುತ್ತಿವೆ. ಇದನ್ನು ಮೆಗಾ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರೊಂದಿಗೆ #VarunLav ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿದೆ. ವಿವಾಹ ಪೂರ್ವ ಸಂಭ್ರಮದ ಅಂಗವಾಗಿ ಮಂಗಳವಾರ (ಅಕ್ಟೋಬರ್ 31) ಬೆಳಗ್ಗೆ 11 ಗಂಟೆಯಿಂದ ವರುಣ್ ತೇಜ್ ಹಾಗೂ ಲಾವಣ್ಯ ಅವರ ಹಳದಿ ಸಮಾರಂಭ ನಡೆಯಲಿದೆ. ಇದರೊಂದಿಗೆ ವಿಶೇಷ ಥೀಮ್‌ನೊಂದಿಗೆ ಪೂಲ್ ಪಾರ್ಟಿ ಕೂಡ ನಡೆಯಲಿದೆ. ಈ ಸಮಾರಂಭದಲ್ಲಿ ಪ್ರತಿಯೊಬ್ಬರೂ ಹಳದಿ, ಬಿಳಿ ಮತ್ತು ಗುಲಾಬಿ ಬಣ್ಣದ ಬಟ್ಟೆಗಳನ್ನು ಧರಿಸುತ್ತಾರೆ.

ಇದನ್ನೂ ಓದಿ: ಪ್ರೀತಿ ಹುಟ್ಟಿದ ಜಾಗದಲ್ಲೇ ವರುಣ್ ತೇಜ್​-ಲಾವಣ್ಯ ತ್ರಿಪಾಠಿ ಮದುವೆ

ಹಳದಿ ಸಮಾರಂಭಕ್ಕಾಗಿ ಲಾವಣ್ಯಗಾಗಿ ವಿಶೇಷ ಲೆಹೆಂಗಾವನ್ನು ವಿನ್ಯಾಸಗೊಳಿಸಲಾಗಿದೆ. ಈ ಲೆಹೆಂಗಾವನ್ನು ಲಾವಣ್ಯ ತ್ರಿಪಾಠಿ ಅವರ ತಾಯಿಯ ಸೀರೆಯಿಂದ ತಯಾರಿಸಲಾಗಿದೆ. ಮದುವೆಯ ಮೊದಲು ನಡೆಯುವ ಹಳದಿ ಸಮಾರಂಭವನ್ನು ಸ್ಮರಣೀಯವಾಗಿಸಲು ಈ ಉಡುಪನ್ನು ವಿನ್ಯಾಸಗೊಳಿಸಲಾಗಿದೆ. ಖ್ಯಾತ ವಸ್ತ್ರ ವಿನ್ಯಾಸಕಿ ಅರ್ಚನಾ ರಾವ್ ಈ ಲೆಹೆಂಗಾ ವಿನ್ಯಾಸ ಮಾಡಿದ್ದಾರೆ. ಹಳದಿ ಸಮಾರಂಭ ಮುಗಿದ ನಂತರ ಸಂಜೆ ಐದೂವರೆ ಗಂಟೆಗೆ ಮೆಹೆಂದಿ ಸಮಾರಂಭ ಆರಂಭವಾಗುತ್ತದೆ.

ಮದುವೆಯ ಹಾಗೂ ಆರತಕ್ಷತೆ ವಿವರ

ಬುಧವಾರ (ನವೆಂಬರ್ 1) ವರುಣ್ ತೇಜ್ ಮತ್ತು ಲಾವಣ್ಯ ಹಸೆಮಣೆ ಏರಲಿದ್ದಾರೆ. ಅಂದು ಮಧ್ಯಾಹ್ನ ಸರಿಯಾಗಿ 2.48ಕ್ಕೆ ಲಾವಣ್ಯ ಕೊರಳಿಗೆ ವರುಣ್​ ಅವರು ತಾಳಿ ಕಟ್ಟಲಿದ್ದಾರೆ. ಮದುವೆಯ ನಂತರ ರಾತ್ರಿ 8:30ರಿಂದ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು