AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ-ವಿಜಯ್ ದೇವರಕೊಂಡ ಬಗ್ಗೆ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ

Rashmika-Vijay Deverakonda: ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿಯ ಮದುವೆ ಮುರಿದಿದ್ದ ಜ್ಯೋತಿಷಿ ವೇಣು ಸ್ವಾಮಿ, ಇದೀಗ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಮದುವೆ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ರಶ್ಮಿಕಾ-ವಿಜಯ್ ದೇವರಕೊಂಡ ಬಗ್ಗೆ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ
ರಶ್ಮಿಕಾ-ವಿಜಯ್-ವೇಣು
ಮಂಜುನಾಥ ಸಿ.
|

Updated on: Dec 28, 2023 | 7:04 PM

Share

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ತುಸು ಜೋರಾಗಿಯೇ ಹರಿದಾಡುತ್ತಿದೆ. ಇಬ್ಬರು ಲಿವಿನ್ ರಿಲೇಷನ್​ನಲ್ಲಿದ್ದಾರೆ ಎಂಬ ಮಾತೂ ಸಹ ಅಲ್ಲಲ್ಲಿ ಕೇಳಿ ಬರುತ್ತಿದೆ. ತಾವಿಬ್ಬರೂ ‘ಜಸ್ಟ್ ಗೆಳೆಯರು’ ಎಂದಷ್ಟೆ ಹೇಳಿಕೊಂಡು ತಿರುಗುತ್ತಿದೆ ಈ ಜೋಡಿ. ತೆಲುಗು ರಾಜ್ಯಗಳಲ್ಲಿ ಬಹಳ ಜನಪ್ರಿಯವಾಗಿರುವ ಜ್ಯೋತಿಷಿ ವೇಣು ಸ್ವಾಮಿ ಅವರು ಇದೀಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ದಾಂಪತ್ಯ ಹೇಗಿರಲಿದೆ ಎಂಬ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ರಶ್ಮಿಕಾ ಮಂದಣ್ಣ ತಮ್ಮ ವೃತ್ತಿ ಬದುಕಿನ ಆರಂಭದಲ್ಲಿದ್ದಾಗ ಇದೇ ವೇಣು ಸ್ವಾಮಿ ಅವರಿಂದ ವಿಶೇಷ ಪೂಜೆ ಮಾಡಿಸಿದ್ದರು. ಇವರ ಸಲಹೆ ಪಡೆದೇ ರಕ್ಷಿತ್ ಶೆಟ್ಟಿ ಜೊತೆಗಿನ ಮದುವೆ ಮುರಿದುಕೊಂಡು ವೃತ್ತಿ ಬದುಕಿನ ಕಡೆಗೆ ಹೆಚ್ಚು ಗಮನವಹಿಸಿ ಯಶಸ್ಸು ಗಳಿಸಿದ್ದರು. ಅದೇ ಕಾರಣಕ್ಕೆ ಈಗ ರಶ್ಮಿಕಾ ಬಗ್ಗೆ ವೇಣು ಸ್ವಾಮಿ ಹೇಳಿರುವ ಭವಿಷ್ಯಕ್ಕೆ ಹೆಚ್ಚಿನ ಮೌಲ್ಯವಿದೆ.

ಇತ್ತಿಚೆಗೆ ಯೂಟ್ಯೂಬ್​ ಚಾನೆಲ್​ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಶ್ಮಿಕಾ ಹಾಗೂ ವಿಜಯ್​ ದೇವರಕೊಂಡ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘‘ರಶ್ಮಿಕಾ ಹಾಗೂ ವಿಜಯ್ ದೇವರೊಂಡ ಪರಸ್ಪರ ಪ್ರೀತಿಯಲ್ಲಿರುವುದು ಗುಟ್ಟೇನೂ ಅಲ್ಲ. ಅವರಿಬ್ಬರು ವಿವಾಹ ಆಗಲಿದ್ದಾರೆ. ಆದರೆ ವಿವಾಹವಾದ ಬಳಿಕ ಇಬ್ಬರೂ ದೂರಾಗಲಿದ್ದಾರೆ. ಇದು ಖಚಿತ’’ ಎಂದಿದ್ದಾರೆ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ, ವಿಜಯ್​ ದೇವರಕೊಂಡ ಫೋಟೋ ದುರ್ಬಳಕೆ: ಕ್ಷಮೆ ಕೇಳಿದ ನಟ ನಾನಿ

‘‘ವಿಜಯ್ ದೇವರಕೊಂಡ ಜೊತೆ ಮದುವೆಯಾದರೆ ವಿಚ್ಛೇದನ ಆಗಲಿದೆ ಎಂದು ನಾನು ನೇರವಾಗಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿದ್ದೇನೆ. ಇದೇ ಕಾರಣಕ್ಕೆ ಅವರು ನನ್ನೊಂದಿಗೆ ಮಾತನಾಡುವುದು ಬಿಟ್ಟು, ನನ್ನ ಸಂಪರ್ಕ ಕಡಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಸಮಾಜಕ್ಕೆ ನಾಯಕಿ ಆಗಿರಬಹುದು ಆದರೆ ನನಗೆ ಕೇವಲ ಕ್ಲೈಂಟ್ ಅಷ್ಟೆ. ಅವರ ಜನಪ್ರಿಯತೆ ನೋಡಿ ನಾನು ಭವಿಷ್ಯ ಹೇಳುವುದಿಲ್ಲ, ಅವರ ಗ್ರಹಗತಿ ನೋಡಿ ಭವಿಷ್ಯ ಹೇಳುತ್ತೇನೆ. ನಾನು ಹೇಳಿದ ನಿಜ ಅವರಿಗೆ ಹಿಡಿಸಲಿಲ್ಲ, ಇರಲಿ ಪರವಾಗಿಲ್ಲ, ಆದರೆ ಅವರಿಬ್ಬರು ಮದುವೆಯಾಗಿ ದೂರಾಗುವುದು ಖಚಿತ’’ ಎಂದಿದ್ದಾರೆ ವೇಣು ಸ್ವಾಮಿ.

‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ವೇಣು ಸ್ವಾಮಿ ಅವರ ಬಳಿ ರಶ್ಮಿಕಾ ಮಂದಣ್ಣ ವಿಶೇಷ ಪೂಜೆ ಮಾಡಿಸಿದ್ದರು. ಆ ವೇಳೆಗೆ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾರ ಮದುವೆ ಸಹ ನಿಗದಿಯಾಗಿತ್ತು. ಆದರೆ ವೇಣು ಸ್ವಾಮಿಯ ಸಲಹೆಯಂತೆ ರಕ್ಷಿತ್ ಶೆಟ್ಟಿ ಜೊತೆ ಮದುವೆ ಮುರಿದುಕೊಂಡರು ರಶ್ಮಿಕಾ. ಈ ವಿಷಯವನ್ನು ಸ್ವತಃ ವೇಣು ಸ್ವಾಮಿ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ವಿವಾಹವಾದಾಗಲೂ ಸಹ ಈ ಇಬ್ಬರೂ ಆದಷ್ಟು ಬೇಗ ದೂರಾಗುತ್ತಾರೆ ಎಂದು ವೇಣು ಸ್ವಾಮಿ ಭವಿಷ್ಯ ನುಡಿದಿದ್ದರು. ಅದರಂತೆಯೇ ಆ ಇಬ್ಬರೂ ದೂರಾದರು. ಇತ್ತೀಚೆಗೆ ನಟಿ ನಿಧಿ ಅಗರ್ವಾಲ್, ವೇಣು ಸ್ವಾಮಿ ಬಳಿ ಪೂಜೆಗಳನ್ನು ಮಾಡಿಸಿದ್ದಾರೆ. ಅದರ ಬೆನ್ನಲ್ಲೆ ಪವನ್ ಕಲ್ಯಾಣ್ ಜೊತೆ ಒಂದು ಸಿನಿಮಾ ಹಾಗೂ ಪ್ರಭಾಸ್ ಜೊತೆ ಒಂದು ಸಿನಿಮಾದಲ್ಲಿ ನಟಿಸಲು ಅವರಿಗೆ ಅವಕಾಶ ದೊರಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ