AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿ ಖ್ಯಾತ ನಿರ್ಮಾಣ ಸಂಸ್ಥೆ; ಇದೆ 31 ಲಕ್ಷ ರೂಪಾಯಿ ಬಾಕಿ

‘ಮಿಷನ್ ರಾಣಿಗಂಜ್’ ನಿರ್ದೇಶಕ ಟೀನು ದೇಸಾಯಿಗೆ ನೀಡಬೇಕಿದ್ದ 33.13 ಲಕ್ಷ ರೂಪಾಯಿ ಹಣವನ್ನು ಪೂಜಾ ಎಂಟರ್​ಟೇನ್​ಮೆಂಟ್ ಬಾಕಿ ಉಳಿಸಿಕೊಂಡಿದೆ. ಇದರ ಜೊತೆಗೆ 250 ಸಿಬ್ಬಂದಿಗೆ ಒಟ್ಟೂ 31.78 ಲಕ್ಷ ರೂಪಾಯಿ ಹಣವನ್ನು ಅವರು ಪಾವತಿ ಮಾಡಬೇಕಿದೆ. ಮೊದಲಿನಿಂದಲೂ ಈ ಬಗ್ಗೆ ಬೇಡಿಕೆ ಇಡುತ್ತಾ ಬಂದರೂ ಅವರು ಇದನ್ನು ಪಾವತಿಸೋಕೆ ಮುಂದಾಗಿಲ್ಲ.

ಸಂಕಷ್ಟದಲ್ಲಿ ಖ್ಯಾತ ನಿರ್ಮಾಣ ಸಂಸ್ಥೆ; ಇದೆ 31 ಲಕ್ಷ ರೂಪಾಯಿ ಬಾಕಿ
ವಶು-ಅಕ್ಷಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 29, 2024 | 12:35 PM

Share

ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ‘ಪೂಜಾ ಎಂಟರ್​ಟೇನ್​ಮೆಂಟ್’ ಸಂಕಷ್ಟದಲ್ಲಿ ಇದೆ. ಈ ಸಂಸ್ಥೆಯ ಒಡೆಯ ವಶು ಭಗ್ನಾನಿ ಅವರು ಈ ವರದಿಯನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಆದರೆ, ಈ ಸಂಸ್ಥೆ ತುಂಬಾನೇ ದೊಡ್ಡ ತೊಂದರೆಯಲ್ಲಿ ಇದೆ ಎನ್ನಲಾಗಿದೆ. ‘ಮಿಷನ್ ರಾಣಿಗಂಜ್’ ನಿರ್ದೇಶಕ ಟೀನು ದೇಸಾಯಿಗೆ ಇನ್ನೂ ಪೂರ್ತಿ ಹಣ ಕೊಟ್ಟಿಲ್ಲ.  ಇದರ ಜೊತೆಗೆ ‘ಮಿಷನ್ ರಾಣಿಗಂಜ್’, ‘ಬಡೇ ಮೊಯಾ ಚೋಟೆ ಮಿಯಾ’ ತಂಡದಲ್ಲಿ ಕೆಲಸ ಮಾಡಿದವರಿಗೂ ಹಣ ಸಿಕ್ಕಿಲ್ಲ.

ಟೀನು ದೇಸಾಯಿಗೆ ನೀಡಬೇಕಿದ್ದ 33.13 ಲಕ್ಷ ರೂಪಾಯಿ ಹಣವನ್ನು ಪೂಜಾ ಎಂಟರ್​ಟೇನ್​ಮೆಂಟ್ ಬಾಕಿ ಉಳಿಸಿಕೊಂಡಿದೆ. ಇದರ ಜೊತೆಗೆ 250 ಸಿಬ್ಬಂದಿಗೆ ಒಟ್ಟೂ 31.78 ಲಕ್ಷ ರೂಪಾಯಿ ಹಣವನ್ನು ಅವರು ಪಾವತಿ ಮಾಡಬೇಕಿದೆ. ಮೊದಲಿನಿಂದಲೂ ಈ ಬಗ್ಗೆ ಬೇಡಿಕೆ ಇಡುತ್ತಾ ಬಂದರೂ ಅವರು ಇದನ್ನು ಪಾವತಿಸೋಕೆ ಮುಂದಾಗಿಲ್ಲ. ಈ ಬಗ್ಗೆ ದೂರು ಕೂಡ ದಾಖಲಾಗಿದೆ.

ಮಾರ್ಚ್​ 2023ರಲ್ಲಿ ‘ಮಿಷನ್ ರಾಣಿಗಂಜ್​’ ನಿರ್ದೇಶಕ ಟೀನು ದೇಸಾಯಿ ಅವರು ದೂರು ದಾಖಲು ಮಾಡಿದರು. ಬಾಕಿ ಹಣ ಪಾವತಿಸುತ್ತಿಲ್ಲ ಎಂದು ದೂರು ನೀಡಿದ್ದರು. ನಿರ್ದೇಶನಕ್ಕೆ ಅವರಿಗೆ 4.03 ಕೋಟಿ ರೂಪಾಯಿ ಬರಬೇಕಿತ್ತು. ಆದರೆ, ಸಿಕ್ಕಿದ್ದು 3.70 ಕೋಟಿ ರೂಪಾಯಿ ಮಾತ್ರ. ಹೀಗಾಗಿ ಬಾಕಿ ಹಣ ಪಾವತಿಸುವಂತೆ ಅವರು ಪದೇ ಪದೇ ಕೇಳಿಕೊಂಡಿದ್ದರು.

ವಶು ಭಗ್ನಾನಿ ಅವರು ಇತ್ತೀಚೆಗೆ ಮಗ ಜಾಕಿ ಭಗ್ನಾನಿ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಇದನ್ನು ಉಲ್ಲೇಖಿಸಿ ಸಿಬ್ಬಂದಿ ದೂರು ನೀಡುತ್ತಿದ್ದಾರೆ. ಆದಾಗ್ಯೂ ವಶು ಅವರ ಕಡೆಯಿಂದ ಯಾವುದೇ ಉತ್ತರ ಸಿಕ್ಕಿಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್ ಆದ ಬಳಿಕ ಹಣ ನೀಡೋ ಭರವಸೆ ನೀಡಲಾಗಿತ್ತು. ಆದರೆ, ಈ ಚಿತ್ರವೂ ಸೋತಿರುವುದರಿಂದ ಪೂಜಾ ಎಂಟರ್​ಟೇನ್​ಮೆಂಟ್ ಮತ್ತಷ್ಟು ತೊಂದರೆಗೆ ಸಿಲುಕಿದೆ.

ಇದನ್ನೂ ಓದಿ: ಇನ್ನಷ್ಟು ಗ್ಲಾಮರಸ್​ ಆಗಿ ಕಾಣಿಸಿಕೊಂಡ ‘ಅರ್ಜುನ್​ ರೆಡ್ಡಿ’ ನಟಿ ಶಾಲಿನಿ ಪಾಂಡೆ

ಪೂಜಾ ಎಂಟರ್​ಟೇನ್​ಮೆಂಟ್ ಸ್ವಂತ ಕಚೇರಿಯನ್ನು ಮಾರಿ 250 ಕೋಟಿ ರೂಪಾಯಿ ಸೆಟಲ್ ಮಾಡಲಾಗಿದೆ ಎಂದು ವರದಿ ಆಗಿದೆ. ಶೇ. 80 ಸಿಬ್ಬಂದಿಯನ್ನು ಕಂಪನಿಯಿಂದ ತೆಗೆಯಲಾಗಿದೆ ಎನ್ನಲಾಗಿದೆ. ಆದರೆ, ಇದೆಲ್ಲವನ್ನೂ ವಶು ಅವರು ಅಲ್ಲಗಳೆಯುತ್ತಿದ್ದಾರೆ. ತಾವು ಸಂಕಷ್ಟದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Sat, 29 June 24

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್