AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಚಿತ್ರರಂಗಕ್ಕೆ ಅನರ್ಘ್ಯ ರತ್ನ ಹುಡುಕಿ ಕೊಟ್ಟ ನಿರ್ಮಾಪಕಿ, ನಟಿ ನಿಧನ

Producer C Krishnaveni: ತೆಲುಗು ಚಿತ್ರರಂಗದ ಲೆಜೆಂಡರಿ ನಟ, ಮಾಜಿ ಸಿಎಂ ಎನ್​ಟಿಆರ್ ಅವರನ್ನು ಸಿನಿಮಾ ರಂಗಕ್ಕೆ ಪರಿಚಯ ಮಾಡಿಸಿದ ನಿರ್ಮಾಪಕಿ ಸಿ ಕೃಷ್ಣವೇಣಿ ಇಂದು ನಿಧನ ಹೊಂದಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು. ಎನ್​ಟಿಆರ್ ಮಾತ್ರವೇ ಅಲ್ಲದೆ ಘಂಟಸಾಲ, ರಾಘವೇಂದ್ರ ರಾವ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಶ್ರೇಯ ಇವರದ್ದೇ.

ಭಾರತೀಯ ಚಿತ್ರರಂಗಕ್ಕೆ ಅನರ್ಘ್ಯ ರತ್ನ ಹುಡುಕಿ ಕೊಟ್ಟ ನಿರ್ಮಾಪಕಿ, ನಟಿ ನಿಧನ
Krishnaveni
ಮಂಜುನಾಥ ಸಿ.
|

Updated on: Feb 16, 2025 | 10:32 PM

Share

ಭಾರತ ಚಿತ್ರರಂಗವನ್ನು ಕಟ್ಟಿದ ನಟರುಗಳ ಸಾಲಿನಲ್ಲಿ ಕೇಳಿ ಬರುವ ಹೆಸರುಗಳಲ್ಲಿ ಒಂದು ಎನ್​ಟಿಆರ್. ನಂದಮೂರಿ ತಾರಕ ರಾಮಾರಾವ್ ಅವರು ತೆಲುಗು ಚಿತ್ರರಂಗದ ಧೀಮಂತ ನಟ ಮಾತ್ರವೇ ಅಲ್ಲದೆ ರಾಜಕೀಯದಲ್ಲಿಯೂ ಛಾಪು ಮೂಡಿಸಿದವರು. ಸ್ವಂತ ರಾಜಕೀಯ ಪಕ್ಷ ಕಟ್ಟಿ ಅವಿಭಜಿತ ಆಂಧ್ರ ಪ್ರದೇಶದ ಸಿಎಂ ಆಗಿ ಜನಪಾಲನೆ ಮಾಡಿದವರು. ಇಂಥಹಾ ಅನರ್ಘ್ಯ ರತ್ನವನ್ನು ಹುಡುಕಿ ಸಿನಿಮಾ ಪ್ರೇಮಿಗಳಿಗೆ ಪರಿಚಯಿಸಿದ ನಿರ್ಮಾಪಕಿ ಇಂದು (ಫೆಬ್ರವರಿ 16) ನಿಧನರಾಗಿದ್ದಾರೆ.

ತೆಲುಗು ಚಿತ್ರರಂಗದ ಜನಪ್ರಿಯ ನಟಿ, ನಿರ್ಮಾಪಕಿ ಸಿ ಕೃಷ್ಣವೇಣಿ ತಮ್ಮ 102ನೇ ವಯಸ್ಸಿನಲ್ಲಿ ಇಂದು (ಫೆಬ್ರವರಿ 16) ನಿಧನ ಹೊಂದಿದ್ದಾರೆ. ಅವರ ಅಗಲಿಕೆಗೆ ಚಿತ್ರರಂಗದ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. 1938 ರಲ್ಲಿ ನಟನೆ ಆರಂಭಿಸಿದ ಕೃಷ್ಣವೇಣಿ ಮೊದಲು ನಟಿಸಿದ್ದು ‘ಕಚ ದೇವಯಾನಿ’ ಸಿನಿಮಾದಲ್ಲಿ. ನಟಿಯಾಗಿರುವ ಜೊತೆಗೆ ನಿರ್ಮಾಪಕಿಯೂ ಆಗಿದ್ದ ಸಿ ಕೃಷ್ಣವೇಣಿ, ತೆಲುಗು ಚಿತ್ರರಂಗದ ದಿಗ್ಗಜ ನಟ ಎನ್​ಟಿಆರ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಎನ್​ಟಿಆರ್ ಅವರ ಮೊದಲ ಸಿನಿಮಾ ‘ಮನ ದೇಸಂ’ ನ ನಿರ್ಮಾಪಕಿ ಆಗಿದ್ದ ಕೃಷ್ಣವೇಣಿ ಆ ಸಿನಿಮಾದಲ್ಲಿ ನಟಿಸಿದ್ದರು ಸಹ.

ಕೃಷ್ಣವೇಣಿಯ ಕುಟುಂಬದವರು ಸ್ಟುಡಿಯೋ ಸಹ ಹೊಂದಿದ್ದರು. ಹಾಗಾಗಿ ಕೆಲವು ಸಿನಿಮಾಗಳನ್ನು ಕೃಷ್ಣವೇಣಿ ನಿರ್ಮಾಣ ಮಾಡಿದ್ದರು. ಎನ್​ಟಿಆರ್​ ನಟನೆಯ ಮೊದಲ ಸಿನಿಮಾ ನಿರ್ಮಾಣ ಮಾಡಿದ ಜೊತೆಗೆ, ದಿಗ್ಗಜ ಗಾಯಕ ಘಂಟಸಾಲ ಅವರಿಗೂ ಮೊದಲ ಬಾರಿಗೆ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದು ಇದೇ ಕೃಷ್ಣವೇಣಿಯವರು. ತೆಲುಗು ಚಿತ್ರರಂಗದ ಲೆಜೆಂಡರಿ ನಿರ್ದೇಶಕ ರಾಘವೇಂದ್ರ ರಾವ್ ಅವರಿಗೆ ಮೊದಲ ಅವಕಾಶವನ್ನು ಕೊಟ್ಟಿದ್ದು ಇವರೇ. ನಿರ್ಮಾಪಕಿಯಾಗಿ 12 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಕೃಷ್ಣವೇಣಿ, 40 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು ಒಳ್ಳೆಯ ಹಾಡುಗಾರ್ತಿ ಸಹ ಆಗಿದ್ದರು.

ಇದನ್ನೂ ಓದಿ:ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ

ಕೃಷ್ಣವೇಣಿಯವರ ನಿಧನಕ್ಕೆ ತೆಲುಗು ಚಿತ್ರರಂಗ ಮಾತ್ರವೇ ಅಲ್ಲದೆ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ರಾಜಕಾರಣಿಗಳು ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. ನಟ, ಆಂಧ್ರ ಉಪಮುಖ್ಯ ಮಂತ್ರಿ ಪವನ್ ಕಲ್ಯಾಣ್ ಸಹ ಟ್ವೀಟ್ ಮಾಡಿದ್ದು, ‘ಕೃಷ್ಣವೇಣಿ ಅವರು ಕಾಲವಾದರೆಂಬ ಸುದ್ದಿ ತಿಳಿದು ಬೇಸರವಾಯ್ತು. ಕೃಷ್ಣವೇಣಿಯವರು ತೆಲುಗು ಚಿತ್ರರಂಗದ ಮೊದಲ ನಿರ್ಮಾಪಕಿ. ನಟಿ, ಗಾಯಕಿ, ನಿರ್ಮಾಪಕಿ, ಸ್ಟುಡಿಯೋ ಮುಖ್ಯಸ್ಥೆಯಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಶ್ರೀ ಎನ್​ಟಿಆರ್, ಘಂಟಸಾಲ, ರಾಘವೇಂದ್ರ ರಾವ್ ಅಂಥಹಾ ದಿಗ್ಗಜರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ ಅವರಿಗೆ ಸಲ್ಲಬೇಕು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ