AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಪ್ಪ’ ಟ್ರೇಲರ್​ನಲ್ಲಿ ಅಬ್ಬರಿಸಿದ ವೆಂಕಟೇಶ್​; ಓಟಿಟಿ ರಿಲೀಸ್​ ದಿನಾಂಕ ಬಹಿರಂಗ

Narappa: ತಮಿಳಿನಲ್ಲಿ ಧನುಷ್​​ ನಟಿಸಿದ್ದ ‘ಅಸುರನ್​’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದನ್ನೇ ತೆಲುಗಿನಲ್ಲಿ ‘ನಾರಪ್ಪ’ ಎಂದು ರಿಮೇಕ್​ ಮಾಡಲಾಗಿದ್ದು, ಧನುಶ್​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ದಗ್ಗುಬಾಟಿ ವೆಂಕಟೇಶ್​ ನಿಭಾಯಿಸಿದ್ದಾರೆ.

‘ನಾರಪ್ಪ’ ಟ್ರೇಲರ್​ನಲ್ಲಿ ಅಬ್ಬರಿಸಿದ ವೆಂಕಟೇಶ್​; ಓಟಿಟಿ ರಿಲೀಸ್​ ದಿನಾಂಕ ಬಹಿರಂಗ
ದಗ್ಗುಬಾಟಿ ವೆಂಕಟೇಶ್​
TV9 Web
| Edited By: |

Updated on: Jul 14, 2021 | 3:33 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ನಾರಪ್ಪ’ ಕೂಡ ಇದೆ. ದಗ್ಗುಬಾಟಿ ವೆಂಕಟೇಶ್​ ಮತ್ತು ಪ್ರಿಯಾಮಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರಕ್ಕಾಗಿ ಟಾಲಿವುಡ್ ಸಿನಿಪ್ರಿಯರು ಕಾದು ಕುಳಿತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಚಿತ್ರಮಂದಿರದಲ್ಲೇ ಬಿಡುಗಡೆ ಆಗಬೇಕಿತ್ತು. ಆದರೆ ಕೊವಿಡ್ ಎರಡನೇ ಅಲೆ ಹಾವಳಿಯ ಕಾರಣದಿಂದ ಚಿತ್ರಮಂದಿರಗಳು ಬಾಗಿಲು ಮುಚ್ಚಿದ ಪರಿಣಾಮ ಓಟಿಟಿಯತ್ತ ನಿರ್ಮಾಪಕರು ಗಮನ ಹರಿಸುವಂತಾಗಿದೆ. ಈಗ ‘ನಾರಪ್ಪ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದ್ದು, ರಿಲೀಸ್​ ದಿನಾಂಕ ಕೂಡ ಬಹಿರಂಗ ಆಗಿದೆ.

ತಮಿಳಿನಲ್ಲಿ ಧನುಷ್​ ನಟಿಸಿದ್ದ ‘ಅಸುರನ್​’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದನ್ನೇ ತೆಲುಗಿನಲ್ಲಿ ‘ನಾರಪ್ಪ’ ಎಂದು ರಿಮೇಕ್​ ಮಾಡಲಾಗಿದ್ದು, ಧನುಷ್​​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ವೆಂಕಟೇಶ್​ ನಿಭಾಯಿಸಿದ್ದಾರೆ. ಎರಡು ಶೇಡ್​ನ ಗೆಟಪ್​ನಲ್ಲಿ ಅವರು ಗಮನ ಸೆಳೆಯುತ್ತಿದ್ದಾರೆ. ಚಿತ್ರದ ಝಲಕ್​ ತೋರಿಸಲು ಇಂದು (ಜು.14) ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ಕೊರೊನಾದಿಂದ ಚಿತ್ರಮಂದಿರಗಳು ಬಾಗಿಲು ಮುಚ್ಚಿರುವ ಪರಿಣಾಮ ನೇರವಾಗಿ ಆನ್​ಲೈನ್​ನಲ್ಲೇ ‘ನಾರಪ್ಪ’ ಬಿಡುಗಡೆ ಆಗುತ್ತಿದೆ. ಜು.20ರಂದು ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ನಾರಪ್ಪ ತೆರೆಕಾಣಲಿದೆ. ಓಟಿಟಿಯಲ್ಲಿ ಸಿನಿಮಾಗಳನ್ನು ಬಿಡುಗಡೆ ಮಾಡುವುದನ್ನು ಚಿತ್ರಮಂದಿರಗಳ ಮಾಲೀಕರು ಖಂಡಿಸುತ್ತಿದ್ದಾರೆ. ಅದರ ನಡುವೆಯೂ ‘ನಾರಪ್ಪ’ ನಿರ್ಮಾಪಕರು ಆನ್​ಲೈನ್​ ಮೊರೆ ಹೋಗುತ್ತಿದ್ದಾರೆ.

ಅಮ್ಮು ಅಭಿರಾಮಿ, ಕಾರ್ತಿಕ್​ ರತ್ನಂ, ರಾವ್​ ರಮೇಶ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಇರುವ ಜಾತಿ ಸಂಘರ್ಷವನ್ನು ಈ ಸಿನಿಮಾ ಕಟ್ಟಿಕೊಡುತ್ತದೆ. ಮೂಲ ಸಿನಿಮಾದಲ್ಲಿನ ಧನುಷ್​​ ಅವರ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಅಂಥ ಒಂದು ಚಾಲೆಂಜಿಂಗ್​ ಪಾತ್ರವನ್ನು ತೆಲುಗಿನಲ್ಲಿ ವೆಂಕಟೇಶ್​ ಅವರು ಯಾವ ರೀತಿ ನಿಭಾಯಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ತಮಿಳಿನಲ್ಲಿ ನೋಡಿ ಇಷ್ಟಪಟ್ಟಿರುವ ಪ್ರೇಕ್ಷಕರು ತೆಲುಗಿನಲ್ಲಿ ಹೇಗೆ ಸ್ವೀಕರಿಸಲಿದ್ದಾರೆ ಎಂಬ ಕೌತುಕ ಮನೆ ಮಾಡಿದೆ.

‘ನಾರಪ್ಪ’ ಚಿತ್ರಕ್ಕೆ ಶ್ರೀಕಾಂತ್​ ಅಡ್ಡಲ ನಿರ್ದೇಶನ ಮಾಡಿದ್ದಾರೆ. ಮನಸೆಳೆಯುವ ನಟನೆಯ ಮತ್ತೆ ಭರ್ಜರಿ ಆ್ಯಕ್ಷನ್​ ದೃಶ್ಯಗಳ ಮೂಲಕ ವೆಂಕಟೇಶ್​ ಅಬ್ಬರಿಸಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಗುತ್ತಿದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಮೂಲಕ ಯಶಸ್ಸು ಕಂಡಿರುವ ನಟಿ ಪ್ರಿಯಾಮಾಣಿ ಅವರಿಗೆ ‘ನಾರಪ್ಪ’ ಚಿತ್ರದಲ್ಲಿ ಮತ್ತೊಂದು ಗೆಲುವು ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

150 ಕೋಟಿ ರೂ. ಬಂಗಲೆ ಕಟ್ಟಿಸುತ್ತಿರುವ ನಟ ಧನುಷ್​​; ಈ ಮನೆಯ ವಿಶೇಷ ಏನು?

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?