AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿ ಖ್ಯಾತ ನಿರ್ಮಾಣ ಸಂಸ್ಥೆ; ಇದೆ 31 ಲಕ್ಷ ರೂಪಾಯಿ ಬಾಕಿ

‘ಮಿಷನ್ ರಾಣಿಗಂಜ್’ ನಿರ್ದೇಶಕ ಟೀನು ದೇಸಾಯಿಗೆ ನೀಡಬೇಕಿದ್ದ 33.13 ಲಕ್ಷ ರೂಪಾಯಿ ಹಣವನ್ನು ಪೂಜಾ ಎಂಟರ್​ಟೇನ್​ಮೆಂಟ್ ಬಾಕಿ ಉಳಿಸಿಕೊಂಡಿದೆ. ಇದರ ಜೊತೆಗೆ 250 ಸಿಬ್ಬಂದಿಗೆ ಒಟ್ಟೂ 31.78 ಲಕ್ಷ ರೂಪಾಯಿ ಹಣವನ್ನು ಅವರು ಪಾವತಿ ಮಾಡಬೇಕಿದೆ. ಮೊದಲಿನಿಂದಲೂ ಈ ಬಗ್ಗೆ ಬೇಡಿಕೆ ಇಡುತ್ತಾ ಬಂದರೂ ಅವರು ಇದನ್ನು ಪಾವತಿಸೋಕೆ ಮುಂದಾಗಿಲ್ಲ.

ಸಂಕಷ್ಟದಲ್ಲಿ ಖ್ಯಾತ ನಿರ್ಮಾಣ ಸಂಸ್ಥೆ; ಇದೆ 31 ಲಕ್ಷ ರೂಪಾಯಿ ಬಾಕಿ
ವಶು-ಅಕ್ಷಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 29, 2024 | 12:35 PM

Share

ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ‘ಪೂಜಾ ಎಂಟರ್​ಟೇನ್​ಮೆಂಟ್’ ಸಂಕಷ್ಟದಲ್ಲಿ ಇದೆ. ಈ ಸಂಸ್ಥೆಯ ಒಡೆಯ ವಶು ಭಗ್ನಾನಿ ಅವರು ಈ ವರದಿಯನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಆದರೆ, ಈ ಸಂಸ್ಥೆ ತುಂಬಾನೇ ದೊಡ್ಡ ತೊಂದರೆಯಲ್ಲಿ ಇದೆ ಎನ್ನಲಾಗಿದೆ. ‘ಮಿಷನ್ ರಾಣಿಗಂಜ್’ ನಿರ್ದೇಶಕ ಟೀನು ದೇಸಾಯಿಗೆ ಇನ್ನೂ ಪೂರ್ತಿ ಹಣ ಕೊಟ್ಟಿಲ್ಲ.  ಇದರ ಜೊತೆಗೆ ‘ಮಿಷನ್ ರಾಣಿಗಂಜ್’, ‘ಬಡೇ ಮೊಯಾ ಚೋಟೆ ಮಿಯಾ’ ತಂಡದಲ್ಲಿ ಕೆಲಸ ಮಾಡಿದವರಿಗೂ ಹಣ ಸಿಕ್ಕಿಲ್ಲ.

ಟೀನು ದೇಸಾಯಿಗೆ ನೀಡಬೇಕಿದ್ದ 33.13 ಲಕ್ಷ ರೂಪಾಯಿ ಹಣವನ್ನು ಪೂಜಾ ಎಂಟರ್​ಟೇನ್​ಮೆಂಟ್ ಬಾಕಿ ಉಳಿಸಿಕೊಂಡಿದೆ. ಇದರ ಜೊತೆಗೆ 250 ಸಿಬ್ಬಂದಿಗೆ ಒಟ್ಟೂ 31.78 ಲಕ್ಷ ರೂಪಾಯಿ ಹಣವನ್ನು ಅವರು ಪಾವತಿ ಮಾಡಬೇಕಿದೆ. ಮೊದಲಿನಿಂದಲೂ ಈ ಬಗ್ಗೆ ಬೇಡಿಕೆ ಇಡುತ್ತಾ ಬಂದರೂ ಅವರು ಇದನ್ನು ಪಾವತಿಸೋಕೆ ಮುಂದಾಗಿಲ್ಲ. ಈ ಬಗ್ಗೆ ದೂರು ಕೂಡ ದಾಖಲಾಗಿದೆ.

ಮಾರ್ಚ್​ 2023ರಲ್ಲಿ ‘ಮಿಷನ್ ರಾಣಿಗಂಜ್​’ ನಿರ್ದೇಶಕ ಟೀನು ದೇಸಾಯಿ ಅವರು ದೂರು ದಾಖಲು ಮಾಡಿದರು. ಬಾಕಿ ಹಣ ಪಾವತಿಸುತ್ತಿಲ್ಲ ಎಂದು ದೂರು ನೀಡಿದ್ದರು. ನಿರ್ದೇಶನಕ್ಕೆ ಅವರಿಗೆ 4.03 ಕೋಟಿ ರೂಪಾಯಿ ಬರಬೇಕಿತ್ತು. ಆದರೆ, ಸಿಕ್ಕಿದ್ದು 3.70 ಕೋಟಿ ರೂಪಾಯಿ ಮಾತ್ರ. ಹೀಗಾಗಿ ಬಾಕಿ ಹಣ ಪಾವತಿಸುವಂತೆ ಅವರು ಪದೇ ಪದೇ ಕೇಳಿಕೊಂಡಿದ್ದರು.

ವಶು ಭಗ್ನಾನಿ ಅವರು ಇತ್ತೀಚೆಗೆ ಮಗ ಜಾಕಿ ಭಗ್ನಾನಿ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಇದನ್ನು ಉಲ್ಲೇಖಿಸಿ ಸಿಬ್ಬಂದಿ ದೂರು ನೀಡುತ್ತಿದ್ದಾರೆ. ಆದಾಗ್ಯೂ ವಶು ಅವರ ಕಡೆಯಿಂದ ಯಾವುದೇ ಉತ್ತರ ಸಿಕ್ಕಿಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್ ಆದ ಬಳಿಕ ಹಣ ನೀಡೋ ಭರವಸೆ ನೀಡಲಾಗಿತ್ತು. ಆದರೆ, ಈ ಚಿತ್ರವೂ ಸೋತಿರುವುದರಿಂದ ಪೂಜಾ ಎಂಟರ್​ಟೇನ್​ಮೆಂಟ್ ಮತ್ತಷ್ಟು ತೊಂದರೆಗೆ ಸಿಲುಕಿದೆ.

ಇದನ್ನೂ ಓದಿ: ಇನ್ನಷ್ಟು ಗ್ಲಾಮರಸ್​ ಆಗಿ ಕಾಣಿಸಿಕೊಂಡ ‘ಅರ್ಜುನ್​ ರೆಡ್ಡಿ’ ನಟಿ ಶಾಲಿನಿ ಪಾಂಡೆ

ಪೂಜಾ ಎಂಟರ್​ಟೇನ್​ಮೆಂಟ್ ಸ್ವಂತ ಕಚೇರಿಯನ್ನು ಮಾರಿ 250 ಕೋಟಿ ರೂಪಾಯಿ ಸೆಟಲ್ ಮಾಡಲಾಗಿದೆ ಎಂದು ವರದಿ ಆಗಿದೆ. ಶೇ. 80 ಸಿಬ್ಬಂದಿಯನ್ನು ಕಂಪನಿಯಿಂದ ತೆಗೆಯಲಾಗಿದೆ ಎನ್ನಲಾಗಿದೆ. ಆದರೆ, ಇದೆಲ್ಲವನ್ನೂ ವಶು ಅವರು ಅಲ್ಲಗಳೆಯುತ್ತಿದ್ದಾರೆ. ತಾವು ಸಂಕಷ್ಟದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Sat, 29 June 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು