AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​ನಲ್ಲಿ ಯಶ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’; ಬಾಯ್ತಪ್ಪಿ ಸತ್ಯ ಹೇಳಿದ್ರಾ ‘ಸಲಾರ್’ ಗಾಯಕಿ?

‘ಸಲಾರ್’ ಪ್ರಶಾಂತ್ ನೀಲ್ ಯೂನಿವರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ, ಇದಕ್ಕೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ತಂಡದವರು ಈ ವಿಚಾರದಲ್ಲಿ ಕುತೂಹಲ ಕಾಪಾಡಿಕೊಂಡಿದ್ದಾರೆ. ತೀರ್ಥಾ ಸುಭಾಷ್ ಅವರು ಈ ವಿಚಾರದಲ್ಲಿ ನಿಜ ಹೇಳಿದ್ದಾರೆ.

‘ಸಲಾರ್​ನಲ್ಲಿ ಯಶ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’; ಬಾಯ್ತಪ್ಪಿ ಸತ್ಯ ಹೇಳಿದ್ರಾ ‘ಸಲಾರ್’ ಗಾಯಕಿ?
ಪ್ರಭಾಸ್​-ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Dec 13, 2023 | 9:54 AM

‘ಸಲಾರ್’ ಸಿನಿಮಾಗೂ ‘ಕೆಜಿಎಫ್ 2’ (KGF 2) ಚಿತ್ರಕ್ಕೂ ಲಿಂಕ್ ಇದೆ ಎಂಬ ಮಾತು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಆದರೆ, ಈವರೆಗೆ ಇದಕ್ಕೆ ಉತ್ತರ ಸಿಕ್ಕಿಲ್ಲ. ಟ್ರೇಲರ್, ಟೀಸರ್​ನಲ್ಲಿ ಈ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ತಂಡದವರು ಈ ಬಗ್ಗೆ ಮೌನ ವಹಿಸಿದ್ದಾರೆ. ಈಗ ‘ಸಲಾರ್’ ಸಿನಿಮಾದಲ್ಲಿ ಸಾಂಗ್ ಒಂದನ್ನು ಹಾಡಿರುವ ತೀರ್ಥಾ ಸುಭಾಷ್ ಅವರು ಬಾಯ್ತಪ್ಪಿ ಒಂದು ದೊಡ್ಡ ಸತ್ಯ ರಿವೀಲ್ ಮಾಡಿದ್ದಾರೆ. ಅವರ ಸಂದರ್ಶನ ಸಾಕಷ್ಟು ಚರ್ಚೆ ಆಗುತ್ತಿದೆ.

ಸದ್ಯ ಭಾರತದಲ್ಲಿ ಸಿನಿಮಾ ಯೂನಿವರ್ಸ್​ಗಳು ಸಿದ್ಧಗೊಂಡಿವೆ. ಅಂದರೆ, ಒಂದು ನಿರ್ಮಾಣ ಸಂಸ್ಥೆ ಅಥವಾ ನಿರ್ದೇಶಕನ ಸಿನಿಮಾಗಳಿಗೆ, ಕಥೆಗೆ ಲಿಂಕ್ ಇರುತ್ತದೆ. ಒಂದು ಸಿನಿಮಾದಲ್ಲಿ ಬಂದ ಪಾತ್ರಗಳು ಮತ್ತೊಂದು ಸಿನಿಮಾದಲ್ಲಿ ಬರುತ್ತವೆ. ‘ಸಲಾರ್’ ಪ್ರಶಾಂತ್ ನೀಲ್ ಯೂನಿವರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ, ಇದಕ್ಕೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ತಂಡದವರು ಈ ವಿಚಾರದಲ್ಲಿ ಕುತೂಹಲ ಕಾಪಾಡಿಕೊಂಡಿದ್ದಾರೆ. ತೀರ್ಥಾ ಸುಭಾಷ್ ಅವರು ಈ ವಿಚಾರದಲ್ಲಿ ನಿಜ ಹೇಳಿದ್ದಾರೆ.

ತೀರ್ಥಾ ಅವರು ಮೂಲತಃ ಕೇರಳದವರು. ಅವರು ಇತ್ತೀಚೆಗೆ ಸಿಂಗಿಂಗ್ ರಿಯಾಲಿಟಿ ಶೋನಲ್ಲಿ ಗೆದ್ದಿದ್ದಾರೆ. ಈ ಖುಷಿಯನ್ನು ಅವರು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಅವರು ‘ಸಲಾರ್’ ಚಿತ್ರದಲ್ಲಿ ಹಾಡೊಂದನ್ನು ಹಾಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಪ್ರಭಾಸ್ ಅಂಕಲ್, ಪೃಥ್ವಿರಾಜ್ ಅಂಕಲ್, ಯಶ್ ಅಂಕಲ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’ ಎಂದಿದ್ದಾರೆ. ಅವರ ಮಾತು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ನಂತರ ಇದಕ್ಕೆ ತೀರ್ಥಾ ಮತ್ತೊಂದು ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ನಾನು ಕೆಜಿಎಫ್ ಸಿನಿಮಾವನ್ನು ಹಲವು ಬಾರಿ ನೋಡಿದ್ದೇನೆ. ಕೆಜಿಎಫ್ ತಂಡದ ಮ್ಯೂಸಿಕ್ ಡೈರೆಕ್ಟರ್ ಸಲಾರ್​ಗೂ ಕೆಲಸ ಮಾಡಿದ್ದಾರೆ ಎಂದು ನನ್ನ ತಂದೆ ಹೇಳಿದ್ದರು. ಹಾಗಾಗಿ ನನ್ನ ಮನಸ್ಸಿನಲ್ಲಿ ಯಶ್ ಅಂಕಲ್ ಕೂಡ ಸಲಾರ್​ ಚಿತ್ರದಲ್ಲಿ ಇರ್ತಾರೆ ಎಂದು ಭಾವಿಸಿದ್ದೆ. ಆ ಊಹೆಯಲ್ಲಿಯೇ ನಾನು ಅವನ ಹೆಸರನ್ನು ಹೇಳಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಡಂಕಿ’ ಎದುರು ‘ಸಲಾರ್’ ಬಿಡುಗಡೆ ಏಕೆ, ಶಾರುಖ್ ಮೇಲೆ ಹೊಂಬಾಳೆಗೆ ಏಕೀ ಸಿಟ್ಟು? ವಿಜಯ್ ಕಿರಗಂದೂರು ಹೇಳಿದ್ದು ಹೀಗೆ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು