AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮನ್ನಾ ಭಾಟಿಯಾ ಜೊತೆ ನಟ ವಸಿಷ್ಠ ಸಿಂಹ ನಟನೆ, ಸಿನಿಮಾ ಯಾವುದು?

Tamannah-Vasishta Simha: ಕನ್ನಡದ ನಟ ವಸಿಷ್ಠ ಸಿಂಹ, ತಮನ್ನಾ ಭಾಟಿಯಾ ಜೊತೆಗೆ ತೆಲುಗು ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ವಾರಣಾಸಿಯಲ್ಲಿ ನಡೆದಿದೆ.

ತಮನ್ನಾ ಭಾಟಿಯಾ ಜೊತೆ ನಟ ವಸಿಷ್ಠ ಸಿಂಹ ನಟನೆ, ಸಿನಿಮಾ ಯಾವುದು?
ತಮನ್ನಾ ಭಾಟಿಯಾ
Follow us
ಮಂಜುನಾಥ ಸಿ.
|

Updated on: Mar 03, 2024 | 3:33 PM

ಕನ್ನಡದ ನಟರು ಪರಭಾಷೆಗಳಲ್ಲಿ ಮಿಂಚುವುದು ಹೊಸತೇನಲ್ಲ. ಕನ್ನಡದ ಹಲವು ನಟರಿಗೆ ಪರಭಾಷೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಇತ್ತೀಚೆಗೆ ಆ ಬೇಡಿಕೆ ತುಸು ಹೆಚ್ಚಾಗಿದೆ. ಸುದೀಪ್ (Sudeep), ಶಿವರಾಜ್ ಕುಮಾರ್ (Shiva Rajkumar) ಅವರುಗಳು ಮಾತ್ರವೇ ಅಲ್ಲದೆ ಹಲವು ಕನ್ನಡದ ನಟರು ಪರಭಾಷೆಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾದ ವಸಿಷ್ಠ ಸಿಂಹ ಈಗಾಗಲೇ ಪರಭಾಷೆಯಲ್ಲಿ ನಟಿಸಿದ್ದಾರೆ. ಇದೀಗ ಜನಪ್ರಿಯ ನಟಿ, ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯಾ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ವಸಿಷ್ಠ ನಟಿಸಿದ್ದ ಮೊದಲ ತೆಲುಗು ಸಿನಿಮಾ ‘ಓದೆಲ ರೈಲ್ವೆ ಸ್ಟೇಷನ್’ ಉತ್ತಮ ಪ್ರತಿಕ್ರಿಯೆ ಗಳಿಸಿಕೊಂಡಿತ್ತು. ಇದೀಗ ಆ ಸಿನಿಮಾದ ಎರಡನೇ ಭಾಗ ನಿರ್ಮಾಣಗೊಳ್ಳುತ್ತಿದ್ದು, ಸಿನಿಮಾದಲ್ಲಿ ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಭಾಗದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದ ವಸಿಷ್ಠ ಸಿಂಹ ಎರಡನೇ ಭಾಗದಲ್ಲಿಯೂ ಮುಂದುವರೆದಿದ್ದಾರೆ.

‘ಓದೆಲ ರೈಲ್ವೆ ಸ್ಟೇಷನ್’ ಸಿನಿಮಾ ಸೀರಿಯಲ್ ಕಿಲ್ಲರ್ ಒಬ್ಬನ ಕತೆಯನ್ನು ಒಳಗೊಂಡಿತ್ತು. ಮದುವೆಯಾದ ನವ ವಧುವನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡುವ ವ್ಯಕ್ತಿಯ ಕತೆ ಸಿನಿಮಾದಲ್ಲಿತ್ತು. ಇದೀಗ ‘ಓದೆಲ 2’ ಸಿನಿಮಾ ರೆಡಿಯಾಗುತ್ತಿದ್ದು, ಸಿನಿಮಾದಲ್ಲಿ ತಮನ್ನಾ ತನಿಖಾಧಿಕಾರಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಟ ವಸಿಷ್ಠ ಸಿಂಹಗೆ ಹೊಸ ಬಿರುದು ಕೊಟ್ಟ ಅಭಿಮಾನಿಗಳು

‘ಓದೆಲ 2’ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ವಾರಣಾಸಿಯಲ್ಲಿ ನಡೆದಿದೆ. ಸಿನಿಮಾದ ಚಿತ್ರೀಕರಣ ಸಹ ಅಲ್ಲಿಂದಲೇ ಆರಂಭವಾಗಿದೆ. ಮೊದಲ ಭಾಗದಂತೆ ಎರಡನೇ ಭಾಗವೂ ಸಹ ಸಸ್ಪೆನ್ಸ್ ಥ್ರಿಲ್ಲರ್ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದ ಮುಹೂರ್ತದಲ್ಲಿ ತಮನ್ನಾ, ವಸಿಷ್ಠ ಸಿಂಹ, ನಟಿ ಹರಿಪ್ರಿಯ ಅವರುಗಳು ಭಾಗಿಯಾಗಿದ್ದರು. ಅಂದಹಾಗೆ ಸಿನಿಮಾಕ್ಕೆ ಕನ್ನಡಿಗ ಅಜನೀಶ್ ಲೋಕನಾಥ್ ಸಂಗೀತ ನೀಡಲಿದ್ದಾರೆ. ಅಜನೀಶ್ ಸಹ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

‘ಓದೆಲ 2’ ಸಿನಿಮಾದ ಕತೆಯನ್ನು ಸಂಪತ್ ನಂದಿ ರಚಿಸಿದ್ದು ಸಿನಿಮಾದ ನಿರ್ದೇಶನವನ್ನು ಅಶೋಕ್ ತೇಜ ಮಾಡುತ್ತಿದ್ದಾರೆ. ಮಧು ಕ್ರಿಯೇಷನ್ಸ್​ ಬ್ಯಾನರ್​ನಲ್ಲಿ ಡಿ ಮಧು ಬಂಡವಾಳ ಹೂಡಿದ್ದಾರೆ. ಸಿನಿಮಾದ ಬಹುತೇಕ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ