AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿ ಖ್ಯಾತ ನಿರ್ಮಾಣ ಸಂಸ್ಥೆ; ಇದೆ 31 ಲಕ್ಷ ರೂಪಾಯಿ ಬಾಕಿ

‘ಮಿಷನ್ ರಾಣಿಗಂಜ್’ ನಿರ್ದೇಶಕ ಟೀನು ದೇಸಾಯಿಗೆ ನೀಡಬೇಕಿದ್ದ 33.13 ಲಕ್ಷ ರೂಪಾಯಿ ಹಣವನ್ನು ಪೂಜಾ ಎಂಟರ್​ಟೇನ್​ಮೆಂಟ್ ಬಾಕಿ ಉಳಿಸಿಕೊಂಡಿದೆ. ಇದರ ಜೊತೆಗೆ 250 ಸಿಬ್ಬಂದಿಗೆ ಒಟ್ಟೂ 31.78 ಲಕ್ಷ ರೂಪಾಯಿ ಹಣವನ್ನು ಅವರು ಪಾವತಿ ಮಾಡಬೇಕಿದೆ. ಮೊದಲಿನಿಂದಲೂ ಈ ಬಗ್ಗೆ ಬೇಡಿಕೆ ಇಡುತ್ತಾ ಬಂದರೂ ಅವರು ಇದನ್ನು ಪಾವತಿಸೋಕೆ ಮುಂದಾಗಿಲ್ಲ.

ಸಂಕಷ್ಟದಲ್ಲಿ ಖ್ಯಾತ ನಿರ್ಮಾಣ ಸಂಸ್ಥೆ; ಇದೆ 31 ಲಕ್ಷ ರೂಪಾಯಿ ಬಾಕಿ
ವಶು-ಅಕ್ಷಯ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Jun 29, 2024 | 12:35 PM

Share

ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ‘ಪೂಜಾ ಎಂಟರ್​ಟೇನ್​ಮೆಂಟ್’ ಸಂಕಷ್ಟದಲ್ಲಿ ಇದೆ. ಈ ಸಂಸ್ಥೆಯ ಒಡೆಯ ವಶು ಭಗ್ನಾನಿ ಅವರು ಈ ವರದಿಯನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಆದರೆ, ಈ ಸಂಸ್ಥೆ ತುಂಬಾನೇ ದೊಡ್ಡ ತೊಂದರೆಯಲ್ಲಿ ಇದೆ ಎನ್ನಲಾಗಿದೆ. ‘ಮಿಷನ್ ರಾಣಿಗಂಜ್’ ನಿರ್ದೇಶಕ ಟೀನು ದೇಸಾಯಿಗೆ ಇನ್ನೂ ಪೂರ್ತಿ ಹಣ ಕೊಟ್ಟಿಲ್ಲ.  ಇದರ ಜೊತೆಗೆ ‘ಮಿಷನ್ ರಾಣಿಗಂಜ್’, ‘ಬಡೇ ಮೊಯಾ ಚೋಟೆ ಮಿಯಾ’ ತಂಡದಲ್ಲಿ ಕೆಲಸ ಮಾಡಿದವರಿಗೂ ಹಣ ಸಿಕ್ಕಿಲ್ಲ.

ಟೀನು ದೇಸಾಯಿಗೆ ನೀಡಬೇಕಿದ್ದ 33.13 ಲಕ್ಷ ರೂಪಾಯಿ ಹಣವನ್ನು ಪೂಜಾ ಎಂಟರ್​ಟೇನ್​ಮೆಂಟ್ ಬಾಕಿ ಉಳಿಸಿಕೊಂಡಿದೆ. ಇದರ ಜೊತೆಗೆ 250 ಸಿಬ್ಬಂದಿಗೆ ಒಟ್ಟೂ 31.78 ಲಕ್ಷ ರೂಪಾಯಿ ಹಣವನ್ನು ಅವರು ಪಾವತಿ ಮಾಡಬೇಕಿದೆ. ಮೊದಲಿನಿಂದಲೂ ಈ ಬಗ್ಗೆ ಬೇಡಿಕೆ ಇಡುತ್ತಾ ಬಂದರೂ ಅವರು ಇದನ್ನು ಪಾವತಿಸೋಕೆ ಮುಂದಾಗಿಲ್ಲ. ಈ ಬಗ್ಗೆ ದೂರು ಕೂಡ ದಾಖಲಾಗಿದೆ.

ಮಾರ್ಚ್​ 2023ರಲ್ಲಿ ‘ಮಿಷನ್ ರಾಣಿಗಂಜ್​’ ನಿರ್ದೇಶಕ ಟೀನು ದೇಸಾಯಿ ಅವರು ದೂರು ದಾಖಲು ಮಾಡಿದರು. ಬಾಕಿ ಹಣ ಪಾವತಿಸುತ್ತಿಲ್ಲ ಎಂದು ದೂರು ನೀಡಿದ್ದರು. ನಿರ್ದೇಶನಕ್ಕೆ ಅವರಿಗೆ 4.03 ಕೋಟಿ ರೂಪಾಯಿ ಬರಬೇಕಿತ್ತು. ಆದರೆ, ಸಿಕ್ಕಿದ್ದು 3.70 ಕೋಟಿ ರೂಪಾಯಿ ಮಾತ್ರ. ಹೀಗಾಗಿ ಬಾಕಿ ಹಣ ಪಾವತಿಸುವಂತೆ ಅವರು ಪದೇ ಪದೇ ಕೇಳಿಕೊಂಡಿದ್ದರು.

ವಶು ಭಗ್ನಾನಿ ಅವರು ಇತ್ತೀಚೆಗೆ ಮಗ ಜಾಕಿ ಭಗ್ನಾನಿ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಇದನ್ನು ಉಲ್ಲೇಖಿಸಿ ಸಿಬ್ಬಂದಿ ದೂರು ನೀಡುತ್ತಿದ್ದಾರೆ. ಆದಾಗ್ಯೂ ವಶು ಅವರ ಕಡೆಯಿಂದ ಯಾವುದೇ ಉತ್ತರ ಸಿಕ್ಕಿಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್ ಆದ ಬಳಿಕ ಹಣ ನೀಡೋ ಭರವಸೆ ನೀಡಲಾಗಿತ್ತು. ಆದರೆ, ಈ ಚಿತ್ರವೂ ಸೋತಿರುವುದರಿಂದ ಪೂಜಾ ಎಂಟರ್​ಟೇನ್​ಮೆಂಟ್ ಮತ್ತಷ್ಟು ತೊಂದರೆಗೆ ಸಿಲುಕಿದೆ.

ಇದನ್ನೂ ಓದಿ: ಇನ್ನಷ್ಟು ಗ್ಲಾಮರಸ್​ ಆಗಿ ಕಾಣಿಸಿಕೊಂಡ ‘ಅರ್ಜುನ್​ ರೆಡ್ಡಿ’ ನಟಿ ಶಾಲಿನಿ ಪಾಂಡೆ

ಪೂಜಾ ಎಂಟರ್​ಟೇನ್​ಮೆಂಟ್ ಸ್ವಂತ ಕಚೇರಿಯನ್ನು ಮಾರಿ 250 ಕೋಟಿ ರೂಪಾಯಿ ಸೆಟಲ್ ಮಾಡಲಾಗಿದೆ ಎಂದು ವರದಿ ಆಗಿದೆ. ಶೇ. 80 ಸಿಬ್ಬಂದಿಯನ್ನು ಕಂಪನಿಯಿಂದ ತೆಗೆಯಲಾಗಿದೆ ಎನ್ನಲಾಗಿದೆ. ಆದರೆ, ಇದೆಲ್ಲವನ್ನೂ ವಶು ಅವರು ಅಲ್ಲಗಳೆಯುತ್ತಿದ್ದಾರೆ. ತಾವು ಸಂಕಷ್ಟದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Sat, 29 June 24

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ