AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಪ್ಪ’ ಟ್ರೇಲರ್​ನಲ್ಲಿ ಅಬ್ಬರಿಸಿದ ವೆಂಕಟೇಶ್​; ಓಟಿಟಿ ರಿಲೀಸ್​ ದಿನಾಂಕ ಬಹಿರಂಗ

Narappa: ತಮಿಳಿನಲ್ಲಿ ಧನುಷ್​​ ನಟಿಸಿದ್ದ ‘ಅಸುರನ್​’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದನ್ನೇ ತೆಲುಗಿನಲ್ಲಿ ‘ನಾರಪ್ಪ’ ಎಂದು ರಿಮೇಕ್​ ಮಾಡಲಾಗಿದ್ದು, ಧನುಶ್​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ದಗ್ಗುಬಾಟಿ ವೆಂಕಟೇಶ್​ ನಿಭಾಯಿಸಿದ್ದಾರೆ.

‘ನಾರಪ್ಪ’ ಟ್ರೇಲರ್​ನಲ್ಲಿ ಅಬ್ಬರಿಸಿದ ವೆಂಕಟೇಶ್​; ಓಟಿಟಿ ರಿಲೀಸ್​ ದಿನಾಂಕ ಬಹಿರಂಗ
ದಗ್ಗುಬಾಟಿ ವೆಂಕಟೇಶ್​
TV9 Web
| Edited By: |

Updated on: Jul 14, 2021 | 3:33 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ನಾರಪ್ಪ’ ಕೂಡ ಇದೆ. ದಗ್ಗುಬಾಟಿ ವೆಂಕಟೇಶ್​ ಮತ್ತು ಪ್ರಿಯಾಮಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರಕ್ಕಾಗಿ ಟಾಲಿವುಡ್ ಸಿನಿಪ್ರಿಯರು ಕಾದು ಕುಳಿತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಚಿತ್ರಮಂದಿರದಲ್ಲೇ ಬಿಡುಗಡೆ ಆಗಬೇಕಿತ್ತು. ಆದರೆ ಕೊವಿಡ್ ಎರಡನೇ ಅಲೆ ಹಾವಳಿಯ ಕಾರಣದಿಂದ ಚಿತ್ರಮಂದಿರಗಳು ಬಾಗಿಲು ಮುಚ್ಚಿದ ಪರಿಣಾಮ ಓಟಿಟಿಯತ್ತ ನಿರ್ಮಾಪಕರು ಗಮನ ಹರಿಸುವಂತಾಗಿದೆ. ಈಗ ‘ನಾರಪ್ಪ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದ್ದು, ರಿಲೀಸ್​ ದಿನಾಂಕ ಕೂಡ ಬಹಿರಂಗ ಆಗಿದೆ.

ತಮಿಳಿನಲ್ಲಿ ಧನುಷ್​ ನಟಿಸಿದ್ದ ‘ಅಸುರನ್​’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದನ್ನೇ ತೆಲುಗಿನಲ್ಲಿ ‘ನಾರಪ್ಪ’ ಎಂದು ರಿಮೇಕ್​ ಮಾಡಲಾಗಿದ್ದು, ಧನುಷ್​​ ಮಾಡಿದ್ದ ಪಾತ್ರವನ್ನು ಟಾಲಿವುಡ್​ನಲ್ಲಿ ವೆಂಕಟೇಶ್​ ನಿಭಾಯಿಸಿದ್ದಾರೆ. ಎರಡು ಶೇಡ್​ನ ಗೆಟಪ್​ನಲ್ಲಿ ಅವರು ಗಮನ ಸೆಳೆಯುತ್ತಿದ್ದಾರೆ. ಚಿತ್ರದ ಝಲಕ್​ ತೋರಿಸಲು ಇಂದು (ಜು.14) ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ಕೊರೊನಾದಿಂದ ಚಿತ್ರಮಂದಿರಗಳು ಬಾಗಿಲು ಮುಚ್ಚಿರುವ ಪರಿಣಾಮ ನೇರವಾಗಿ ಆನ್​ಲೈನ್​ನಲ್ಲೇ ‘ನಾರಪ್ಪ’ ಬಿಡುಗಡೆ ಆಗುತ್ತಿದೆ. ಜು.20ರಂದು ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ನಾರಪ್ಪ ತೆರೆಕಾಣಲಿದೆ. ಓಟಿಟಿಯಲ್ಲಿ ಸಿನಿಮಾಗಳನ್ನು ಬಿಡುಗಡೆ ಮಾಡುವುದನ್ನು ಚಿತ್ರಮಂದಿರಗಳ ಮಾಲೀಕರು ಖಂಡಿಸುತ್ತಿದ್ದಾರೆ. ಅದರ ನಡುವೆಯೂ ‘ನಾರಪ್ಪ’ ನಿರ್ಮಾಪಕರು ಆನ್​ಲೈನ್​ ಮೊರೆ ಹೋಗುತ್ತಿದ್ದಾರೆ.

ಅಮ್ಮು ಅಭಿರಾಮಿ, ಕಾರ್ತಿಕ್​ ರತ್ನಂ, ರಾವ್​ ರಮೇಶ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಇರುವ ಜಾತಿ ಸಂಘರ್ಷವನ್ನು ಈ ಸಿನಿಮಾ ಕಟ್ಟಿಕೊಡುತ್ತದೆ. ಮೂಲ ಸಿನಿಮಾದಲ್ಲಿನ ಧನುಷ್​​ ಅವರ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಅಂಥ ಒಂದು ಚಾಲೆಂಜಿಂಗ್​ ಪಾತ್ರವನ್ನು ತೆಲುಗಿನಲ್ಲಿ ವೆಂಕಟೇಶ್​ ಅವರು ಯಾವ ರೀತಿ ನಿಭಾಯಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ತಮಿಳಿನಲ್ಲಿ ನೋಡಿ ಇಷ್ಟಪಟ್ಟಿರುವ ಪ್ರೇಕ್ಷಕರು ತೆಲುಗಿನಲ್ಲಿ ಹೇಗೆ ಸ್ವೀಕರಿಸಲಿದ್ದಾರೆ ಎಂಬ ಕೌತುಕ ಮನೆ ಮಾಡಿದೆ.

‘ನಾರಪ್ಪ’ ಚಿತ್ರಕ್ಕೆ ಶ್ರೀಕಾಂತ್​ ಅಡ್ಡಲ ನಿರ್ದೇಶನ ಮಾಡಿದ್ದಾರೆ. ಮನಸೆಳೆಯುವ ನಟನೆಯ ಮತ್ತೆ ಭರ್ಜರಿ ಆ್ಯಕ್ಷನ್​ ದೃಶ್ಯಗಳ ಮೂಲಕ ವೆಂಕಟೇಶ್​ ಅಬ್ಬರಿಸಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಗುತ್ತಿದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಮೂಲಕ ಯಶಸ್ಸು ಕಂಡಿರುವ ನಟಿ ಪ್ರಿಯಾಮಾಣಿ ಅವರಿಗೆ ‘ನಾರಪ್ಪ’ ಚಿತ್ರದಲ್ಲಿ ಮತ್ತೊಂದು ಗೆಲುವು ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

150 ಕೋಟಿ ರೂ. ಬಂಗಲೆ ಕಟ್ಟಿಸುತ್ತಿರುವ ನಟ ಧನುಷ್​​; ಈ ಮನೆಯ ವಿಶೇಷ ಏನು?

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ