AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಪ್ಪ’ ಟ್ರೇಲರ್​ನಲ್ಲಿ ಅಬ್ಬರಿಸಿದ ವೆಂಕಟೇಶ್​; ಓಟಿಟಿ ರಿಲೀಸ್​ ದಿನಾಂಕ ಬಹಿರಂಗ

Narappa: ತಮಿಳಿನಲ್ಲಿ ಧನುಷ್​​ ನಟಿಸಿದ್ದ ‘ಅಸುರನ್​’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದನ್ನೇ ತೆಲುಗಿನಲ್ಲಿ ‘ನಾರಪ್ಪ’ ಎಂದು ರಿಮೇಕ್​ ಮಾಡಲಾಗಿದ್ದು, ಧನುಶ್​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ದಗ್ಗುಬಾಟಿ ವೆಂಕಟೇಶ್​ ನಿಭಾಯಿಸಿದ್ದಾರೆ.

‘ನಾರಪ್ಪ’ ಟ್ರೇಲರ್​ನಲ್ಲಿ ಅಬ್ಬರಿಸಿದ ವೆಂಕಟೇಶ್​; ಓಟಿಟಿ ರಿಲೀಸ್​ ದಿನಾಂಕ ಬಹಿರಂಗ
ದಗ್ಗುಬಾಟಿ ವೆಂಕಟೇಶ್​
TV9 Web
| Edited By: |

Updated on: Jul 14, 2021 | 3:33 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ನಾರಪ್ಪ’ ಕೂಡ ಇದೆ. ದಗ್ಗುಬಾಟಿ ವೆಂಕಟೇಶ್​ ಮತ್ತು ಪ್ರಿಯಾಮಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರಕ್ಕಾಗಿ ಟಾಲಿವುಡ್ ಸಿನಿಪ್ರಿಯರು ಕಾದು ಕುಳಿತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಚಿತ್ರಮಂದಿರದಲ್ಲೇ ಬಿಡುಗಡೆ ಆಗಬೇಕಿತ್ತು. ಆದರೆ ಕೊವಿಡ್ ಎರಡನೇ ಅಲೆ ಹಾವಳಿಯ ಕಾರಣದಿಂದ ಚಿತ್ರಮಂದಿರಗಳು ಬಾಗಿಲು ಮುಚ್ಚಿದ ಪರಿಣಾಮ ಓಟಿಟಿಯತ್ತ ನಿರ್ಮಾಪಕರು ಗಮನ ಹರಿಸುವಂತಾಗಿದೆ. ಈಗ ‘ನಾರಪ್ಪ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದ್ದು, ರಿಲೀಸ್​ ದಿನಾಂಕ ಕೂಡ ಬಹಿರಂಗ ಆಗಿದೆ.

ತಮಿಳಿನಲ್ಲಿ ಧನುಷ್​ ನಟಿಸಿದ್ದ ‘ಅಸುರನ್​’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದನ್ನೇ ತೆಲುಗಿನಲ್ಲಿ ‘ನಾರಪ್ಪ’ ಎಂದು ರಿಮೇಕ್​ ಮಾಡಲಾಗಿದ್ದು, ಧನುಷ್​​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ವೆಂಕಟೇಶ್​ ನಿಭಾಯಿಸಿದ್ದಾರೆ. ಎರಡು ಶೇಡ್​ನ ಗೆಟಪ್​ನಲ್ಲಿ ಅವರು ಗಮನ ಸೆಳೆಯುತ್ತಿದ್ದಾರೆ. ಚಿತ್ರದ ಝಲಕ್​ ತೋರಿಸಲು ಇಂದು (ಜು.14) ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ಕೊರೊನಾದಿಂದ ಚಿತ್ರಮಂದಿರಗಳು ಬಾಗಿಲು ಮುಚ್ಚಿರುವ ಪರಿಣಾಮ ನೇರವಾಗಿ ಆನ್​ಲೈನ್​ನಲ್ಲೇ ‘ನಾರಪ್ಪ’ ಬಿಡುಗಡೆ ಆಗುತ್ತಿದೆ. ಜು.20ರಂದು ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ನಾರಪ್ಪ ತೆರೆಕಾಣಲಿದೆ. ಓಟಿಟಿಯಲ್ಲಿ ಸಿನಿಮಾಗಳನ್ನು ಬಿಡುಗಡೆ ಮಾಡುವುದನ್ನು ಚಿತ್ರಮಂದಿರಗಳ ಮಾಲೀಕರು ಖಂಡಿಸುತ್ತಿದ್ದಾರೆ. ಅದರ ನಡುವೆಯೂ ‘ನಾರಪ್ಪ’ ನಿರ್ಮಾಪಕರು ಆನ್​ಲೈನ್​ ಮೊರೆ ಹೋಗುತ್ತಿದ್ದಾರೆ.

ಅಮ್ಮು ಅಭಿರಾಮಿ, ಕಾರ್ತಿಕ್​ ರತ್ನಂ, ರಾವ್​ ರಮೇಶ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಇರುವ ಜಾತಿ ಸಂಘರ್ಷವನ್ನು ಈ ಸಿನಿಮಾ ಕಟ್ಟಿಕೊಡುತ್ತದೆ. ಮೂಲ ಸಿನಿಮಾದಲ್ಲಿನ ಧನುಷ್​​ ಅವರ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಅಂಥ ಒಂದು ಚಾಲೆಂಜಿಂಗ್​ ಪಾತ್ರವನ್ನು ತೆಲುಗಿನಲ್ಲಿ ವೆಂಕಟೇಶ್​ ಅವರು ಯಾವ ರೀತಿ ನಿಭಾಯಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ತಮಿಳಿನಲ್ಲಿ ನೋಡಿ ಇಷ್ಟಪಟ್ಟಿರುವ ಪ್ರೇಕ್ಷಕರು ತೆಲುಗಿನಲ್ಲಿ ಹೇಗೆ ಸ್ವೀಕರಿಸಲಿದ್ದಾರೆ ಎಂಬ ಕೌತುಕ ಮನೆ ಮಾಡಿದೆ.

‘ನಾರಪ್ಪ’ ಚಿತ್ರಕ್ಕೆ ಶ್ರೀಕಾಂತ್​ ಅಡ್ಡಲ ನಿರ್ದೇಶನ ಮಾಡಿದ್ದಾರೆ. ಮನಸೆಳೆಯುವ ನಟನೆಯ ಮತ್ತೆ ಭರ್ಜರಿ ಆ್ಯಕ್ಷನ್​ ದೃಶ್ಯಗಳ ಮೂಲಕ ವೆಂಕಟೇಶ್​ ಅಬ್ಬರಿಸಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಗುತ್ತಿದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಮೂಲಕ ಯಶಸ್ಸು ಕಂಡಿರುವ ನಟಿ ಪ್ರಿಯಾಮಾಣಿ ಅವರಿಗೆ ‘ನಾರಪ್ಪ’ ಚಿತ್ರದಲ್ಲಿ ಮತ್ತೊಂದು ಗೆಲುವು ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

150 ಕೋಟಿ ರೂ. ಬಂಗಲೆ ಕಟ್ಟಿಸುತ್ತಿರುವ ನಟ ಧನುಷ್​​; ಈ ಮನೆಯ ವಿಶೇಷ ಏನು?

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ