AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮನ್ನಾ ಭಾಟಿಯಾ ಜೊತೆ ನಟ ವಸಿಷ್ಠ ಸಿಂಹ ನಟನೆ, ಸಿನಿಮಾ ಯಾವುದು?

Tamannah-Vasishta Simha: ಕನ್ನಡದ ನಟ ವಸಿಷ್ಠ ಸಿಂಹ, ತಮನ್ನಾ ಭಾಟಿಯಾ ಜೊತೆಗೆ ತೆಲುಗು ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ವಾರಣಾಸಿಯಲ್ಲಿ ನಡೆದಿದೆ.

ತಮನ್ನಾ ಭಾಟಿಯಾ ಜೊತೆ ನಟ ವಸಿಷ್ಠ ಸಿಂಹ ನಟನೆ, ಸಿನಿಮಾ ಯಾವುದು?
ತಮನ್ನಾ ಭಾಟಿಯಾ
ಮಂಜುನಾಥ ಸಿ.
|

Updated on: Mar 03, 2024 | 3:33 PM

Share

ಕನ್ನಡದ ನಟರು ಪರಭಾಷೆಗಳಲ್ಲಿ ಮಿಂಚುವುದು ಹೊಸತೇನಲ್ಲ. ಕನ್ನಡದ ಹಲವು ನಟರಿಗೆ ಪರಭಾಷೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಇತ್ತೀಚೆಗೆ ಆ ಬೇಡಿಕೆ ತುಸು ಹೆಚ್ಚಾಗಿದೆ. ಸುದೀಪ್ (Sudeep), ಶಿವರಾಜ್ ಕುಮಾರ್ (Shiva Rajkumar) ಅವರುಗಳು ಮಾತ್ರವೇ ಅಲ್ಲದೆ ಹಲವು ಕನ್ನಡದ ನಟರು ಪರಭಾಷೆಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾದ ವಸಿಷ್ಠ ಸಿಂಹ ಈಗಾಗಲೇ ಪರಭಾಷೆಯಲ್ಲಿ ನಟಿಸಿದ್ದಾರೆ. ಇದೀಗ ಜನಪ್ರಿಯ ನಟಿ, ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯಾ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ವಸಿಷ್ಠ ನಟಿಸಿದ್ದ ಮೊದಲ ತೆಲುಗು ಸಿನಿಮಾ ‘ಓದೆಲ ರೈಲ್ವೆ ಸ್ಟೇಷನ್’ ಉತ್ತಮ ಪ್ರತಿಕ್ರಿಯೆ ಗಳಿಸಿಕೊಂಡಿತ್ತು. ಇದೀಗ ಆ ಸಿನಿಮಾದ ಎರಡನೇ ಭಾಗ ನಿರ್ಮಾಣಗೊಳ್ಳುತ್ತಿದ್ದು, ಸಿನಿಮಾದಲ್ಲಿ ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಭಾಗದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದ ವಸಿಷ್ಠ ಸಿಂಹ ಎರಡನೇ ಭಾಗದಲ್ಲಿಯೂ ಮುಂದುವರೆದಿದ್ದಾರೆ.

‘ಓದೆಲ ರೈಲ್ವೆ ಸ್ಟೇಷನ್’ ಸಿನಿಮಾ ಸೀರಿಯಲ್ ಕಿಲ್ಲರ್ ಒಬ್ಬನ ಕತೆಯನ್ನು ಒಳಗೊಂಡಿತ್ತು. ಮದುವೆಯಾದ ನವ ವಧುವನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡುವ ವ್ಯಕ್ತಿಯ ಕತೆ ಸಿನಿಮಾದಲ್ಲಿತ್ತು. ಇದೀಗ ‘ಓದೆಲ 2’ ಸಿನಿಮಾ ರೆಡಿಯಾಗುತ್ತಿದ್ದು, ಸಿನಿಮಾದಲ್ಲಿ ತಮನ್ನಾ ತನಿಖಾಧಿಕಾರಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಟ ವಸಿಷ್ಠ ಸಿಂಹಗೆ ಹೊಸ ಬಿರುದು ಕೊಟ್ಟ ಅಭಿಮಾನಿಗಳು

‘ಓದೆಲ 2’ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ವಾರಣಾಸಿಯಲ್ಲಿ ನಡೆದಿದೆ. ಸಿನಿಮಾದ ಚಿತ್ರೀಕರಣ ಸಹ ಅಲ್ಲಿಂದಲೇ ಆರಂಭವಾಗಿದೆ. ಮೊದಲ ಭಾಗದಂತೆ ಎರಡನೇ ಭಾಗವೂ ಸಹ ಸಸ್ಪೆನ್ಸ್ ಥ್ರಿಲ್ಲರ್ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದ ಮುಹೂರ್ತದಲ್ಲಿ ತಮನ್ನಾ, ವಸಿಷ್ಠ ಸಿಂಹ, ನಟಿ ಹರಿಪ್ರಿಯ ಅವರುಗಳು ಭಾಗಿಯಾಗಿದ್ದರು. ಅಂದಹಾಗೆ ಸಿನಿಮಾಕ್ಕೆ ಕನ್ನಡಿಗ ಅಜನೀಶ್ ಲೋಕನಾಥ್ ಸಂಗೀತ ನೀಡಲಿದ್ದಾರೆ. ಅಜನೀಶ್ ಸಹ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

‘ಓದೆಲ 2’ ಸಿನಿಮಾದ ಕತೆಯನ್ನು ಸಂಪತ್ ನಂದಿ ರಚಿಸಿದ್ದು ಸಿನಿಮಾದ ನಿರ್ದೇಶನವನ್ನು ಅಶೋಕ್ ತೇಜ ಮಾಡುತ್ತಿದ್ದಾರೆ. ಮಧು ಕ್ರಿಯೇಷನ್ಸ್​ ಬ್ಯಾನರ್​ನಲ್ಲಿ ಡಿ ಮಧು ಬಂಡವಾಳ ಹೂಡಿದ್ದಾರೆ. ಸಿನಿಮಾದ ಬಹುತೇಕ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ