Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​ನಲ್ಲಿ ಯಶ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’; ಬಾಯ್ತಪ್ಪಿ ಸತ್ಯ ಹೇಳಿದ್ರಾ ‘ಸಲಾರ್’ ಗಾಯಕಿ?

‘ಸಲಾರ್’ ಪ್ರಶಾಂತ್ ನೀಲ್ ಯೂನಿವರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ, ಇದಕ್ಕೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ತಂಡದವರು ಈ ವಿಚಾರದಲ್ಲಿ ಕುತೂಹಲ ಕಾಪಾಡಿಕೊಂಡಿದ್ದಾರೆ. ತೀರ್ಥಾ ಸುಭಾಷ್ ಅವರು ಈ ವಿಚಾರದಲ್ಲಿ ನಿಜ ಹೇಳಿದ್ದಾರೆ.

‘ಸಲಾರ್​ನಲ್ಲಿ ಯಶ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’; ಬಾಯ್ತಪ್ಪಿ ಸತ್ಯ ಹೇಳಿದ್ರಾ ‘ಸಲಾರ್’ ಗಾಯಕಿ?
ಪ್ರಭಾಸ್​-ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Dec 13, 2023 | 9:54 AM

‘ಸಲಾರ್’ ಸಿನಿಮಾಗೂ ‘ಕೆಜಿಎಫ್ 2’ (KGF 2) ಚಿತ್ರಕ್ಕೂ ಲಿಂಕ್ ಇದೆ ಎಂಬ ಮಾತು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಆದರೆ, ಈವರೆಗೆ ಇದಕ್ಕೆ ಉತ್ತರ ಸಿಕ್ಕಿಲ್ಲ. ಟ್ರೇಲರ್, ಟೀಸರ್​ನಲ್ಲಿ ಈ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ತಂಡದವರು ಈ ಬಗ್ಗೆ ಮೌನ ವಹಿಸಿದ್ದಾರೆ. ಈಗ ‘ಸಲಾರ್’ ಸಿನಿಮಾದಲ್ಲಿ ಸಾಂಗ್ ಒಂದನ್ನು ಹಾಡಿರುವ ತೀರ್ಥಾ ಸುಭಾಷ್ ಅವರು ಬಾಯ್ತಪ್ಪಿ ಒಂದು ದೊಡ್ಡ ಸತ್ಯ ರಿವೀಲ್ ಮಾಡಿದ್ದಾರೆ. ಅವರ ಸಂದರ್ಶನ ಸಾಕಷ್ಟು ಚರ್ಚೆ ಆಗುತ್ತಿದೆ.

ಸದ್ಯ ಭಾರತದಲ್ಲಿ ಸಿನಿಮಾ ಯೂನಿವರ್ಸ್​ಗಳು ಸಿದ್ಧಗೊಂಡಿವೆ. ಅಂದರೆ, ಒಂದು ನಿರ್ಮಾಣ ಸಂಸ್ಥೆ ಅಥವಾ ನಿರ್ದೇಶಕನ ಸಿನಿಮಾಗಳಿಗೆ, ಕಥೆಗೆ ಲಿಂಕ್ ಇರುತ್ತದೆ. ಒಂದು ಸಿನಿಮಾದಲ್ಲಿ ಬಂದ ಪಾತ್ರಗಳು ಮತ್ತೊಂದು ಸಿನಿಮಾದಲ್ಲಿ ಬರುತ್ತವೆ. ‘ಸಲಾರ್’ ಪ್ರಶಾಂತ್ ನೀಲ್ ಯೂನಿವರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ, ಇದಕ್ಕೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ತಂಡದವರು ಈ ವಿಚಾರದಲ್ಲಿ ಕುತೂಹಲ ಕಾಪಾಡಿಕೊಂಡಿದ್ದಾರೆ. ತೀರ್ಥಾ ಸುಭಾಷ್ ಅವರು ಈ ವಿಚಾರದಲ್ಲಿ ನಿಜ ಹೇಳಿದ್ದಾರೆ.

ತೀರ್ಥಾ ಅವರು ಮೂಲತಃ ಕೇರಳದವರು. ಅವರು ಇತ್ತೀಚೆಗೆ ಸಿಂಗಿಂಗ್ ರಿಯಾಲಿಟಿ ಶೋನಲ್ಲಿ ಗೆದ್ದಿದ್ದಾರೆ. ಈ ಖುಷಿಯನ್ನು ಅವರು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಅವರು ‘ಸಲಾರ್’ ಚಿತ್ರದಲ್ಲಿ ಹಾಡೊಂದನ್ನು ಹಾಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಪ್ರಭಾಸ್ ಅಂಕಲ್, ಪೃಥ್ವಿರಾಜ್ ಅಂಕಲ್, ಯಶ್ ಅಂಕಲ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’ ಎಂದಿದ್ದಾರೆ. ಅವರ ಮಾತು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ನಂತರ ಇದಕ್ಕೆ ತೀರ್ಥಾ ಮತ್ತೊಂದು ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ನಾನು ಕೆಜಿಎಫ್ ಸಿನಿಮಾವನ್ನು ಹಲವು ಬಾರಿ ನೋಡಿದ್ದೇನೆ. ಕೆಜಿಎಫ್ ತಂಡದ ಮ್ಯೂಸಿಕ್ ಡೈರೆಕ್ಟರ್ ಸಲಾರ್​ಗೂ ಕೆಲಸ ಮಾಡಿದ್ದಾರೆ ಎಂದು ನನ್ನ ತಂದೆ ಹೇಳಿದ್ದರು. ಹಾಗಾಗಿ ನನ್ನ ಮನಸ್ಸಿನಲ್ಲಿ ಯಶ್ ಅಂಕಲ್ ಕೂಡ ಸಲಾರ್​ ಚಿತ್ರದಲ್ಲಿ ಇರ್ತಾರೆ ಎಂದು ಭಾವಿಸಿದ್ದೆ. ಆ ಊಹೆಯಲ್ಲಿಯೇ ನಾನು ಅವನ ಹೆಸರನ್ನು ಹೇಳಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಡಂಕಿ’ ಎದುರು ‘ಸಲಾರ್’ ಬಿಡುಗಡೆ ಏಕೆ, ಶಾರುಖ್ ಮೇಲೆ ಹೊಂಬಾಳೆಗೆ ಏಕೀ ಸಿಟ್ಟು? ವಿಜಯ್ ಕಿರಗಂದೂರು ಹೇಳಿದ್ದು ಹೀಗೆ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ