‘ಸಲಾರ್​ನಲ್ಲಿ ಯಶ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’; ಬಾಯ್ತಪ್ಪಿ ಸತ್ಯ ಹೇಳಿದ್ರಾ ‘ಸಲಾರ್’ ಗಾಯಕಿ?

‘ಸಲಾರ್’ ಪ್ರಶಾಂತ್ ನೀಲ್ ಯೂನಿವರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ, ಇದಕ್ಕೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ತಂಡದವರು ಈ ವಿಚಾರದಲ್ಲಿ ಕುತೂಹಲ ಕಾಪಾಡಿಕೊಂಡಿದ್ದಾರೆ. ತೀರ್ಥಾ ಸುಭಾಷ್ ಅವರು ಈ ವಿಚಾರದಲ್ಲಿ ನಿಜ ಹೇಳಿದ್ದಾರೆ.

‘ಸಲಾರ್​ನಲ್ಲಿ ಯಶ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’; ಬಾಯ್ತಪ್ಪಿ ಸತ್ಯ ಹೇಳಿದ್ರಾ ‘ಸಲಾರ್’ ಗಾಯಕಿ?
ಪ್ರಭಾಸ್​-ಯಶ್
Follow us
|

Updated on: Dec 13, 2023 | 9:54 AM

‘ಸಲಾರ್’ ಸಿನಿಮಾಗೂ ‘ಕೆಜಿಎಫ್ 2’ (KGF 2) ಚಿತ್ರಕ್ಕೂ ಲಿಂಕ್ ಇದೆ ಎಂಬ ಮಾತು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಆದರೆ, ಈವರೆಗೆ ಇದಕ್ಕೆ ಉತ್ತರ ಸಿಕ್ಕಿಲ್ಲ. ಟ್ರೇಲರ್, ಟೀಸರ್​ನಲ್ಲಿ ಈ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ತಂಡದವರು ಈ ಬಗ್ಗೆ ಮೌನ ವಹಿಸಿದ್ದಾರೆ. ಈಗ ‘ಸಲಾರ್’ ಸಿನಿಮಾದಲ್ಲಿ ಸಾಂಗ್ ಒಂದನ್ನು ಹಾಡಿರುವ ತೀರ್ಥಾ ಸುಭಾಷ್ ಅವರು ಬಾಯ್ತಪ್ಪಿ ಒಂದು ದೊಡ್ಡ ಸತ್ಯ ರಿವೀಲ್ ಮಾಡಿದ್ದಾರೆ. ಅವರ ಸಂದರ್ಶನ ಸಾಕಷ್ಟು ಚರ್ಚೆ ಆಗುತ್ತಿದೆ.

ಸದ್ಯ ಭಾರತದಲ್ಲಿ ಸಿನಿಮಾ ಯೂನಿವರ್ಸ್​ಗಳು ಸಿದ್ಧಗೊಂಡಿವೆ. ಅಂದರೆ, ಒಂದು ನಿರ್ಮಾಣ ಸಂಸ್ಥೆ ಅಥವಾ ನಿರ್ದೇಶಕನ ಸಿನಿಮಾಗಳಿಗೆ, ಕಥೆಗೆ ಲಿಂಕ್ ಇರುತ್ತದೆ. ಒಂದು ಸಿನಿಮಾದಲ್ಲಿ ಬಂದ ಪಾತ್ರಗಳು ಮತ್ತೊಂದು ಸಿನಿಮಾದಲ್ಲಿ ಬರುತ್ತವೆ. ‘ಸಲಾರ್’ ಪ್ರಶಾಂತ್ ನೀಲ್ ಯೂನಿವರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ, ಇದಕ್ಕೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ತಂಡದವರು ಈ ವಿಚಾರದಲ್ಲಿ ಕುತೂಹಲ ಕಾಪಾಡಿಕೊಂಡಿದ್ದಾರೆ. ತೀರ್ಥಾ ಸುಭಾಷ್ ಅವರು ಈ ವಿಚಾರದಲ್ಲಿ ನಿಜ ಹೇಳಿದ್ದಾರೆ.

ತೀರ್ಥಾ ಅವರು ಮೂಲತಃ ಕೇರಳದವರು. ಅವರು ಇತ್ತೀಚೆಗೆ ಸಿಂಗಿಂಗ್ ರಿಯಾಲಿಟಿ ಶೋನಲ್ಲಿ ಗೆದ್ದಿದ್ದಾರೆ. ಈ ಖುಷಿಯನ್ನು ಅವರು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಅವರು ‘ಸಲಾರ್’ ಚಿತ್ರದಲ್ಲಿ ಹಾಡೊಂದನ್ನು ಹಾಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಪ್ರಭಾಸ್ ಅಂಕಲ್, ಪೃಥ್ವಿರಾಜ್ ಅಂಕಲ್, ಯಶ್ ಅಂಕಲ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’ ಎಂದಿದ್ದಾರೆ. ಅವರ ಮಾತು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ನಂತರ ಇದಕ್ಕೆ ತೀರ್ಥಾ ಮತ್ತೊಂದು ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ನಾನು ಕೆಜಿಎಫ್ ಸಿನಿಮಾವನ್ನು ಹಲವು ಬಾರಿ ನೋಡಿದ್ದೇನೆ. ಕೆಜಿಎಫ್ ತಂಡದ ಮ್ಯೂಸಿಕ್ ಡೈರೆಕ್ಟರ್ ಸಲಾರ್​ಗೂ ಕೆಲಸ ಮಾಡಿದ್ದಾರೆ ಎಂದು ನನ್ನ ತಂದೆ ಹೇಳಿದ್ದರು. ಹಾಗಾಗಿ ನನ್ನ ಮನಸ್ಸಿನಲ್ಲಿ ಯಶ್ ಅಂಕಲ್ ಕೂಡ ಸಲಾರ್​ ಚಿತ್ರದಲ್ಲಿ ಇರ್ತಾರೆ ಎಂದು ಭಾವಿಸಿದ್ದೆ. ಆ ಊಹೆಯಲ್ಲಿಯೇ ನಾನು ಅವನ ಹೆಸರನ್ನು ಹೇಳಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಡಂಕಿ’ ಎದುರು ‘ಸಲಾರ್’ ಬಿಡುಗಡೆ ಏಕೆ, ಶಾರುಖ್ ಮೇಲೆ ಹೊಂಬಾಳೆಗೆ ಏಕೀ ಸಿಟ್ಟು? ವಿಜಯ್ ಕಿರಗಂದೂರು ಹೇಳಿದ್ದು ಹೀಗೆ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್